Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಚಂಬಲ್' ತಡೆಗೆ ಹೈಕೋರ್ಟ್ ನಿರಾಕರಣೆ : ನಾಳೆ ಸಿನಿಮಾ ಬಿಡುಗಡೆ
ಐ ಪಿ ಎಸ್ ಅಧಿಕಾರಿ ಡಿ ಕೆ ರವಿ ಅವರಿಗೆ ಸಂಬಂಧಿಸಿದ ಕಥೆ ಹೊಂದಿದೆ ಎನ್ನುವ ಕಾರಣಕ್ಕೆ 'ಚಂಬಲ್' ಸಿನಿಮಾದ ಬಿಡುಗಡೆಗೆ ವಿಘ್ನ ಎದುರಾಗಿತ್ತು. ಚಿತ್ರ ರಿಲೀಸ್ ಆಗಬಾರದು ಎಂದು ಡಿಕೆ ರವಿ ತಾಯಿ ಹೈಕೋರ್ಟ್ ಮೇರೆ ಹೋಗಿದ್ದರು. ಆದರೆ, 'ಚಂಬಲ್' ಬಿಡುಗಡೆಯ ತಡೆಗೆ ಹೈಕೋರ್ಟ್ ನಿರಾಕರಿಸಿದೆ.
'ಚಂಬಲ್' ಇದು ಡಿಕೆ ರವಿ ಲೈಫ್ ಸ್ಟೋರಿ ಚಿತ್ರವೇ?
ನಾಳೆ ಸಿನಿಮಾ ಬಿಡುಗಡೆ ಮಾಡಲು ಕೋರ್ಟ್ ಅವಕಾಶ ನೀಡಿದೆ. ಶನಿವಾರದವರೆಗೆ ಸಿನಿಮಾ ಪ್ರದರ್ಶನ ಮಾಡಬಹುದಾಗಿದೆ. ಆದರೆ, ಸೋಮವಾರ ಚಿತ್ರವನ್ನು ವೀಕ್ಷಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದಂತೆ. ಇತ್ತ ಸಿನಿಮಾ ಬಿಡುಗಡೆಗೆ ತಡೆ ನೀಡಿಲ್ಲ ಎಂದು ಡಿ ಕೆ ರವಿ ತಾಯಿ ಇಂದು ಕೋರ್ಟ್ ಮುಂದೆಯೇ ಬೇಸರ ವ್ಯಕ್ತ ಪಡಿಸಿದ್ದಾರೆ.
ಇತ್ತ ಫೇಸ್ ಬುಕ್ ಲೈವ್ ಬಂದಿದ್ದ ನಟ ನೀನಾಸಂ ಸತೀಶ್ ಸಿನಿಮಾಗೆ ಯಾವ ಸಮಯದಲ್ಲಿ ಏನು ಬೇಕಾದರೂ ಆಗಬಹುದು. ಆದರೆ, ನಾವು ಈ ಚಿತ್ರವನ್ನು ಒಳ್ಳೆಯ ಉದ್ದೇಶದಿಂದ ಮಾಡಿದ್ದೇವೆ. ಡಿ ಕೆ ರವಿ ಅವರಿಗೆ ಸಂಬಂಧಪಟ್ಟ ಕೆಲವು ದೃಶ್ಯಗಳು ಚಿತ್ರದಲ್ಲಿವೆ. ಆ ರೀತಿಯ ಒಬ್ಬ ಅಧಿಕಾರಿ ಅನೇಕರಿಗೆ ಸ್ಪೂರ್ತಿ ಆಗಲಿ ಅಂತ ಈ ಚಿತ್ರ ಮಾಡಿದ್ದೇವೆ. ಎಲ್ಲರೂ ಸಿನಿಮಾ ನೋಡಿ. ಬೆಂಬಲಿಸಿ ಎಂದಿದ್ದಾರೆ ಸತೀಶ್.
ನಾಳೆ 'ಚಂಬಲ್' ಸಿನಿಮಾ ಗಾಂಧಿನಗರದ ಮೂವಿಲ್ಯಾಂಡ್ ಚಿತ್ರಮಂದಿರ ಸೇರಿದಂತೆ ರಾಜ್ಯಾದಂತ್ಯ ಬಿಡುಗಡೆಯಾಗುತ್ತಿದೆ. ಜೇಕಬ್ ವರ್ಗೀಸ್ ಈ ಚಿತ್ರದ ನಿರ್ದೇಶನ ಮಾಡಿದ್ದಾರೆ. ಸತೀಶ್ ನೀನಾಸಂ, ಪವನ್ ಕುಮಾರ್, ಕಿಶೋರ್ ಹಾಗೂ ಸೋನುಗೌಡ ತಾರಬಳಗದಲ್ಲಿ ಇದ್ದಾರೆ.