Don't Miss!
- Automobiles ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
- News SSLC Result 2024: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ಯಾವಾಗ? ಪರಿಶೀಲಿಸುವುದೇಗೆ?-ಮಾಹಿತಿ, ವಿವರ
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
CCL T10: ಪಂಜಾಬ್ ವಿರುದ್ಧ ಭರ್ಜರಿ ಜಯ ಸಾಧಿಸಿದ ಕರ್ನಾಟಕ ಬುಲ್ಡೋಜರ್ಸ್
ಸಿಸಿಎಲ್ ಟಿ 10 ಲೀಗ್ ನ ಮೂರನೇ ಪಂದ್ಯದಲ್ಲಿ ಪಂಜಾಬ್ ದಿ ಶೇರ್ ತಂಡದ ವಿರುದ್ಧ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಜಯ ದಾಖಲಿಸಿದೆ.
ಮೊದಲು ಬ್ಯಾಟ್ ಮಾಡಿದ ಪಂಜಾಬ್ ತಂಡ ಹತ್ತು ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 84 ರನ್ ಕಲೆ ಹಾಕಿತ್ತು. 85 ರನ್ ಗಳ ಗುರಿ ಬೆನ್ನತ್ತಿದ ಕರ್ನಾಟಕ ತಂಡ ಬುಲ್ಡೋಜರ್ಸ್ ತಂಡ ಪ್ರದೀಪ್ ಅವರ ಆಕರ್ಷಕ ಆಟದ ನೆರವಿನಿಂದ 5.4 ಒವರ್ ಗಳಲ್ಲಿಯೇ ಗುರಿ ಮುಟ್ಟಿ ಜಯ ಕಂಡಿತು.
'ಕರ್ನಾಟಕ ಬುಲ್ಡೋಜರ್ಸ್' ತಂಡದ ಹೊಸ ಕ್ಯಾಪ್ಟನ್ ಗೆ ಶುಭ ಕೋರಿದ ಸುದೀಪ್
ಕರ್ನಾಟಕದ ಪರ 18 ಎಸೆತಗಳಲ್ಲಿ 34 ಬಾರಿಸಿದ ಪ್ರದೀಪ್ ಪಂದ್ಯ ಪರುಷೋತ್ತಮ ಪ್ರಶಸ್ತಿ ಪಡೆದುಕೊಂಡರು. ಪ್ರದೀಪ್ ಗೆ ಸಾಥ್ ನೀಡಿದ ಕೃಷ್ಣ 14 ಬಾರಿಸಿ ಔಟ್ ಆದ್ರೆ, ನಂತರ ಬಂದ ರಾಜೀವ್ 1 ಗಳಿಸಿ ನಾಟ್ ಔಟ್ ಆಗಿ ಉಳಿದರು.
ಅದಕ್ಕೂ ಮುಂಚೆ ಬೌಲಿಂಗ್ ಮಾಡಿದ್ದ ಕರ್ನಾಟಕ ತಂಡದ ಪರ ಕಾರ್ತಿಕ್ ಜಯರಾಂ, ಪ್ರಸನ್ನ, ಚಂದನ್ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.
CCL ಟೂರ್ನಿಗೆ ಮುಹೂರ್ತ ಫಿಕ್ಸ್: ಕರ್ನಾಟಕ ತಂಡದಲ್ಲಿ ಮಹತ್ವದ ಬದಲಾವಣೆ?
ಸೋನು ಸೂದ್ ನಾಯಕತ್ವದ ಪಂಜಾಬ್ ತಂಡ 37 ಹೆಚ್ಚುವರಿ ರನ್ ಗಳನ್ನ ನೀಡಿ ಸಲುಭವಾಗಿ ಕರ್ನಾಟಕ ತಂಡಕ್ಕೆ ಶರಣಾಯಿತು. ನಾಯಕತ್ವ ತೊರೆದು ಸುದೀಪ್ ಆಟಗಾರನಾಗಿ ಮೊದಲ ಪಂದ್ಯವಾಡಿದ್ದು ವಿಶೇಷ. ಈ ಪಂದ್ಯದಲ್ಲಿ ಗಣೇಶ್ ಮತ್ತು ಸುದೀಪ್ ತಲಾ ಒಂದೊಂದು ಓವರ್ ಬೌಲಿಂಗ್ ಮಾಡಿದರು.
ಮುಂದಿನ ಪಂದ್ಯದಲ್ಲಿ ತೆಲುಗು ವಾರಿಯರ್ಸ್ ತಂಡದ ಎದುರು ಇಂದು (4pm) ತನ್ನ ಎರಡನೇ ಪಂದ್ಯವನ್ನ ಕರ್ನಾಟಕ ತಂಡ ಆಡಲಿದೆ. ಅದಾದ ಬಳಿಕ 8pm ಗಂಟೆಗೆ ಮೂರನೇ ಪಂದ್ಯವನ್ನ ಬೆಂಗಾಲ್ ಟೈಗರ್ಸ್ ವಿರುದ್ಧ ಆಡಲಿದೆ.