Don't Miss!
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- News ಮಳೆ.. ಮಳೆ.. ಅಲ್ಲಲ್ಲ ಮುಂದಿನ 1 ವಾರ ಬೆಂಗಳೂರಲ್ಲಿ ಭಾರಿ ಬಿಸಿಲು!
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಕಾಸ ಸೌಧದಲ್ಲಿ ಬಿಡುಗಡೆ ಆಗಲಿದೆ ಯೋಗರಾಜ್ ಭಟ್ಟರ ಹಾಡು
ನಿರ್ದೇಶಕ ಯೋಗರಾಜ್ ಭಟ್ ಚುನಾವಣೆಯ ಮತದಾನದ ಅರಿವು ಮೂಡಿಸಲು ಒಂದು ಹಾಡನ್ನು ರಚನೆ ಮಾಡಿದ್ದರು. ಈ ಹಾಡು ಇಂದು ವಿಕಾಸ ಸೌಧದಲ್ಲಿ ಬಿಡುಗಡೆಯಾಗಲಿದೆ. ಇಂದು ಸಂಜೆ 6.30ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಯೋಗರಾಜ್ ಭಟ್, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಮುಂತಾದವರು ಭಾಗವಹಿಸಲಿದ್ದಾರೆ
ಚುನಾವಣಾ ಗೀತೆ ಕರ್ನಾಟಕ ಚುನಾವಣಾ ಆಯೋಗದ ಹೊಸ ಪರಿಕಲ್ಪನೆಯಾಗಿದೆ. ಇನ್ನು ಕರ್ನಾಟಕ ವಿಧಾನಸಭೆ ಚುನಾವಣೆಗೆ ಈ ರೀತಿಯ ಚುನಾವಣಾ ಗೀತೆ ರಚನೆಯಾಗುತ್ತಿರುವುದು ಇದೇ ಮೊದಲು. ಈ ಗೀತೆಯ ಮುಖ್ಯ ಉದ್ದೇಶ ಜನರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವುದಾಗಿದೆ. ಇದೇ ಕಾರಣಕ್ಕೆ ಯೋಗರಾಜ್ ಭಟ್ ಮತ್ತು 'ಪಂಚತಂತ್ರ' ಚಿತ್ರತಂಡವನ್ನು ಚುನಾವಣಾ ಗೀತೆ ರಚಿಸಲು ಚುನಾವಣಾ ಆಯೋಗ ಆಯ್ಕೆ ಮಾಡಿತ್ತು. ಇನ್ನು ಯೋಗರಾಜ್ ಭಟ್ ರಚಿಸಿರುವ ಈ ಹಾಡಿಗೆ ಸಂಗೀತ ನಿರ್ದೇಶಕ ಹರಿಕೃಷ್ಣ ಸಂಗೀತ ನೀಡಿದ್ದಾರೆ.
ವಿಕಾಸ ಸೌಧದಲ್ಲಿ ಇಂದು ಯೋಗರಾಜ ಭಟ್ಟರ ಚುನಾವಣಾ ಗೀತೆ ಬಿಡುಗಡೆ
ಮೇ 12 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಬಾರಿ ಮತದಾನವನ್ನು ಹೆಚ್ಚು ಮಾಡಲು ಚುನಾವಣೆ ಆಯೋಗ ಈ ಪ್ಲಾನ್ ಮಾಡಿದೆ. ಸಂವಿಧಾನ ನೀಡಿದ ಅತ್ಯಮೂಲ್ಯ ಮತದಾನದ ಹಕ್ಕನ್ನು ಪ್ರತಿಯೊಬ್ಬರೂ ಸಮರ್ಥವಾಗಿ ಬಳಸಿಕೊಳ್ಳುವ ಮೂಲಕ ರಾಜಕೀಯ ಪ್ರಜ್ಞೆ ಮೆರೆಯಬೇಕೆಂಬ ಆಶಯ ಈ ಗೀತೆಯಲ್ಲಿದೆ.