Don't Miss!
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಂದನವನದ ನಕ್ಷತ್ರ ಕೆಎಸ್ಎಲ್ ಸ್ವಾಮಿ ಅವರಿಗೆ ನುಡಿ-ನಮನ
ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ನವೆಂಬರ್ 5ರಂದು ಬೆಳಿಗ್ಗೆ 11-30 ಗಂಟೆಗೆ ಬೆಂಗಳೂರು ನಗರದ ಕುಮಾರ ಪಾರ್ಕ್ ರಸ್ತೆಯಲ್ಲಿರುವ ಗಾಂಧೀ ಭವನದಲ್ಲಿ ಕನ್ನಡದ ಹೆಸರಾಂತ ಚಿತ್ರ ನಿರ್ದೇಶಕ ಕಮ್ ನಟ ರವೀ (ಕೆಎಸ್ಎಲ್ ಸ್ವಾಮಿ) ಅವರ ಕುರಿತ ರವೀ ನಮನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ, ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಎಚ್. ಬಿ. ದಿನೇಶ್ ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಅವರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ್ ಅವರು ಭಾಗವಹಿಸಲಿದ್ದಾರೆ. [ಹಿರಿಯ ನಿರ್ದೇಶಕ ಕೆ.ಎಸ್.ಎಲ್.ಸ್ವಾಮಿ ವಿಧಿವಶ]
ಮುಖ್ಯ ಅತಿಥಿಗಳಾಗಿ ಹಿರಿಯ ಕಲಾವಿದರಾದ ನಟ-ನಿರ್ಮಾಪಕ-ನಿರ್ದೇಶಕ ದ್ವಾರಕೀಶ್, ನಟ ಎಸ್. ಶಿವರಾಂ, ಕೆಎಸ್ಎಲ್ ಸ್ವಾಮಿ ಪತ್ನಿ ಬಿ.ವಿ. ರಾಧಾ, ಎಚ್.ಜಿ. ಸೋಮಶೇಖರ್ ರಾವ್, ವಿಜಯಲಕ್ಷ್ಮೀ ಸಿಂಗ್, ಎಂ.ಎಸ್. ರಮೇಶ್, ಹಿರಿಯ ಚಲನಚಿತ್ರ ನಿರ್ದೇಶಕರಾದ ಎಸ್.ಕೆ. ಭಗವಾನ್, ಗಿರೀಶ್ ಕಾಸರವಳ್ಳಿ, ಸಿ.ವಿ. ಶಿವಶಂಕರ್, ರವಿ ಅವರ ಒಡನಾಡಿ ಕೃಪಾ, ಹಿರಿಯ ಪತ್ರಕರ್ತ ಗಂಗಾಧರ್ ಮೊದಲಿಯಾರ್ ಮುಂತಾದವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. [ಕೆ.ಎಸ್.ಎಲ್.ಸ್ವಾಮಿ ನಿಧನಕ್ಕೆ ಚಿತ್ರರಂಗದ ಗಣ್ಯರ ಕಂಬನಿ]