Don't Miss!
- News ನೇಹಾ ಹಿರೇಮಠ್ ಹತ್ಯೆ; ಕಾಣದ ಕೈಗಳಿಂದ ಕೊಲೆ ಆರೋಪಿ ರಕ್ಷಣೆ ಎಂದ ಜೆಡಿಎಸ್
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಆಯೋಜನೆ: ನಿಯೋಗದಿಂದ ಸಿಎಂ ಭೇಟಿ
ಹದಿಮೂರನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಆಯೋಜಿಸಲು ಅನುಮತಿ ನೀಡುವಂತೆ ಕೋರಿ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್ ಸೇರಿ ಹಲವು ಪ್ರಮುಖರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.
ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಗಳತ್ತ ಸೆಳೆಯಲು 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಪೂರಕ ವಾತಾವರಣವನ್ನು ನಿರ್ಮಿಸಲಿದೆ. ಆದಕಾರಣ, 2021ರ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ ಸಿನಿಮೋತ್ಸವವನ್ನು ಆಯೋಜಿಸಲು ಅನುಮತಿ ನೀಡುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್ ಅವರ ನೇತೃತ್ವದ ನಿಯೋಗವು ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದು, ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಸತತ ಕಳೆದ 12 ವರ್ಷಗಳ ಕಾಲ ಯಶಸ್ಸನ್ನು ಕಂಡಿದೆ. ವಿಶ್ವದಲ್ಲಿ 5000 ಸ್ಥಳಗಳಲ್ಲಿ ಚಲನಚಿತ್ರೋತ್ಸವಗಳು ನಡೆಯುತ್ತವೆ. ಆದರೆ, ಅವುಗಳಲ್ಲಿ ಕೇವಲ 45 ಚಲನಚಿತ್ರೋತ್ಸವಗಳಿಗೆ ಅಂತರರಾಷ್ಟ್ರೀಯ ಮಾನ್ಯತೆ ದೊರೆತಿದೆ.
ಮಾನ್ಯತೆ ಗಳಿಸಲು ಚಿತ್ರೋತ್ಸವ ಆಯೋಜಿಸಲೇಬೇಕು
ಇದೀಗ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವಕ್ಕೆ ಅಂತರರಾಷ್ಟ್ರೀಯ ಮಾನ್ಯತೆ ದೊರೆಯುವ ಲಕ್ಷಣಗಳು ಗೋಚರಿಸುತ್ತಿವೆ. ಒಂದು ವೇಳೆ ಮಾನ್ಯತೆ ದೊರೆತಲ್ಲಿ ಇದು ವಿಶ್ವದಲ್ಲಿ 46ನೇ ಮಾನ್ಯತೆ ಪಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಎಂಬ ಹೆಗ್ಗಳಿಕೆಗೆ ಪಾತ್ರವಾಗುತ್ತದೆ. ಆದ್ದರಿಂದ 13 ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವವನ್ನು ಆಯೋಜಿಸಲು ಸಮ್ಮತಿ ನೀಡುವಂತೆಯೂ ಹಾಗೂ ಅದಕ್ಕೆ ಅಗತ್ಯ ಅನುದಾನವನ್ನು ದೊರಕಿಸಿಕೊಡುವಂತೆಯೂ ನಿಯೋಗವು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು.
ಭಾರತದಲ್ಲಿ ಕೇವಲ ನಾಲ್ಕು ಸ್ಥಳಗಳಲ್ಲಿ ಚಿತ್ರೋತ್ಸವ
ಭಾರತದಲ್ಲಿ ಕೇವಲ ನಾಲ್ಕು ಸ್ಥಳಗಳಲ್ಲಿ ಚಲನಚಿತ್ರೋತ್ಸವಗಳು ನಡೆಯುತ್ತವೆ. ಗೋವಾದಲ್ಲಿ ಭಾರತ ಸರ್ಕಾರ ಚಲನಚಿತ್ರೋತ್ಸವವನ್ನು ಆಯೋಜಿಸುತ್ತದೆ. ಉಳಿದಂತೆ ಪಶ್ಚಿಮ ಬಂಗಾಳ, ಕರ್ನಾಟಕ ಮತ್ತು ಕೇರಳ ರಾಜ್ಯ ಸರ್ಕಾರಗಳು ಚಲನನಚಿತ್ರೋತ್ಸವಗಳನ್ನು ಆಯೋಜಿಸುತ್ತಿವೆ ಎಂಬ ಅಂಶವನ್ನು ನಿಯೋಗವು ಮುಖ್ಯಮಂತ್ರಿಯವರ ಗಮನಕ್ಕೆ ತಂದಿತು.
ನಿಯೋಗದಲ್ಲಿದ್ದ ಪ್ರಮುಖರು
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಡಿ.ಆರ್.ಜಯರಾಜ್, ಕಲಾನಿರ್ದೇಶಕ ಎನ್. ವಿದ್ಯಾಶಂಕರ್, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಹಾಗೂ ಹೆಸರಾಂತ ಚಿತ್ರನಟಿ ಶ್ರೀಮತಿ ಶೃತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ, ಹಿರಿಯ ಪತ್ರಕರ್ತ ಮತ್ತು ಚಿತ್ರ ವಿಮರ್ಶಕ ಮುರಳೀಧರ್ ಖಜಾನೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ರಿಜಿಸ್ಟ್ರಾರ್ ಜಿ.ಹಿಮಂತರಾಜು ಅವರು ಈ ನಿಯೋಗದಲ್ಲಿದ್ದರು.
ಫೆಬ್ರವರಿ 26 ಕ್ಕೆ ಆರಂಭಗೊಂಡಿದ್ದ ಚಿತ್ರೋತ್ಸವ
2020 ರ ಫೆಬ್ರವರಿಯಲ್ಲಿ 12ನೇ ಬೆಂಗಳೂರು ಚಲನಚಿತ್ರೋತ್ಸವವು ಸಾಂಗವಾಗಿ ನೆರವೇರಿತು. ಯಡಿಯೂರಪ್ಪ ಅವರು ಉದ್ಘಾಟಿಸಿದ ಚಿತ್ರೋತ್ಸವವು ಫೆಬ್ರವರಿ 26 ಕ್ಕೆ ಪ್ರಾರಂಭಗೊಂಡು ಮಾರ್ಚ್ 4 ರ ವರೆಗೆ ನಡೆದಿತ್ತು. ಸುಮಾರು 200 ಕ್ಕೂ ಹೆಚ್ಚು ಸಿನಿಮಾಗಳು ಫಿಲ್ಮ್ ಫೆಸ್ಟ್ನಲ್ಲಿ ಪ್ರದರ್ಶನಗೊಂಡವು.