ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮಕ್ಕೆ ರಿಷಬ್ ಶೆಟ್ಟಿ ರಾಯಬಾರಿ; ಶೆಟ್ರು ಇಟ್ಟ ಬೇಡಿಕೆ ಏನು?

ಡಿಕೆ ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗುತ್ತಿದ್ದಂತೆ ಸಾಕಷ್ಟು ಬದಲಾವಣೆಗಳು ಆಗುತ್ತಿವೆ. ತಮ್ಮ ಶಾಸಕರಿಗೆ ಹೊಸ ಖಾತೆಯನ್ನು ಹಂಚಿಕೆ ಮಾಡಿದ ಬಳಿಕ ಆಯಾ ಇಲಾಖೆಗೆ ಸಂಬಂಧಿಸಿದಂತೆ ಸಭೆಯನ್ನು ನಡೆಲಾಗುತ್ತಿದೆ. ಇಂದು (ಜೂನ್ 19) ಸಿಎಂ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಸಭೆಯನ್ನು ನಡೆಸಲಾಯಿತು.

ಸಿಎಂ ಡಿಕೆ ಶಿವಕುಮಾರ್, ಪ್ರವಾಸೋದ್ಯಮ ಸಚಿವ ಕೆಜೆ ಜಾರ್ಜ್ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ಈ ಸಭೆಯಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ಅದರಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದ ಪ್ರವಾಸೋದ್ಯಮವನ್ನು ಉತ್ತೇಜಿಸುವುದಕ್ಕೆ ಕೆಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಅದರಲ್ಲಿ 'ಕಾಂತಾರ' ಬಳಿಕ ಜನಪ್ರಿಯತೆಯ ಉತ್ತುಂಗದಲ್ಲಿರುವ ರಿಷಬ್ ಶೆಟ್ಟಿಯನ್ನು ರಾಯಬಾರಿಯನ್ನಾಗಿ ನೇಮಕ ಮಾಡುವುದು ಕೂಡ ಪ್ರಮುಖ ಅಂಶವಾಗಿದೆ.

Karnataka Govt appointed Rishab Shetty as tourism ambassador for coastal and malnad regions

ವಿಧಾನಸೌಧದ ಸಭಾಂಗಣದಲ್ಲಿ ಈ ಮಹತ್ವದ ಸಭೆಯನ್ನು ನಡೆಸಲಾಗಿತ್ತು. ಇದರಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮದ ಅಭಿವೃದ್ಧಿ ಪಡಿಸುವುದಕ್ಕೆ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ನಟ-ನಿರ್ದೇಶಕ ರಿಷಬ್ ಶೆಟ್ಟಿಯನ್ನು ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮದ ಪ್ರಚಾರ ರಾಯಭಾರಿಯಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ. ಈ ವೇಳೆ ರಿಷಬ್ ಸಿಎಂ ಡಿಕೆ ಶಿವಕುಮಾರ್ ಮುಂದೆ ಕೆಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಅದೇನು ಎಂದು ನೋಡುವುದಾರೇ..

English summary
Karnataka Govt appointed Rishab Shetty as tourism ambassador for coastal and malnad regions. CM DK Shivakumar, Tourism Minister K J George and Rishab Shetty present in the meeting.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X