ಕೊನೆಗಾಣದ ಕಠಾರಿವೀರ ವಿವಾದ; ಮತ್ತಷ್ಟು ವಿಘ್ನ?

ಕಠಾರಿವೀರ ಚಿತ್ರದಲ್ಲಿ ಸುಮಾರು 7 ರಿಂದ 8, ಹಿಂದೂ ದೇವಾನುದೇವತೆಗಳ ಮೇಲಿನ ಅವಹೇಳನಕಾರಿ ಸಂಭಾಷಣೆ ಹಾಗೂ ದೃಶ್ಯಗಳನ್ನು ಕಿತ್ತುಹಾಕಲು ಸಭೆಯಲ್ಲಿ ಷರತ್ತು ವಿಧಿಸಲಾಗಿದೆ. ಇದಕ್ಕೆ ಚಿತ್ರತಂಡ ಒಪ್ಪಿದೆ ಹಾಗೂ ಸಂಧಾನ ಸಭೆ ಯಶಸ್ವಿಯಾಗಿದೆ ಎಂದು ಹೇಳಲಾಗಿತ್ತಾದರೂ ಇಂದು ಬೆಳಿಗ್ಗೆ ಮತ್ತೆ ಉಡುಪಿ ಚಿತ್ರಮಂದಿರಗಳಿಂದ ಪ್ರೇಕ್ಷಕರನ್ನು ಆಚೆ ಕಳಿಸಿ ಪ್ರದರ್ಶನ ರದ್ದುಗೊಳಿಸಿರುವ ಬೆಳವಣಿಗೆ ನಡೆದಿದೆ.
ಇದೀಗ ಮುಂದೇನಾಗುವುದೋ ಎಂಬ ಕುತೂಹಲ ಎಲ್ಲರನ್ನೂ ಕಾಡಿದೆ. ಬಿಡುಗಡೆ ವೇಳೆ ಘೋಷಿಸಿದ ನಂತರ ಒಂದೊಂದಾಗಿ ವಿಘ್ನಗಳನ್ನು ಕಂಡಿರುವ ಈ ಚಿತ್ರ, ಇನ್ನೂ ಅದೇ ದಾರಿಯಲ್ಲೇ ಮುಂದುವರಿಯುವಂತಾಗಿದೆ. ನಾಳೆ ಅದೇನು ಗ್ರಹಚಾರ ಕಾದಿದೆಯೋ ಎಂದು ಚಿತ್ರತಂಡ ಆಕಾಶಕ್ಕೆ ಮುಖ ಮಾಡುವಂತಾಗಿದ್ದರೂ ನಿರ್ಮಾಪಕ ಮುನಿರತ್ನ ಎಲ್ಲ ಸವಾಲನ್ನು ಎದುರಿಸಿ ನಿಲ್ಲುವುದಾಗಿ ಘೋಷಿಸಿದ್ದಾರೆ. (ಒನ್ ಇಂಡಿಯಾ ಕನ್ನಡ)
More from Filmibeat
English summary
Katari Veera Surasundarangi Controversy is still going on. After the Meeting held in in Udupi, everybody is curious for further development.


Click it and Unblock the Notifications











