Don't Miss!
- News ಬಂಡೀಪುರ: ಹುಲಿ ದಾಳಿಯಿಂದ ಮರಿಯಾನೆ ಸಾವು, ನಡುರಸ್ತೆಯಲ್ಲೇ ಮುಗಿಲು ಮುಟ್ಟಿದ ತಾಯಿಯ ಆಕ್ರಂದನ, ವಿಡಿಯೋ ವೈರಲ್
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
CCL T10: ಪಂಜಾಬ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಕರ್ನಾಟಕ ಬುಲ್ಡೋಜರ್ಸ್
ಸಿಸಿಎಲ್ ಟಿ 10 ಲೀಗ್ ನ ಮೂರನೇ ಪಂದ್ಯದಲ್ಲಿ ಪಂಜಾಬ್ ದಿ ಶೇರ್ ತಂಡದ ವಿರುದ್ಧ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಜಯ ದಾಖಲಿಸಿದೆ.
ಮೊದಲು ಬ್ಯಾಟ್ ಮಾಡಿದ ಪಂಜಾಬ್ ತಂಡ ಹತ್ತು ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 84 ರನ್ ಕಲೆ ಹಾಕಿತ್ತು. 85 ರನ್ ಗಳ ಗುರಿ ಬೆನ್ನತ್ತಿದ ಕರ್ನಾಟಕ ತಂಡ ಬುಲ್ಡೋಜರ್ಸ್ ತಂಡ ಪ್ರದೀಪ್ ಅವರ ಆಕರ್ಷಕ ಆಟದ ನೆರವಿನಿಂದ 5.4 ಒವರ್ ಗಳಲ್ಲಿಯೇ ಗುರಿ ಮುಟ್ಟಿ ಜಯ ಕಂಡಿತು.
'ಕರ್ನಾಟಕ ಬುಲ್ಡೋಜರ್ಸ್' ತಂಡದ ಹೊಸ ಕ್ಯಾಪ್ಟನ್ ಗೆ ಶುಭ ಕೋರಿದ ಸುದೀಪ್
ಕರ್ನಾಟಕದ ಪರ 18 ಎಸೆತಗಳಲ್ಲಿ 34 ಬಾರಿಸಿದ ಪ್ರದೀಪ್ ಪಂದ್ಯ ಪರುಷೋತ್ತಮ ಪ್ರಶಸ್ತಿ ಪಡೆದುಕೊಂಡರು. ಪ್ರದೀಪ್ ಗೆ ಸಾಥ್ ನೀಡಿದ ಕೃಷ್ಣ 14 ಬಾರಿಸಿ ಔಟ್ ಆದ್ರೆ, ನಂತರ ಬಂದ ರಾಜೀವ್ 1 ಗಳಿಸಿ ನಾಟ್ ಔಟ್ ಆಗಿ ಉಳಿದರು.
ಅದಕ್ಕೂ ಮುಂಚೆ ಬೌಲಿಂಗ್ ಮಾಡಿದ್ದ ಕರ್ನಾಟಕ ತಂಡದ ಪರ ಕಾರ್ತಿಕ್ ಜಯರಾಂ, ಪ್ರಸನ್ನ, ಚಂದನ್ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.
CCL ಟೂರ್ನಿಗೆ ಮುಹೂರ್ತ ಫಿಕ್ಸ್: ಕರ್ನಾಟಕ ತಂಡದಲ್ಲಿ ಮಹತ್ವದ ಬದಲಾವಣೆ?
ಸೋನು ಸೂದ್ ನಾಯಕತ್ವದ ಪಂಜಾಬ್ ತಂಡ 37 ಹೆಚ್ಚುವರಿ ರನ್ ಗಳನ್ನ ನೀಡಿ ಸಲುಭವಾಗಿ ಕರ್ನಾಟಕ ತಂಡಕ್ಕೆ ಶರಣಾಯಿತು. ನಾಯಕತ್ವ ತೊರೆದು ಸುದೀಪ್ ಆಟಗಾರನಾಗಿ ಮೊದಲ ಪಂದ್ಯವಾಡಿದ್ದು ವಿಶೇಷ. ಈ ಪಂದ್ಯದಲ್ಲಿ ಗಣೇಶ್ ಮತ್ತು ಸುದೀಪ್ ತಲಾ ಒಂದೊಂದು ಓವರ್ ಬೌಲಿಂಗ್ ಮಾಡಿದರು.
ಮುಂದಿನ ಪಂದ್ಯದಲ್ಲಿ ತೆಲುಗು ವಾರಿಯರ್ಸ್ ತಂಡದ ಎದುರು ಇಂದು (4pm) ತನ್ನ ಎರಡನೇ ಪಂದ್ಯವನ್ನ ಕರ್ನಾಟಕ ತಂಡ ಆಡಲಿದೆ. ಅದಾದ ಬಳಿಕ 8pm ಗಂಟೆಗೆ ಮೂರನೇ ಪಂದ್ಯವನ್ನ ಬೆಂಗಾಲ್ ಟೈಗರ್ಸ್ ವಿರುದ್ಧ ಆಡಲಿದೆ.