Don't Miss!
- News ಕಾಂಗ್ರೆಸ್ ನೇತೃತ್ವದ ಒಕ್ಕೂಟಕ್ಕೆ ನಾಯಕನೇ ಇಲ್ಲ: ಪ್ರಧಾನಿ ಮೋದಿ!
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಕಾಸ ಸೌಧದಲ್ಲಿ ಬಿಡುಗಡೆ ಆಗಲಿದೆ ಯೋಗರಾಜ್ ಭಟ್ಟರ ಹಾಡು
ನಿರ್ದೇಶಕ ಯೋಗರಾಜ್ ಭಟ್ ಚುನಾವಣೆಯ ಮತದಾನದ ಅರಿವು ಮೂಡಿಸಲು ಒಂದು ಹಾಡನ್ನು ರಚನೆ ಮಾಡಿದ್ದರು. ಈ ಹಾಡು ಇಂದು ವಿಕಾಸ ಸೌಧದಲ್ಲಿ ಬಿಡುಗಡೆಯಾಗಲಿದೆ. ಇಂದು ಸಂಜೆ 6.30ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಯೋಗರಾಜ್ ಭಟ್, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಮುಂತಾದವರು ಭಾಗವಹಿಸಲಿದ್ದಾರೆ
ಚುನಾವಣಾ ಗೀತೆ ಕರ್ನಾಟಕ ಚುನಾವಣಾ ಆಯೋಗದ ಹೊಸ ಪರಿಕಲ್ಪನೆಯಾಗಿದೆ. ಇನ್ನು ಕರ್ನಾಟಕ ವಿಧಾನಸಭೆ ಚುನಾವಣೆಗೆ ಈ ರೀತಿಯ ಚುನಾವಣಾ ಗೀತೆ ರಚನೆಯಾಗುತ್ತಿರುವುದು ಇದೇ ಮೊದಲು. ಈ ಗೀತೆಯ ಮುಖ್ಯ ಉದ್ದೇಶ ಜನರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವುದಾಗಿದೆ. ಇದೇ ಕಾರಣಕ್ಕೆ ಯೋಗರಾಜ್ ಭಟ್ ಮತ್ತು 'ಪಂಚತಂತ್ರ' ಚಿತ್ರತಂಡವನ್ನು ಚುನಾವಣಾ ಗೀತೆ ರಚಿಸಲು ಚುನಾವಣಾ ಆಯೋಗ ಆಯ್ಕೆ ಮಾಡಿತ್ತು. ಇನ್ನು ಯೋಗರಾಜ್ ಭಟ್ ರಚಿಸಿರುವ ಈ ಹಾಡಿಗೆ ಸಂಗೀತ ನಿರ್ದೇಶಕ ಹರಿಕೃಷ್ಣ ಸಂಗೀತ ನೀಡಿದ್ದಾರೆ.
ವಿಕಾಸ ಸೌಧದಲ್ಲಿ ಇಂದು ಯೋಗರಾಜ ಭಟ್ಟರ ಚುನಾವಣಾ ಗೀತೆ ಬಿಡುಗಡೆ
ಮೇ 12 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಬಾರಿ ಮತದಾನವನ್ನು ಹೆಚ್ಚು ಮಾಡಲು ಚುನಾವಣೆ ಆಯೋಗ ಈ ಪ್ಲಾನ್ ಮಾಡಿದೆ. ಸಂವಿಧಾನ ನೀಡಿದ ಅತ್ಯಮೂಲ್ಯ ಮತದಾನದ ಹಕ್ಕನ್ನು ಪ್ರತಿಯೊಬ್ಬರೂ ಸಮರ್ಥವಾಗಿ ಬಳಸಿಕೊಳ್ಳುವ ಮೂಲಕ ರಾಜಕೀಯ ಪ್ರಜ್ಞೆ ಮೆರೆಯಬೇಕೆಂಬ ಆಶಯ ಈ ಗೀತೆಯಲ್ಲಿದೆ.