Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಂಡಾಯ ಕವಿ ಸಿದ್ದಲಿಂಗಯ್ಯರನ್ನು ಕಸಿದುಕೊಂಡ ಕೋವಿಡ್
'ಇಕ್ಕರ್ಲಾ ವದೀರ್ಲಾ, ಈ ನನ್ಮಕ್ಕುಳ್ ಚರ್ಮ ಎಬ್ರಲಾ' ಎಂದು ಕರ್ನಾಟಕ ದಲಿತ ಹೋರಾಟಕ್ಕೆ ಹೊಸ ಚುರುಕು ತಂದುಕೊಟ್ಟ ನಾಡಿನ ಖ್ಯಾತ ಕವಿ ಸಿದ್ದಲಿಂಗಯ್ಯ ಅವರು ಕೋವಿಡ್ನಿಂದಾಗಿ ನಿಧನ ಹೊಂದಿದ್ದಾರೆ.
Recommended Video
ಕೋವಿಡ್ ಪಾಸಿಟಿವ್ ಆಗಿದ್ದ ಸಿದ್ದಲಿಂಗಯ್ಯ ಅವರನ್ನು ಮೇ 4ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಿದ್ದಲಿಂಗಯ್ಯ ಅವರಿಗೆ ಆರಂಭದಲ್ಲಿ ಬೆಡ್ ಸಿಕ್ಕಿರಲಿಲ್ಲವಾದರೂ ಸಂಘ-ಸಂಸ್ಥೆಗಳು ಮತ್ತು ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಅವರ ನೆರವಿನಿಂದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವು ದಿನಗಳ ಬಳಿಕ ಕೋವಿಡ್ ವಿರುದ್ಧ ಹೋರಾಡಿ ಇಂದು ಅವರು ನಿಧನ ಹೊಂದಿದ್ದಾರೆ. ಆ ಮೂಲಕ ನಾಡಿನ ದಲಿತ ಹೋರಾಟ ದನಿ ಕಳೆದುಕೊಂಡಂತಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿಯ ಮಂಚನಬೆಲೆ ಗ್ರಾಮದಲ್ಲಿ ಹುಟ್ಟಿದ ಸಿದ್ದಲಿಂಗಯ್ಯ ಅವರು ಶಿಕ್ಷಣ ಮಾಡಿದ್ದು ಬೆಂಗಳೂರಿನಲ್ಲಿ. ಅಧ್ಯಾಪಕ, ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿದ ಸಿದ್ದಲಿಂಗಯ್ಯ, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕೇಂದ್ರ ಸಾಹಿತ್ಯ ಅಕಾಡೆಮಿಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಎರಡು ಬಾರಿ ವಿಧಾನ ಪರಿಷತ್ ಸದಸ್ಯರೂ ಆಗಿದ್ದರು ಸಿದ್ದಲಿಂಗಯ್ಯ.
ಬಂಡಾಯ ಕವಿ, ದಲಿತ ಕವಿ ಎಂದೇ ಖ್ಯಾತರಾಗಿದ್ದ ಸಿದ್ದಲಿಂಗಯ್ಯ ಅವರು 'ಹೊಲೆಮಾದಿಗರ ಹಾಡು', 'ಕಪ್ಪು ಕಾಡಿನ ಹಾಡು', 'ಸಾವಿರಾರು ನದಿಗಳು' ಇನ್ನೂ ಹಲವಾರು ಕವನ ಸಂಕಲನಗಳ ಮೂಲಕ ಬಂಡಾಯದ ದನಿಗೆ ಶಕ್ತಿ ತುಂಬಿದ್ದರು.
ಸಿದ್ದಲಿಂಗಯ್ಯ ಕೇವಲ ಬಂಡಾಯ ಕವಿತೆ ಮಾತ್ರವೇ ಆಗಿರದೆ, 'ಆ ಬೆಟ್ಟದಲ್ಲಿ ಬೆಳದಿಂಗಳಲ್ಲಿ ಸುಳಿದಾಡಬೇಡ ಗೆಳತಿ' ಎಂಬ ಸುಮಧುರ ಪ್ರೇಮಗೀತೆಯನ್ನೂ ರಚಿಸಿದ್ದಾರೆ. ಸಿದ್ದಲಿಂಗಯ್ಯ ಅವರ ಈ ಕವಿತೆ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ 'ಬಾ ನಲ್ಲೆ ಮಧುಚಂದ್ರಕೆ' ಸಿನಿಮಾದಲ್ಲಿ ಹಾಡಾಗಿದೆ.
'ಏಕಲವ್ಯ', 'ನೆಲಸಮ', 'ಪಂಚಮ' ನಾಟಕಗಳನ್ನು ಬರೆದಿರುವ ಸಿದ್ದಲಿಂಗಯ್ಯನವರ ಆತ್ಮತಥೆ 'ಊರು ಕೇರಿ'. ಎರಡು ಭಾಗಗಳಲ್ಲಿ ಪ್ರಕಟವಾಗಿರುವ ಊರು-ಕೇರಿ ರಂಗ ಪ್ರಯೋಗಗಳನ್ನು ಸಹ ಕಂಡಿದೆ.
ಸಿದ್ದಲಿಂಗಯ್ಯ ಅವರ ಅಗಲಿಕೆಗೆ ನಾಡಿನ ಸಾಹಿತಿಗಳು, ಹೋರಾಟಗಾರರು, ರಾಜಕಾರಣಿಗಳು, ಸಿನಿಮಾ ಕರ್ಮಿಗಳು ಕಂಬನಿ ಮಿಡಿದಿದ್ದಾರೆ.