Don't Miss!
- News Namma Metro Service Extension: ಲೋಕಸಭಾ ಚುನಾವಣೆಗಾಗಿ ಮೆಟ್ರೋ ಸೇವೆ ವಿಸ್ತರಣೆ, ಗಮನಿಸಿ
- Automobiles Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಚಂಬಲ್' ತಡೆಗೆ ಹೈಕೋರ್ಟ್ ನಿರಾಕರಣೆ : ನಾಳೆ ಸಿನಿಮಾ ಬಿಡುಗಡೆ
ಐ ಪಿ ಎಸ್ ಅಧಿಕಾರಿ ಡಿ ಕೆ ರವಿ ಅವರಿಗೆ ಸಂಬಂಧಿಸಿದ ಕಥೆ ಹೊಂದಿದೆ ಎನ್ನುವ ಕಾರಣಕ್ಕೆ 'ಚಂಬಲ್' ಸಿನಿಮಾದ ಬಿಡುಗಡೆಗೆ ವಿಘ್ನ ಎದುರಾಗಿತ್ತು. ಚಿತ್ರ ರಿಲೀಸ್ ಆಗಬಾರದು ಎಂದು ಡಿಕೆ ರವಿ ತಾಯಿ ಹೈಕೋರ್ಟ್ ಮೇರೆ ಹೋಗಿದ್ದರು. ಆದರೆ, 'ಚಂಬಲ್' ಬಿಡುಗಡೆಯ ತಡೆಗೆ ಹೈಕೋರ್ಟ್ ನಿರಾಕರಿಸಿದೆ.
'ಚಂಬಲ್' ಇದು ಡಿಕೆ ರವಿ ಲೈಫ್ ಸ್ಟೋರಿ ಚಿತ್ರವೇ?
ನಾಳೆ ಸಿನಿಮಾ ಬಿಡುಗಡೆ ಮಾಡಲು ಕೋರ್ಟ್ ಅವಕಾಶ ನೀಡಿದೆ. ಶನಿವಾರದವರೆಗೆ ಸಿನಿಮಾ ಪ್ರದರ್ಶನ ಮಾಡಬಹುದಾಗಿದೆ. ಆದರೆ, ಸೋಮವಾರ ಚಿತ್ರವನ್ನು ವೀಕ್ಷಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದಂತೆ. ಇತ್ತ ಸಿನಿಮಾ ಬಿಡುಗಡೆಗೆ ತಡೆ ನೀಡಿಲ್ಲ ಎಂದು ಡಿ ಕೆ ರವಿ ತಾಯಿ ಇಂದು ಕೋರ್ಟ್ ಮುಂದೆಯೇ ಬೇಸರ ವ್ಯಕ್ತ ಪಡಿಸಿದ್ದಾರೆ.
ಇತ್ತ ಫೇಸ್ ಬುಕ್ ಲೈವ್ ಬಂದಿದ್ದ ನಟ ನೀನಾಸಂ ಸತೀಶ್ ಸಿನಿಮಾಗೆ ಯಾವ ಸಮಯದಲ್ಲಿ ಏನು ಬೇಕಾದರೂ ಆಗಬಹುದು. ಆದರೆ, ನಾವು ಈ ಚಿತ್ರವನ್ನು ಒಳ್ಳೆಯ ಉದ್ದೇಶದಿಂದ ಮಾಡಿದ್ದೇವೆ. ಡಿ ಕೆ ರವಿ ಅವರಿಗೆ ಸಂಬಂಧಪಟ್ಟ ಕೆಲವು ದೃಶ್ಯಗಳು ಚಿತ್ರದಲ್ಲಿವೆ. ಆ ರೀತಿಯ ಒಬ್ಬ ಅಧಿಕಾರಿ ಅನೇಕರಿಗೆ ಸ್ಪೂರ್ತಿ ಆಗಲಿ ಅಂತ ಈ ಚಿತ್ರ ಮಾಡಿದ್ದೇವೆ. ಎಲ್ಲರೂ ಸಿನಿಮಾ ನೋಡಿ. ಬೆಂಬಲಿಸಿ ಎಂದಿದ್ದಾರೆ ಸತೀಶ್.
ನಾಳೆ 'ಚಂಬಲ್' ಸಿನಿಮಾ ಗಾಂಧಿನಗರದ ಮೂವಿಲ್ಯಾಂಡ್ ಚಿತ್ರಮಂದಿರ ಸೇರಿದಂತೆ ರಾಜ್ಯಾದಂತ್ಯ ಬಿಡುಗಡೆಯಾಗುತ್ತಿದೆ. ಜೇಕಬ್ ವರ್ಗೀಸ್ ಈ ಚಿತ್ರದ ನಿರ್ದೇಶನ ಮಾಡಿದ್ದಾರೆ. ಸತೀಶ್ ನೀನಾಸಂ, ಪವನ್ ಕುಮಾರ್, ಕಿಶೋರ್ ಹಾಗೂ ಸೋನುಗೌಡ ತಾರಬಳಗದಲ್ಲಿ ಇದ್ದಾರೆ.