Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಜಿಎಫ್-2 ವಿರುದ್ಧ ಕಾನೂನು ಸಮರ: ಅರ್ಜಿ ವಜಾಗೊಳಿಸಿದ ಹೈ ಕೋರ್ಟ್
ಕೆಜಿಎಫ್ ಚಾಪ್ಟರ್ ಬಿಡುಗಡೆ ಮಾಡಲು ಅನುಮತಿ ನೀಡಬಾರದು ಎಂದು ವಿರೋಧಿಸಿ ಹುಬ್ಬಳ್ಳಿ ಮೂಲದ ವ್ಯಕ್ತಿಯೊಬ್ಬ ಹೈ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸೋಮವಾರ ಹೈ ಕೋರ್ಟ್ ವಜಾಗೊಳಿಸಿದೆ.
Recommended Video
ರಾಕಿಂಗ್ ಸ್ಟಾರ್ ಯಶ್ ಅಭಿನಯಿಸುತ್ತಿರುವ ಚಾಪ್ಟರ್ 2 ಚಿತ್ರಕ್ಕೆ ಯಾವುದೇ ಕಂಟಕ, ವಿರೋಧ ಇರಲಿಲ್ಲ. ಆದರೆ, ಬಾಲಿವುಡ್ ನಟ ಸಂಜಯ್ ಆಗಮನದ ಬಳಿಕ ಅಪಸ್ವರ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಸಿನಿಮಾ ಬಿಡುಗಡೆ ಮಾಡಲು ಅನುಮತಿಸಬಾರದೆಂದು ನಿರ್ಮಾಪಕ ಕಮ್ ಸಮಾಜ ಸೇವಕರೊಬ್ಬರು ಕೋರ್ಟ್ ಮೊರೆ ಹೋಗಿದ್ದರು. ಅಷ್ಟಕ್ಕೂ, ಏನಿದು ಕೆಜಿಎಫ್ ವಿವಾದ? ಮುಂದೆ ಓದಿ.....
'ಅಧೀರ'ನಿಗೆ ಸಂಕಷ್ಟ?: ಸಂಜಯ್ ದತ್ ಕನ್ನಡದಲ್ಲಿ ನಟಿಸಬಾರದು ಎಂದು ಕೋರ್ಟ್ಗೆ ಹೋದ ನಿರ್ಮಾಪಕ
ಸಂಜಯ್ ದತ್ ಒಬ್ಬ ದೇಶದ್ರೋಹಿ!
ಸಂಜಯ್ ದತ್ ಒಬ್ಬ ದೇಶದ್ರೋಹಿ. ಅವರು ಕರ್ನಾಟಕಕ್ಕೆ ಕಾಲಿಡಬಾರದು. ಕನ್ನಡ ಸಿನಿಮಾಗಳಲ್ಲಿ ಅವರು ನಟಿಸಬಾರದು. ಅವರನ್ನು ಈ ಚಿತ್ರದಿಂದಲೇ ಕೈ ಬಿಡಬೇಕು ಎಂದು ಆಗ್ರಹಿಸಿ ಹುಬ್ಬಳಿಯ ಎಂಜಿನಿಯರ್ ಮತ್ತು ಸಮಾಜ ಸೇವಕ ಜಿ.ಶಿವಶಂಕರ್ ಎಂಬುವವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸೋಮವಾರ ಹೈ ಕೋರ್ಟ್ ವಜಾಗೊಳಿಸಿದೆ.
ಜೈಲು ಶಿಕ್ಷೆ ಅನಜಭವಿಸಿದ್ದ ನಟ
ಸಂಜಯ್ ದತ್ 1993ರಲ್ಲಿ ನಡೆದ ಮುಂಬೈ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿದ್ದರು. ಚಾರ್ಜ್ಷೀಟ್ನಲ್ಲಿ ಅವರ ಹೆಸರಿತ್ತು. ಅಕ್ರಮವಾಗಿ ಶಸ್ತ್ರಾಸ್ತ್ರ ಇಟ್ಟುಕೊಂಡಿದ್ದ ಆರೋಪದಲ್ಲಿ ಐದು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದರು. 2016ರಲ್ಲಿ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು.
ಕೋರ್ಟ್ ಹೇಳಿದ್ದೇನು?
ಶಿಕ್ಷೆಗೆ ಒಳಗಾದ ನಟ ಸಿನಿಮಾದಲ್ಲಿ ನಟಿಸುವುದನ್ನು ನಿಷೇಧಿಸುವ ಕಾನೂನಿನ ಬಗ್ಗೆ ಕೋರ್ಟ್ಗೆ ಮನವರಿಕೆ ಮಾಡಿಕೊಡಲು ಅರ್ಜಿದಾರರ ಪರ ವಕೀಲರು ಯಶಸ್ವಿಯಾಗದ ಕಾರಣ, ಜಿ.ಶಿವಶಂಕರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿನಗಿ ಅವರ ವಿಭಾಗೀಯ ಪೀಠ ತಿರಸ್ಕರಿಸಿದೆ.
ಕೆಜಿಎಫ್ ಚಿತ್ರದಲ್ಲಿ ವಿಲನ್!
ಹೊಂಬಾಳೆ ಫಿಲಂಸ್ ಸಂಸ್ಥೆಯ ಅಡಿ ವಿಜಯ್ ಕಿರಗಂದೂರ್ ನಿರ್ಮಿಸುತ್ತಿರುವ ಕೆಜಿಎಫ್ ಚಾಪ್ಟರ್ 2ನಲ್ಲಿ ಸಂಜಯ್ ದತ್ ಖಳನಾಯಕನಾಗಿ ನಟಿಸುತ್ತಿದ್ದಾರೆ. ಈ ಮೂಲಕ ಕನ್ನಡದಲ್ಲಿ ಸಂಜಯ್ ದತ್ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಸಂಜು ಬಾಬು ಈ ಪಾತ್ರ ಮಾಡುತ್ತಿರುವುದರಿಂದ ಸಿನಿಮಾರಂಗದಲ್ಲಿ ನಿರೀಕ್ಷೆ ಹೆಚ್ಚಿದೆ.
ಕ್ಯಾನ್ಸರ್ ಗೆ ತುತ್ತಾದ ನಟ
ಹಿಂದಿ ಚಿತ್ರರಂಗದ ಹಿರಿಯ ನಟ ಸಂಜಯ್ ದತ್ ಅವರಿಗೆ ಕ್ಯಾನ್ಸರ್ ಪತ್ತೆಯಾಗಿದೆ. ವೈದ್ಯರ ಮಾಹಿತಿ ಪ್ರಕಾರ, ಕ್ಯಾನ್ಸರ್ ನಾಲ್ಕನೇ ಹಂತದಲ್ಲಿದೆ. ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಿದ್ದಾರೆ. ಇನ್ನು ಯಶ್ ನಾಯಕನಾಗಿ ನಟಿಸಿರುವ ಕೆಜಿಎಫ್ ಬಾಕಿ ಉಳಿದಿರುವ ಚಿತ್ರೀಕರಣವನ್ನು ಆರಂಭಿಸಿದೆ. ವರ್ಷಾಂತ್ಯಕ್ಕೆ ತೆರೆಗೆ ಬರುವ ಯೋಜನೆ ಹಾಕಿಕೊಂಡಿತ್ತು. ಆದ್ರೆ, ಲಾಕ್ಡೌನ್ ಹಿನ್ನೆಲೆ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗುವ ಸಾಧ್ಯತೆ ಹೆಚ್ಚಿದೆ.