Don't Miss!
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಶೀನಾಥ್ ಅವರ ಕೊನೆಯ ಸಿನಿಮಾ ನಾಳೆ ಬಿಡುಗಡೆ
Recommended Video
ನಟ ಕಾಶೀನಾಥ್ ದೈಹಿಕವಾಗಿ ಎಲ್ಲರನ್ನು ಬಿಟ್ಟು ಅಗಲಿದ್ದಾರೆ. ಆದರೆ ಅವರ ಸಿನಿಮಾಗಳು ಎಂದಿಗೂ ಅಭಿಮಾನಿಗಳ ಮನಸಿನಲ್ಲಿ ಉಳಿದಿರುತ್ತದೆ. ಕನ್ನಡ ಚಿತ್ರರಂಗ ಎಂದು ಮರೆಯದ ಅಪೂರ್ವ ವ್ಯಕ್ತಿ ಅವರು. ಇಂತಹ ಮಹಾನ್ ನಟನ ಕೊನೆಯ ಸಿನಿಮಾ ನಾಳೆ ರಿಲೀಸ್ ಆಗುತ್ತಿರುವುದು ವಿಶೇಷ.
'ಓಳ್ ಮುನಿಸ್ವಾಮಿ' ಕಾಶೀನಾಥ್ ಅವರ 50ನೇ ಸಿನಿಮಾವಾಗಿದ್ದು, ಅದೇ ಅವರ ಕೊನೆಯ ಸಿನಿಮಾ ಆಗುವ ಹಾಗೆ ಆಯ್ತು. ಈ ಸಿನಿಮಾ ಬಿಡುಗಡೆಗೆ ಮೊದಲೇ ಕಾಶೀನಾಥ್ ನಿಧನ ಹೊಂದಿದರು.ಇನ್ನು 'ಓಳ್ ಮುನಿಸ್ವಾಮಿ' ಚಿತ್ರದಲ್ಲಿ 'ಮುನಿಸ್ವಾಮಿ'ಯಾಗಿ ಕಾಶೀನಾಥ್ ನಟಿಸಿದ್ದಾರೆ. ಬೇಜಾನ್ ಸುಳ್ಳು ಹೇಳುವ ಪಾತ್ರ ಇದಾಗಿದೆ. ಈ ಹಿಂದೆ ಈ ರೀತಿಯ ಪಾತ್ರವನ್ನು ಕಾಶೀನಾಥ್ ಮಾಡಿರಲಿಲ್ಲ.
ಕಾಶೀನಾಥ್ 50 ನಾಟೌಟ್: ಕನ್ನಡ ಸಿನಿ ಪ್ರೇಮಿಗಳಿಂದ ಸಲ್ಯೂಟ್
'ಓಳ್ ಮುನಿಸ್ವಾಮಿ' ಸಿನಿಮಾವನ್ನ ನಿರ್ದೇಶಕ ಆನಂದ್ ಪ್ರಿಯ ನಿರ್ದೇಶನ ಮಾಡಿದ್ದಾರೆ. 'ಜಲ್ಸಾ' ಸಿನಿಮಾದ ನಾಯಕ ನಿರಂಜನ್ ನಟನೆಯ ಎರಡನೇ ಸಿನಿಮಾ ಇದಾಗಿದ್ದು, ನಾಯಕಿಯಾಗಿ ಅಖಿಲಾ ಎನ್ನುವ ಹೊಸ ಹುಡುಗಿ ಕಾಣಿಸಿಕೊಂಡಿದ್ದಾರೆ. ಸಮೂಹ ಬ್ಯಾನರ್ ನ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ.
ಇದೊಂದು ಸಮಾಜದ ವಿಡಂಬನಾತ್ಮಕ, ಭಾವನೆಗಳ ತೊಳಲಾಟದ ಜೊತೆಗೆ ದೇವರು, ನಂಬಿಕೆ, ಪ್ರೀತಿ ಬದುಕಿನ ಕಥೆಯನ್ನ ಹೊಂದಿದೆಯಂತ್ತೆ. ಸಮಾಜ ಈಗ ಬದುಕನ್ನು ನೋಡುವ ದೃಷ್ಠಿಕೋನ ಬದಲಾಗಿದೆ ಎನ್ನುವ ನಿರ್ದೇಶಕರು ಅದೇ ವಿಷಯವನ್ನ ಹೈಲೈಟ್ ಮಾಡಿ ಸಿನಿಮಾದಲ್ಲಿ ತೋರಿಸಿದ್ದಾರಂತೆ. ಅಂದಹಾಗೆ, 'ಓಳ್ ಮುನಿಸ್ವಾಮಿ' ಸಿನಿಮಾ ಇದೇ ಶುಕ್ರವಾರ ಅಂದರೆ ನಾಳೆ ರಾಜ್ಯಾದಂತ್ಯ ಬಿಡುಗಡೆಯಾಗಲಿದೆ.