Don't Miss!
- Sports ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಪಾಕ್ ತಂಡದ ಮಾಜಿ ನಾಯಕಿ
- News Karnataka Lok Sabha Election 2024: ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧ!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಸ್ ನಾರಾಯಣ್-ಅನೂಪ್ ರೇವಣ್ಣ ಚಿತ್ರದ ಮುಹೂರ್ತ ಯಾವಾಗ?
ನಿರ್ದೇಶಕ ಕಲಾ ಸಾಮ್ರಾಟ್ ಎಸ್ ನಾರಾಯಣ್ ಅವರು 'ಡಿಕ್ಟೇಟರ್' ಕೈ ಬಿಟ್ಟು 'ಲಕ್ಷ್ಮಣ' ಖ್ಯಾತಿಯ ನಟ ಅನೂಪ್ ರೇವಣ್ಣ ಅವರಿಗೆ ಹೊಸ ಸಿನಿಮಾ ಮಾಡುತ್ತಿರುವ ಬಗ್ಗೆ ನಾವೇ ನಿಮಗೆ ಹೇಳಿದ್ವಿ ತಾನೆ.
ಇದೀಗ ಚಿತ್ರಕ್ಕೆ 'ಪಂಟ' ಎಂದು ಟೈಟಲ್ ಕೂಡ ಫಿಕ್ಸ್ ಮಾಡಲಾಗಿದ್ದು, ಈ ಚಿತ್ರಕ್ಕೆ ಅಸೋಸಿಯೇಟ್ ಆಗಿ ಎಸ್ ನಾರಾಯಣ್ ಅವರ ಮಗ ನಟ ಪಂಕಜ್ ಅವರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.[ವೆಂಕಟ್ ಜೊತೆ 'ಡಿಕ್ಟೇಟರ್' ಬಿಟ್ಟ ಎಸ್ ನಾರಾಯಣ್ ಮಾಡಿದ್ದೇನು?]
ಅಂದಹಾಗೆ ಎಸ್ ನಾರಾಯಣ್ ಅವರ ಎರಡನೇ ಮಗ ಪವನ್ ಕಾರ್ತಿಕ್ ಅವರು ತಂದೆಯ ಚಿತ್ರಗಳಿಗೆ ಪ್ರೊಡಕ್ಷನ್ ಕಂಟ್ರೋಲರ್ ಆಗಿ ಈಗಾಗಲೇ ಕೆಲಸ ಮಾಡುತ್ತಿದ್ದಾರೆ. ಇದೀಗ ಎಸ್ ನಾರಾಯಣ್ ಅವರ ದೊಡ್ಡ ಮಗ ನಟ ಪಂಕಜ್ ಅವರು ಕೂಡ ತಂದೆಯ ಸಹಾಯಕ್ಕೆ ನಿಂತಿದ್ದಾರೆ.[ವೆಂಕಟ್ ವಿರುದ್ಧ ಚಾಟಿ ಬೀಸಿದ ನಿರ್ದೇಶಕ ಎಸ್ ನಾರಾಯಣ್]
ನಟ ಅನೂಪ್ ರೇವಣ್ಣ ಅವರ ಎರಡನೇ ಸಿನಿಮಾ 'ಪಂಟ' ಜೂನ್ 9 ರಂದು ಸೆಟ್ಟೇರಲಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕ್ಲ್ಯಾಪ್ ಮಾಡಲಿದ್ದಾರೆ.
ಕೆ.ಎಫ್.ಸಿ.ಸಿ ಅಧ್ಯಕ್ಷ ಸಾರಾ ಗೋವಿಂದು ಅವರು ದೀಪ ಬೆಳಗಿಸಿ ಸಮಾರಂಭದ ಉದ್ಘಾಟನೆ ಮಾಡಲಿದ್ದಾರೆ. ಚಿತ್ರದ ಮುಹೂರ್ತ ಕಾರ್ಯಕ್ರಮವು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಜರುಗಲಿದೆ.