Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ 'ಸ್ಪೂರ್ತಿ ದಿನ'ವಾಗಿ ಆಚರಣೆ: ಸರ್ಕಾರ ಘೋಷಣೆ
ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬವನ್ನು ಇನ್ನು ಮುಂದೆ 'ಪ್ರೇರಣಾ ದಿನ'ವನ್ನಾಗಿ ಆಚರಣೆ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರ ಘೋಷಿಸಿದೆ.
ಮಾರ್ಚ್ 17, ಪುನೀತ್ ರಾಜ್ಕುಮಾರ್ ಅವರ ಹುಟ್ಟುಹಬ್ಬವಾಗಿದ್ದು ಆ ದಿನವನ್ನು ಪ್ರೇರಣಾ ದಿನವನ್ನಾಗಿ ಆಚರಿಸಲಾಗುತ್ತದೆ. ಪುನೀತ್ ರಾಜ್ಕುಮಾರ್, ತಮ್ಮ ಸಿನಿಮಾ, ಸಾಮಾಜಿಕ ಕಾರ್ಯಗಳಿಂದ ಕೋಟ್ಯಂತರ ಮಂದಿಗೆ ಸ್ಪೂರ್ತಿ ತುಂಬಿದ್ದಾರೆ. ಹಾಗಾಗಿ ಅವರ ಹುಟ್ಟುಹಬ್ಬವನ್ನು ಸ್ಪೂರ್ತಿಯ ದಿನ ಅಥವಾ ಪ್ರೇರಣಾ ದಿನವನ್ನಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ.
ಸರ್ಕಾರದ ಈ ಘೋಷಣೆಯನ್ನು ಪುನೀತ್ ರಾಜ್ಕುಮಾರ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಸರ್ಕಾರ ಈಗಾಗಲೇ ಪುನೀತ್ ರಾಜ್ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಮರಣೋತ್ತರವಾಗಿ ಗೌರವಿಸಿದೆ. ಇದೀಗ ಪ್ರೇರಣಾ ದಿನದ ಘೋಷಣೆ ಮಾಡುವ ಮೂಲಕ ಮತ್ತಷ್ಟು ಗೌರವವನ್ನು ಕನ್ನಡಿಗರ ನೆಚ್ಚಿನ ಅಪ್ಪುಗೆ ನೀಡಿದೆ.
ಪುನೀತ್ ರಾಜ್ಕುಮಾರ್ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡಿದ್ದರು. ಅಪ್ಪು ಮಾಡಿದ್ದ ನೇತೃದಾನ ಹಲವರು ನೇತೃದಾನ ಮಾಡಲು ಸ್ಪೂರ್ತಿ ತುಂಬಿತ್ತು. ಅಪ್ಪು ಮಾಡಿದ್ದ ಸಾಮಾಜಿಕ ಕಾರ್ಯಗಳನ್ನು ಸ್ಪುರ್ತಿಯಾಗಿರಿಸಿಕೊಂಡು ಹಲವರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ಇದೆಲ್ಲವನ್ನೂ ಗಮನಿಸಿ ಸರ್ಕಾರ ಹೀಗೊಂದು ಉತ್ತಮ ಘೋಷಣೆಯನ್ನು ಮಾಡಿದೆ.
ಸಿಎಂ ಬಸವರಾಜ ಬೊಮ್ಮಾಯಿಯವರು ಸ್ವತಃ ಪುನೀತ್ ರಾಜ್ಕುಮಾರ್ ಅವರ ಆಪ್ತರು ಮತ್ತು ಅಭಿಮಾನಿಯಾಗಿದ್ದರು. ಪುನೀತ್ ರಾಜ್ಕುಮಾರ್ ಅಗಲಿದಾಗ ಖುದ್ದಾಗಿ ಹಾಜರಿದ್ದು ಎಲ್ಲ ಕಾರ್ಯಗಳನ್ನು ಖುದ್ದು ನಿಂತು ಮೇಲ್ವಿಚಾರಣೆ ನಡೆಸಿ ಉತ್ತಮವಾದ ಅಂತಿಮ ಗೌರವ ಸಲ್ಲುವಂತೆ ಕಾಳಜಿ ವಹಿಸಿದ್ದರು.
ಆ ಬಳಿಕವೂ ಹಲವು ಬಾರಿ ಅಪ್ಪು ಬಗ್ಗೆ ಆಪ್ತವಾದ ಭಾವುಕವಾದ ಮಾತುಗಳನ್ನಾಡಿದ್ದರು. ದೊಡ್ಮನೆಯ ದೊಡ್ಡತನವನ್ನು ಸಹ ಹಲವು ಬಾರಿ ಸ್ಮರಿಸಿದ್ದರು. ಇದೀಗ ಪ್ರೇರಣಾ ದಿನ ಆಚರಣೆ ಮೂಲಕ ಮತ್ತೊಮ್ಮೆ ಅಪ್ಪು ಮೇಲಿನ ತಮ್ಮ ಗೌರವ, ಪ್ರೀತಿ ಪ್ರದರ್ಶಿಸಿದ್ದಾರೆ.
ಮುಂದಿನ ತಿಂಗಳು ಅಕ್ಟೋಬರ್ 29 ಕ್ಕೆ ಪುನೀತ್ ರಾಜ್ಕುಮಾರ್ ಅಗಲಿ ಒಂದು ವರ್ಷವಾಗುತ್ತಿದೆ.