Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರಿಯ ನಟ ಸುದರ್ಶನ್ ಅವರಿಗೆ ಕನ್ನಡ ಚಿತ್ರರಂಗ ನೀಡುವ ಗೌರವ ಇದೇನಾ.?
Recommended Video
ಕನ್ನಡ ಚಿತ್ರರಂಗದ ಪ್ರತಿಭಾವಂತ ಕಲಾವಿದ 'ವಿಜಯನಗರದ ವೀರಪುತ್ರ' ಖ್ಯಾತಿಯ ಹಿರಿಯ ನಟ ಸುದರ್ಶನ್ ಇಂದು ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸುದರ್ಶನ್ ಅವರು ಬೆಂಗಳೂರಿನ ತಿಲಕ್ ನಗರದಲ್ಲಿರುವ ಸಾಗರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
'ವಿಜಯನಗರದ ವೀರಪುತ್ರ' ಖ್ಯಾತಿಯ ನಟ ಆರ್.ಎನ್.ಸುದರ್ಶನ್ ಇನ್ನಿಲ್ಲ
60 ವರ್ಷಗಳಿಂದ ಸಿನಿಮಾರಂಗದಲ್ಲಿ ಸೇವೆ ಸಲ್ಲಿಸಿದ್ದ ಈ ನಟನ ಸಾವಿಗೆ ಕನ್ನಡ ಚಿತ್ರರಂಗ ವರ್ತಿಸಿದ್ದ ರೀತಿ ನಿಜಕ್ಕೂ ಬೇಸರವನ್ನು ತರಿಸಿದೆ. ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಇದ್ದ ಸುದರ್ಶನ್ ಅವರನ್ನು ನೋಡುವುದಕ್ಕೆ ಚಿತ್ರರಂಗದ ಯಾವುದೇ ವ್ಯಕ್ತಿಗಳು ಹೋಗಿರಲಿಲ್ಲ. ಅವರ ಕೊನೆಯ ದಿನಗಳಲ್ಲಿ ಯಾರೂ ಕೂಡ ಅವರ ಸಹಾಯಕ್ಕೆ ಬಂದಿರಲಿಲ್ಲ.
ಇನ್ನೊಂದು ಕಡೆ ಸುದರ್ಶನ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡುವುದಕ್ಕೂ ಸರ್ಕಾರ ಮತ್ತು ಚಿತ್ರರಂಗ ಹಿಂದೆ ಮುಂದೆ ನೋಡಿತ್ತು ಎನ್ನಲಾಗಿದೆ.
ಹಿರಿಯ ನಟ ಶಿವರಾಂ ಕೂಡ ಈ ಬಗ್ಗೆ ಮಾತನಾಡಿ ''ಸುದರ್ಶನ್ ಅವರ ಅಂತಿಮ ದರ್ಶನಕ್ಕೆ ತೊಂದರೆ ಉಂಟಾಗಿದೆ. ರವೀಂದ್ರ ಕಲಾ ಕ್ಷೇತ್ರದಲ್ಲಿ ಜಾಗ ನೀಡಿ ಅಂತ ಕೇಳಿದರೆ ಸರ್ಕಾರ ಮತ್ತು ಫಿಲ್ಮ್ ಛೇಂಬರ್ ನಿಂದ ಸರಿಯಾಗಿ ಉತ್ತರ ಬರುತ್ತಿಲ್ಲ'' ಎಂದು ತಮ್ಮ ಅಸಮಾಧಾನವನ್ನು ವ್ಯಕ್ತ ಪಡಿಸಿದ್ದರು.
ಬಳಿಕ ರವೀಂದ್ರ ಕಲಾ ಕ್ಷೇತ್ರದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.
ಸದ್ಯ ಸಾಮಾಜಿಕ ಜಾಲತಾಣದಲ್ಲಿಯೂ ಈ ಬಗ್ಗೆ ಅನೇಕರು ತಮ್ಮ ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ.