Don't Miss!
- News ಸಿದ್ದರಾಮಯ್ಯರು ಸಿಎಂ ಆದಾಗ ವಿಜೃಂಭಿಸುವ ದೇಶದ್ರೋಹಿಗಳು: ಶೋಭಾ ಕರಂದ್ಲಾಜೆ ಹೇಳಿದ್ದೇನು?
- Finance Zero Shadow Day: ಬೆಂಗಳೂರಿನಲ್ಲಿ ಇಂದು ಪ್ರಕೃತಿಯ ಅಚ್ಚರಿ
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿವೈಸಿಂಗ್ ಕಮಿಟಿ ಬಾಗಿಲು ತಟ್ಟಿದ 'ಅಯೋಧ್ಯಪುರ'
ಅಯೋಧ್ಯೆ ಎಂದ ಮೇಲೆ ಎಲ್ಲರ ಹುಬ್ಬೇರುವುದು ಗ್ಯಾರಂಟಿ. ಈ ಕನ್ನಡ ಚಿತ್ರದಲ್ಲಿ ನಿರ್ಮಾಪಕ ಮಧುಸೂದನ್ ಹಾಗೂ ತಂಡ ಹಿಂದೂ ಹುಡುಗ ಹಾಗೂ ಮುಸ್ಲಿಂ ಹುಡುಗಿಯ ಅಂತಾರ್ಜಾತೀಯ ವಿವಾಹವನ್ನು ಕೇಂದ್ರವಾಗಿಟ್ಟುಕೊಂಡೇ ಕಥೆ ಹೆಣೆದಿದ್ದಾರೆ. ಚಿತ್ರದ ಹೆಸರು 'ಕರ್ನಾಟಕ ಅಯೋಧ್ಯೆಪುರಂ'.
ಇತ್ತೀಚೆಗೆ ಈ ಚಿತ್ರ ಪ್ರಾದೇಶಿಕ ಸೆನ್ಸಾರ್ ಮಂಡಳಿ ಮುಂದೆ ಬಂದಿತ್ತು. ಚಿತ್ರಕ್ಕೆ ಎ ಸರ್ಟಿಫಿಕೇಟ್ ನೀಡಲು ಹಾಗೂ ಕೆಲವು ಕಡೆ ಕತ್ತರಿ ಹಾಕಲು ಸೆನ್ಸಾರ್ ಮಂಡಳಿ ಸೂಚಿಸಿದೆ. ಈ ಬದಲಾವಣೆಗಳನ್ನು ಒಪ್ಪದ ಚಿತ್ರದ ನಿರ್ದೇಶಕ ವಿ.ಲವ ಹಾಗೂ ನಿರ್ಮಾಪಕರು ರಿವೈಸಿಂಗ್ ಕಮಿಟಿ ಮೆಟ್ಟಿಲೇರಲು ನಿರ್ಧರಿಸಿದ್ದಾರೆ.
ಹಿಂದೂ ಹುಡುಗನಾಗಿ ರಾಕೇಶ್ ಹಾಗೂ ಮುಸ್ಲಿಂ ಹುಡುಗಿಯ ಪಾತ್ರದಲ್ಲಿ ನಯನಾ ಅಭಿನಯಿಸುತ್ತಿರುವ ಈ ಚಿತ್ರ ಅಂತಿಮ ಹಂತದ ಚಿತ್ರೀಕರಣವನ್ನು ಈ ತಿಂಗಳ 15ರಿಂದ ಪ್ರಾರಂಭಿಸಲಿದೆ. ಐದು ಹಾಡು ಹಾಗೂ 2 ಸಾಹಸ ಸನ್ನಿವೇಶವನ್ನು ಈ ಹಂತದಲ್ಲಿ ಚಿತ್ರೀಕರಣ ಮಾಡುವುದಾಗಿ ನಿರ್ದೇಶಕ ವಿ.ಲವಾ ತಿಳಿಸಿದ್ದಾರೆ.
ಸಾಗರ್ ನಾಗಭೂಷಣ್ ಅವರ ಸಂಗೀತ, ನಾಗರಾಜ್ ಅವರ ಛಾಯಾಗ್ರಹಣ, ಅಲ್ಟಿಮೇಟ್ ಶಿವು ಅವರ ಸಾಹಸ ಸಂಯೋಜನೆ ಈ ಚಿತ್ರಕ್ಕಿದೆ. ತಾರಾಗಣದಲ್ಲಿ ಅಚ್ಯುತ ರಾವ್, ಸ್ವಸ್ತಿಕ್ ಶಂಕರ್, ಬುಲೆಟ್ ಪ್ರಕಾಶ್, ಮೋಹನ್ ಜುನೇಜಾ, ಅಕ್ಷಯ್, ಉದಯ ಟಿ.ವಿ. ಕಾಮಿಡಿ ಹರೀಶ್ ಹಾಗೂ ಇನ್ನಿತರರು ಇದ್ದಾರೆ. (ಒನ್ಇಂಡಿಯಾ ಕನ್ನಡ)