Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ನೀಡಿದ ಫಿಲ್ಮ್ ಚೇಂಬರ್
ಕನ್ನಡಿಗರಿಗೆ, ಕರ್ನಾಟಕ ರಾಜ್ಯಕ್ಕೆ ಯಾವುದೇ ರೀತಿಯ ಸಂಕಷ್ಟ ಬಂದಾಗ ಚಿತ್ರರಂಗ ಸದಾ ಜೊತೆಯಲ್ಲಿರುತ್ತೆ. ಸಿನಿಮಾ ನಟರು, ಅವರ ಅಭಿಮಾನಿಗಳ ಜೊತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯೂ ನೆರೆ ಸಂತ್ರಸ್ಥರಿಗಾಗಿ ಪರಿಹಾರ ನೀಡಿದೆ.
ಕರ್ನಾಟಕ ಪ್ರವಾಹ: ಸಂತ್ರಸ್ತರಿಗೆ ನೆರವು ನೀಡುವುದು ಹೇಗೆ?
ಹೌದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಕರ್ನಾಟಕ ರಾಜ್ಯ ನೆರೆ ಸಂತ್ರಸ್ಥರಿಗೆ 25 ಲಕ್ಷ ಹಣ ಸಹಾಯ ಮಾಡಲಾಗಿದೆ.
ಸಿಎಂ ಭೇಟಿ ಮಾಡಿ ನೆರೆ ಸಂತ್ರಸ್ಥರಿಗೆ 5 ಲಕ್ಷ ಚೆಕ್ ನೀಡಿದ ಪುನೀತ್
ಈ ಸಂಬಂಧ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನ ಇಂದು ಭೇಟಿ ಮಾಡಿದ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಮತ್ತು ಪದಾಧಿಕಾರಿಗಳು 25 ಲಕ್ಷ ಚೆಕ್ ಸಿಎಂಗೆ ಹಸ್ತಾಂತರಿಸಿದರು.
ಉತ್ತರ ಕರ್ನಾಟಕ ನೆರೆ ಸಂತ್ರಸ್ಥರಿಗೆ 2 ಲಕ್ಷ ನೀಡಿದ 'ಬರ್ನಿಂಗ್ ಸ್ಟಾರ್'
ಈ ವೇಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರುಗಳಾದ ಸಾರಾ ಗೋವಿಂದು, ಚಿನ್ನೇಗೌಡ, ಥಾಮಸ್ ಡಿಸೋಜಾ ಹಾಜರಿದ್ದರು. ಇತ್ತೀಚಿಗಷ್ಟೆ ನಟ ಪುನೀತ್ ರಾಜ್ ಕುಮಾರ್ 5 ಲಕ್ಷ ರೂಪಾಯಿಗೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದರು. ನಟ ಉಪೇಂದ್ರ ಅವರು ಕೂಡ 5 ಲಕ್ಷ ದೇಣಿಗೆ ನೀಡಿದ್ದಾರೆ.
ಕನ್ನಡ ನಟರು ಮಾತ್ರ ಕೆಲವು ಪರಭಾಷೆಯ ಕಲಾವಿದರು ಕರ್ನಾಟಕ ನೆರೆ ಸಂತ್ರಸ್ಥರಿಗೆ ನೆರವು ನೀಡಿದ್ದಾರೆ. ಸಂಪೂರ್ಣೇಶ್ ಬಾಬು 2 ಲಕ್ಷ ಹಾಗೂ ಸೂರ್ಯ, ಕಾರ್ತಿ ಸಹೋದರರು ಕೇರಳ ಮತ್ತು ಕರ್ನಾಟಕಕ್ಕೆ ಸೇರಿ 10 ಲಕ್ಷ ನೀಡಿದ್ದಾರೆ.