Don't Miss!
- News Everest Fish Curry Masala: ಎವರೆಸ್ಟ್ ಫಿಶ್ ಕರಿ ಮಸಾಲೆ ಬ್ಯಾನ್: ಕಾರಣ ಇಲ್ಲಿದೆ
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಅಂಬರೀಷ್ ಸ್ಮಾರಕ ಪ್ರತಿಷ್ಠಾನ ಸಮಿತಿ ರಚನೆ
ಕನ್ನಡ ಚಲನಚಿತ್ರ ರಂಗದ ಖ್ಯಾತ ನಟ ಅಂಬರೀಷ್ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಕನ್ನಡದ ಮೇರು ನಟರಾದ ಡಾ.ರಾಜ್ ಕುಮಾರ್ ಮತ್ತು ಡಾ.ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪ್ರತಿಷ್ಠಾನದಂತೆಯೇ, ಅಂಬರೀಷ್ ಅವರ ಸ್ಮಾರಕ ನಿರ್ಮಾಣ ಪ್ರತಿಷ್ಠಾನ ಸಮಿತಿ ರಚಿಸಲಾಗಿದೆ.
ಅಂಬರೀಶ್ ಸ್ಮಾರಕ ವಿಚಾರವಾಗಿ ಆಡಳಿತಾತ್ಮಕ ನಿರ್ಣಯ, ರೂಪು ರೇಷೆ, ಅನುಷ್ಠಾನ ಹಾಗೂ ಕಾರ್ಯಕ್ರಮಗಳ ನಿರ್ವಹಣೆಗಳ ಪರಿಶೀಲನೆಗಾಗಿ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಎಂಟು-ಸದಸ್ಯರ ಅಂಬರೀಷ್ ಸ್ಮಾರಕ ಪ್ರತಿಷ್ಠಾನ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅಂಬಿ ಇಲ್ಲದ ಒಂದು ವರ್ಷ: ಏನೇನೆಲ್ಲಾ ನಡೆದು ಹೋಯ್ತು.!
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಅಥವಾ ನಿರ್ದೇಶಕರು, ಅಂಬರೀಷ್ ಅವರ ಧರ್ಮಪತ್ನಿ ಶ್ರೀಮತಿ ಸುಮಲತ, ಅಂಬರೀಷ್ ಅವರ ಪುತ್ರ ಶ್ರೀ ಅಭಿಷೇಕ್, ಕರ್ನಾಟಕ ಚಲನಚಿತ್ರ ವಾಣಜ್ಯ ಮಂಡಳಿಯ ಅಧ್ಯಕ್ಷರು ಅಥವಾ ಅವರ ಪ್ರತಿನಿಧಿ, ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷರು ಅಥವಾ ಅವರ ಪ್ರತಿನಿಧಿ ಸದಸ್ಯರಾಗಿರುವ ಈ ಸಮಿತಿಗೆ ಶ್ರೀ ಕಂಠೀರವ ಸ್ಟುಡಿಯೋದ ವ್ಯವಸ್ಥಾಪಕ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.