Don't Miss!
- News IT Company: ಐಟಿ-ಬಿಟಿ ಕಂಪನಿಗಳಿಗೆ ಜಲಮಂಡಳಿಯ ನೀರಿನ ಭರವಸೆ
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಠಾರಿವೀರ ಚಿತ್ರ ಬಿಡುಗಡೆಗೆ ಕೋರ್ಟ್ ಗ್ರೀನ್ ಸಿಗ್ನಲ್
ಸೂಪರ್ ಸ್ಟಾರ್ ಉಪೇಂದ್ರ ಹಾಗೂ ರಮ್ಯಾ ಜೋಡಿಯ 'ಕಠಾರಿವೀರ ಸುರಸುಂದರಾಂಗಿ' ಚಿತ್ರ ಬಿಡುಗಡೆಗೆ ಎದುರಾಗಿದ್ದ ವಿಘ್ನ ನಿವಾರಣೆಯಾಗಿದೆ. ನಿರಂಜನ ಶೆಟ್ಟಿ ಎಂಬ ನಟ ಹಾಗೂ ಲೇಖಕ ಕಠಾರಿವೀರದ ಕಥೆ ತನ್ನದೆಂದು ಆಪಾದಿಸಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ನಟ ಉಪೇಂದ್ರ, ರಾಕ್ ಲೈನ್ ಪ್ರೊಡಕ್ಷನ್ಸ್ ಹಾಗೂ ಮುನಿರತ್ನ ಅವರಿಗೆ ಕೋರ್ಟ್ ನೋಟಿಸ್ ನೀಡಿದ್ದು ಎಲ್ಲರಿಗೂ ಗೊತ್ತಿರುವ ವಿಷಯ.
ಇದೀಗ, 47ನೇ ಸಿಸಿಎಚ್ ಕೋರ್ಟ್ ಕಠಾರಿವೀರ ಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಮೇ 10, 2012 ರಂದು ಬಿಡುಗಡೆ ಘೋಷಿಸಿರುವ ಈ ಚಿತ್ರದ ಬಿಡುಗಡೆಯ ದಾರಿ ಕೋರ್ಟ್ ಈ ಆದೇಶದಿಂದ ಸುಗಮವಾದಂತಾಗಿದೆ. ಆದರೆ ಈ ಚಿತ್ರವನ್ನು ಬೇರೆ ಭಾಷೆಗೆ ಡಬ್ ಮಾಡದಂತೆ ನಿರ್ಮಾಪಕ ಮುನಿರತ್ನರಿಗೆ ಕೋರ್ಟ್ ಆದೇಶಿಸಿದೆ. ಮುಂದಿನ ವಿಚಾರಣೆಯನ್ನು ಮೇ 25, 2012ಕ್ಕೆ ಮುಂದೂಡಲಾಗಿದೆ.
ಒಟ್ಟಿನಲ್ಲಿ, ಬಿಡುಗಡೆಗೆ ಸಿದ್ಧವಾದಾಗಿನಿಂದಲೂ ಒಂದಲ್ಲ ಒಂದು ವಿವಾದ ಅಥವಾ ಕಂಟಕ ಎದುರಿಸುತ್ತಿರುವ ಕಠಾರಿವೀರ ಚಿತ್ರತಂಡ, ಇದೀಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಪ್ರಚಾರ ಕಾರ್ಯದಲ್ಲಿ ಬಹಳಷ್ಟು ಬಿಜಿಯಾಗಿದ್ದ ಚಿತ್ರತಂಡಕ್ಕೆ ಈ ಹಠಾತ್ ಆಗಿದ್ದ ಬೆಳವಣಿಗೆಯಿಂದ ಸಹಜವಾಗಿ ಆತಂಕವಾಗಿತ್ತು. ಇದೀಗ ಬಂದ ಕೋರ್ಟ್ ಆದೇಶದಿಂದ ಕಠಾರಿವೀರ ಬಿಡುಗಡೆ ಅಂದುಕೊಂಡತೆ ಮೇ 10ಕ್ಕೇ ಆಗಲಿದೆ. (ಒನ್ ಇಂಡಿಯಾ ಕನ್ನಡ)