ವಿಕಾಸ ಸೌಧದಲ್ಲಿ ಬಿಡುಗಡೆ ಆಗಲಿದೆ ಯೋಗರಾಜ್ ಭಟ್ಟರ ಹಾಡು
ನಿರ್ದೇಶಕ ಯೋಗರಾಜ್ ಭಟ್ ಚುನಾವಣೆಯ ಮತದಾನದ ಅರಿವು ಮೂಡಿಸಲು ಒಂದು ಹಾಡನ್ನು ರಚನೆ ಮಾಡಿದ್ದರು. ಈ ಹಾಡು ಇಂದು ವಿಕಾಸ ಸೌಧದಲ್ಲಿ ಬಿಡುಗಡೆಯಾಗಲಿದೆ. ಇಂದು ಸಂಜೆ 6.30ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಯೋಗರಾಜ್ ಭಟ್, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಮುಂತಾದವರು ಭಾಗವಹಿಸಲಿದ್ದಾರೆ
ಚುನಾವಣಾ ಗೀತೆ ಕರ್ನಾಟಕ ಚುನಾವಣಾ ಆಯೋಗದ ಹೊಸ ಪರಿಕಲ್ಪನೆಯಾಗಿದೆ. ಇನ್ನು ಕರ್ನಾಟಕ ವಿಧಾನಸಭೆ ಚುನಾವಣೆಗೆ ಈ ರೀತಿಯ ಚುನಾವಣಾ ಗೀತೆ ರಚನೆಯಾಗುತ್ತಿರುವುದು ಇದೇ ಮೊದಲು. ಈ ಗೀತೆಯ ಮುಖ್ಯ ಉದ್ದೇಶ ಜನರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವುದಾಗಿದೆ. ಇದೇ ಕಾರಣಕ್ಕೆ ಯೋಗರಾಜ್ ಭಟ್ ಮತ್ತು 'ಪಂಚತಂತ್ರ' ಚಿತ್ರತಂಡವನ್ನು ಚುನಾವಣಾ ಗೀತೆ ರಚಿಸಲು ಚುನಾವಣಾ ಆಯೋಗ ಆಯ್ಕೆ ಮಾಡಿತ್ತು. ಇನ್ನು ಯೋಗರಾಜ್ ಭಟ್ ರಚಿಸಿರುವ ಈ ಹಾಡಿಗೆ ಸಂಗೀತ ನಿರ್ದೇಶಕ ಹರಿಕೃಷ್ಣ ಸಂಗೀತ ನೀಡಿದ್ದಾರೆ.

ವಿಕಾಸ ಸೌಧದಲ್ಲಿ ಇಂದು ಯೋಗರಾಜ ಭಟ್ಟರ ಚುನಾವಣಾ ಗೀತೆ ಬಿಡುಗಡೆ
ಮೇ 12 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಬಾರಿ ಮತದಾನವನ್ನು ಹೆಚ್ಚು ಮಾಡಲು ಚುನಾವಣೆ ಆಯೋಗ ಈ ಪ್ಲಾನ್ ಮಾಡಿದೆ. ಸಂವಿಧಾನ ನೀಡಿದ ಅತ್ಯಮೂಲ್ಯ ಮತದಾನದ ಹಕ್ಕನ್ನು ಪ್ರತಿಯೊಬ್ಬರೂ ಸಮರ್ಥವಾಗಿ ಬಳಸಿಕೊಳ್ಳುವ ಮೂಲಕ ರಾಜಕೀಯ ಪ್ರಜ್ಞೆ ಮೆರೆಯಬೇಕೆಂಬ ಆಶಯ ಈ ಗೀತೆಯಲ್ಲಿದೆ.


Click it and Unblock the Notifications











