Don't Miss!
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಎಫ್ ಸಿಸಿಯಿಂದ ಗೋವಾ ಚಲನಚಿತ್ರೋತ್ಸವಕ್ಕೆ ಬಹಿಷ್ಕಾರ!
'ಈ ಬಾರಿಯ ‘ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ' ಕ್ಕೆ ಸಂಚಾರಿ ವಿಜಯ್ ಅಭಿನಯದ 'ನಾನು ಅವಳಲ್ಲ ಅವನು' ಚಿತ್ರ ಆಯ್ಕೆಯಾಗಿರುವುದು ಸಂತಸದ ಸಂಗತಿ. ಅದರೆ, ಫಿಲಂ ಫೆಸ್ಟಿವಲ್ ನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪಾಲ್ಗೊಳ್ಳುವುದಿಲ್ಲ' ಎಂದು ಕೆಎಫ್ ಸಿಸಿ ಅಧ್ಯಕ್ಷ ಸಾ.ರಾ. ಗೋವಿಂದು ಘೋಷಿಸಿದ್ದಾರೆ.
ಇದು ಕೆಎಫ್ ಸಿಸಿ ನಿರ್ಧಾರ ಮಾತ್ರವಲ್ಲ, ಕನ್ನಡ ಸಿನಿಮಾ ಇಂಡಸ್ಟ್ರಿಯ ಒಕ್ಕೊರಲ ದನಿಯಾಗಿದೆ. ಕಳಸಾ ಬಂಡೂರಿ ಯೋಜನೆಯನ್ನು ಬೆಂಬಲಿಸುವ ಸಲುವಾಗಿ ಈ ಹಿಂದೆ ತೆಗೆದುಕೊಂಡ ನಿರ್ಣಯವನ್ನು ನ.20ರಂದು ಜಾರಿಗೊಳಿಸುತ್ತಿದ್ದೇವೆ.
ನ.20ರಂದು
ಗೋವಾದಲ್ಲಿ
ನಡೆಯಲಿರುವ
‘ಗೋವಾ
ಅಂತಾರಾಷ್ಟ್ರೀಯ
ಚಲನಚಿತ್ರೋತ್ಸವ'ದಲ್ಲಿ
ಭಾಗವಹಿಸದಿರಲು
ಕನ್ನಡ
ಚಲನಚಿತ್ರ
ವಾಣಿಜ್ಯ
ಮಂಡಳಿ
ನಿರ್ಧರಿಸಿದೆ
ಎಂದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದ್ ಮಾತನಾಡಿ, ಗೋವಾದಲ್ಲಿ ಕನ್ನಡಿಗರಿಗಾಗುತ್ತಿರುವ ತೊಂದರೆ ಹಾಗೂ ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಗೋವಾ ಸರ್ಕಾರದ ಕ್ರಮವನ್ನು ಖಂಡಿಸಿ ಕನ್ನಡ ಚಲನಚಿತ್ರೋದ್ಯಮದ ಯಾವುದೇ ಕಲಾವಿದರು, ತಂತ್ರಜ್ಞರು ‘ಗೋವಾ ಚಲನಚಿತ್ರೋತ್ಸವ'ದಲ್ಲಿ ಭಾಗವಹಿಸದಿರಲು ನಿರ್ಧರಿಸಲಾಗಿದೆ ಎಂದರು.
ಸಭೆಯಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಕೆ.ಸಿ.ಎನ್.ಚಂದ್ರಶೇಖರ್, ಥಾಮಸ್ ಡಿಸೋಜ, ಕಾರ್ಯದರ್ಶಿ ಎನ್.ಎಂ. ಸುರೇಶ್, ರಾಮಮೂರ್ತಿ ಸೇರಿದಂತೆ ಮತ್ತಿತರರು ಹಾಜರಿದ್ದರು.
ಕರ್ನಾಟಕ ಚಲನಚಿತ್ರ ವಾಣಿಜ್ಯಮಂಡಳಿಯ ನಿರ್ಧಾರಕ್ಕೆ ಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಸೇರಿದಂತೆ ಹಲವು ನಿರ್ದೇಶಕರು, ಕಲಾವಿದರು ಹಾಗೂ ತಂತ್ರಜ್ಞರು ಬೆಂಬಲ ವ್ಯಕ್ತಪಡಿಸಿದ್ದಾರೆ. ಹಾಗೂ ಕಳಸಾ ಬಂಡೂರಿ ಯೋಜನೆಗೆ ಆಗ್ರಹಿಸಿ ನ.20ರಂದು ಬೆಂಗಳೂರು ಬೆಂಗಳೂರಿನ ಮೌರ್ಯ ವೃತ್ತದ ಬಳಿ ಇರುವ ಗಾಂಧಿ ಪ್ರತಿಮೆಯ ಮುಂದೆ ವೌನ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.