Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನರ್ತಕಿಯಲ್ಲಿ ಕೈಕೊಟ್ಟ 3D; ಸಂಜೆ ಶೋ ಪ್ರಾರಂಭ
ಇಂದು (ಮೇ 10, 2012) ಬಿಡುಗಡೆಯಾಗಿರುವ ಕಠಾರಿವೀರ ಸುರಸುಂದರಾಂಗಿ ಚಿತ್ರಕ್ಕೆ ಕರ್ನಾಟಕದಾದ್ಯಂತ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಬೆಂಗಳೂರಿನ ಪ್ರಮುಖ ಚಿತ್ರಮಂದಿರ ನರ್ತಕಿಯಲ್ಲಿ ಈ ಮೊದಲು ಹೇಳಿದಂತೆ 3ಡಿ ವ್ಯವಸ್ಥೆ ಇರಲಿಲ್ಲ. ರೊಚ್ಚಿಗೆದ್ದ ಪ್ರೇಕ್ಷಕರು ಹಾಗೂ ನಿರ್ಮಾಪಕ ಮುನಿರತ್ನ ನಡುವೆ ಸಾಕಷ್ಟು ವಾಗ್ವಾದ ನಡೆದಿದೆ. ಕೊನೆಗೆ ಬದಲಾದ ವ್ಯವಸ್ಥೆಯಲ್ಲಿ ತ್ರಿಭುವನ್ ಚಿತ್ರಮಂದಿರದಲ್ಲಿ ಪ್ರೇಕ್ಷಕರು 3ಡಿ ಚಿತ್ರವೀಕ್ಷಣೆ ಮಾಡುತ್ತಿದ್ದಾರೆ.
ನಂತರ ನಡೆದ ಬೆಳವಣಿಗೆಯಲ್ಲಿ ನರ್ತಕಿಯಲ್ಲಿ 3ಡಿಗೆ ಬದಲಾಗಿ ನಡೆಯಬೇಕಿದ್ದ 2ಡಿ ಶೋ ಕೂಡ ರದ್ದಾಗಿದೆ. ಸಂಜೆ 4.30ಕ್ಕೆ ಶೋ ನಡೆಸಲು ತೀರ್ಮಾನಿಸಲಾಗಿದೆ. ಹೀಗಾಗಿ, ಪ್ರಮುಖ ಚಿತ್ರಮಂದಿರದಲ್ಲೇ 3ಡಿಗೆ ವಿಘ್ನ ಎದುರಾದಂತಾಗಿದೆ. ಶೀಘ್ರದಲ್ಲೇ ವಿಘ್ನ ನಿವಾರಣೆಯಾಗಲಿದ್ದು ಸಾಯಂಕಾಲ 4.30ಕ್ಕೆ ಅಲ್ಲಿ ಪ್ರದರ್ಶನ ಪ್ರಾರಂಭವಾಗಲಿದೆ. ಪ್ರೇಕ್ಷಕರು ಅಲ್ಲಿ 3ಡಿಯಲ್ಲಿ ವೀಕ್ಷಿಸಿ ಆನಂದಿಸಬಹುದಾಗಿದೆ.
ಕೆಜಿ ರಸ್ತೆಯ ತ್ರಿಭುವನ್ ಚಿತ್ರಮಂದಿರದಲ್ಲಿ ಪ್ರೇಕ್ಷಕರ ಜೊತೆ ಕುಳಿತು ಚಿತ್ರತಂಡದ ಬಹಳಷ್ಟು ಮಂದಿ ಹಾಗೂ ನಿರ್ಮಾಪಕ ಮುನಿರತ್ನ 3ಡಿ ವ್ಯವಸ್ಥೆಯಲ್ಲಿ ಚಿತ್ರ ವೀಕ್ಷಿಸಿದ್ದಾರೆ. ಪ್ರೇಕ್ಷಕರ ಅದ್ಭುತ ಪ್ರತಿಕ್ರಿಯೆಗೆ ಮುನಿರತ್ನರಿಗೆ ಈ ಮೊದಲೇ ಇದ್ದ ನಿರೀಕ್ಷೆ ಡಬಲ್ ಆಗಿದೆಯಂತೆ. ಒಟ್ಟಿನಲ್ಲಿ ಮೊದಲ ಶೋ ವರದಿಯಂತೆ ರಾಜ್ಯದೆಲ್ಲೆಡೆ ಕಠಾರಿವೀರ ಹಾಗೂ ಸುರಸುಂದರಾಂಗಿಗೆ ಜನ ಮನಸೋತಿದ್ದಾರೆ. (ಒನ್ ಇಂಡಿಯಾ ಕನ್ನಡ)