Don't Miss!
- Sports ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಪಾಕ್ ತಂಡದ ಮಾಜಿ ನಾಯಕಿ
- News Karnataka Lok Sabha Election 2024: ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧ!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ನೀಡಿದ ಫಿಲ್ಮ್ ಚೇಂಬರ್
ಕನ್ನಡಿಗರಿಗೆ, ಕರ್ನಾಟಕ ರಾಜ್ಯಕ್ಕೆ ಯಾವುದೇ ರೀತಿಯ ಸಂಕಷ್ಟ ಬಂದಾಗ ಚಿತ್ರರಂಗ ಸದಾ ಜೊತೆಯಲ್ಲಿರುತ್ತೆ. ಸಿನಿಮಾ ನಟರು, ಅವರ ಅಭಿಮಾನಿಗಳ ಜೊತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯೂ ನೆರೆ ಸಂತ್ರಸ್ಥರಿಗಾಗಿ ಪರಿಹಾರ ನೀಡಿದೆ.
ಕರ್ನಾಟಕ ಪ್ರವಾಹ: ಸಂತ್ರಸ್ತರಿಗೆ ನೆರವು ನೀಡುವುದು ಹೇಗೆ?
ಹೌದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಕರ್ನಾಟಕ ರಾಜ್ಯ ನೆರೆ ಸಂತ್ರಸ್ಥರಿಗೆ 25 ಲಕ್ಷ ಹಣ ಸಹಾಯ ಮಾಡಲಾಗಿದೆ.
ಸಿಎಂ ಭೇಟಿ ಮಾಡಿ ನೆರೆ ಸಂತ್ರಸ್ಥರಿಗೆ 5 ಲಕ್ಷ ಚೆಕ್ ನೀಡಿದ ಪುನೀತ್
ಈ ಸಂಬಂಧ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನ ಇಂದು ಭೇಟಿ ಮಾಡಿದ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಮತ್ತು ಪದಾಧಿಕಾರಿಗಳು 25 ಲಕ್ಷ ಚೆಕ್ ಸಿಎಂಗೆ ಹಸ್ತಾಂತರಿಸಿದರು.
ಉತ್ತರ ಕರ್ನಾಟಕ ನೆರೆ ಸಂತ್ರಸ್ಥರಿಗೆ 2 ಲಕ್ಷ ನೀಡಿದ 'ಬರ್ನಿಂಗ್ ಸ್ಟಾರ್'
ಈ ವೇಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರುಗಳಾದ ಸಾರಾ ಗೋವಿಂದು, ಚಿನ್ನೇಗೌಡ, ಥಾಮಸ್ ಡಿಸೋಜಾ ಹಾಜರಿದ್ದರು. ಇತ್ತೀಚಿಗಷ್ಟೆ ನಟ ಪುನೀತ್ ರಾಜ್ ಕುಮಾರ್ 5 ಲಕ್ಷ ರೂಪಾಯಿಗೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದರು. ನಟ ಉಪೇಂದ್ರ ಅವರು ಕೂಡ 5 ಲಕ್ಷ ದೇಣಿಗೆ ನೀಡಿದ್ದಾರೆ.
ಕನ್ನಡ ನಟರು ಮಾತ್ರ ಕೆಲವು ಪರಭಾಷೆಯ ಕಲಾವಿದರು ಕರ್ನಾಟಕ ನೆರೆ ಸಂತ್ರಸ್ಥರಿಗೆ ನೆರವು ನೀಡಿದ್ದಾರೆ. ಸಂಪೂರ್ಣೇಶ್ ಬಾಬು 2 ಲಕ್ಷ ಹಾಗೂ ಸೂರ್ಯ, ಕಾರ್ತಿ ಸಹೋದರರು ಕೇರಳ ಮತ್ತು ಕರ್ನಾಟಕಕ್ಕೆ ಸೇರಿ 10 ಲಕ್ಷ ನೀಡಿದ್ದಾರೆ.