Don't Miss!
- News India weather: ಈ ಭಾಗಗಳಲ್ಲಿ ಮುಂದಿನ ಐದು ದಿನ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಣ್ಣಾವ್ರ ನೆನಪಿನಲ್ಲಿ ಅಪ್ಪು ನಿರ್ಮಾಣದ ಮೊದಲ ಸಿನಿಮಾ ಬಿಡುಗಡೆ
ಪಿ.ಆರ್.ಕೆ ಬ್ಯಾನರ್ ಹುಟ್ಟಿಕೊಂಡಿದ್ದೇ ಡಾ ರಾಜ್ ಕುಮಾರ್ ಅವರ ನೆನಪಿನಲ್ಲಿ ಮತ್ತು ಅವರ ಆಶೀರ್ವಾದಲ್ಲಿ ಎಂದು ಪುನೀತ್ ರಾಜ್ ಕುಮಾರ್ ಹೇಳಿದ್ದರು. ಈಗ ಪಿ.ಆರ್.ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮೊದಲ ಸಿನಿಮಾ ಅಣ್ಣಾವ್ರ ನೆನಪಿನಾರ್ಥ ಬಿಡುಗಡೆಯಾಗುತ್ತಿದೆ.
ಹೌದು, ಏಪ್ರಿಲ್ 12 ರಂದು ಡಾ ರಾಜ್ ಕುಮಾರ್ ಪುಣ್ಯ ಸ್ಮರಣೆ. ಅದೇ ದಿನ ಪುನೀತ್ ನಿರ್ಮಾಣದ ಚೊಚ್ಚಲ ಸಿನಿಮಾ ಕವಲುದಾರಿ ರಿಲೀಸ್ ಆಗುತ್ತಿದೆ. ಈ ಮೂಲಕ ಅಪ್ಪಾಜಿಯ ಆಶೀರ್ವಾದಿಂದ ಅವರ ನೆನಪಿನಲ್ಲಿ ಸ್ಥಾಪಿಸಿದ ಸಂಸ್ಥೆಗೆ ಉತ್ತಮ ಆರಂಭ ಸಿಗುತ್ತಿದೆ.
ಈ ವಾರ 'ಕವಲುದಾರಿ' ಜೊತೆ 3 ಚಿತ್ರಗಳ ಬಿಡುಗಡೆ
'ಆಪರೇಷನ್ ಅಲಮೇಲಮ್ಮ' ಖ್ಯಾತಿಯ ರಿಷಿ ನಾಯಕನಾಗಿ ನಟಿಸಿದ್ದು, ಹಿರಿಯ ನಟ ಅನಂತ್ ನಾಗ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸುಮನ್ ರಂಗನಾಥ್ ಹಾಗೂ ರೋಷನಿ ಪ್ರಕಾಶ್ ಕೂಡ ಕಾಣಿಸಿಕೊಂಡಿದ್ದಾರೆ.
ಇನ್ನುಳಿದಂತೆ 'ಗೋಧಿಬಣ್ಣ ಸಾಧಾರಣ ಮೈಕಟ್ಟು' ನಿರ್ದೇಶಿಸಿದ್ದ ಹೇಮಂತ್ ಕುಮಾರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಚರಣ್ ರಾಜ್ ಸಂಗೀತ ನೀಡಿದ್ದಾರೆ.
ಈಗಾಗಲೇ ಟ್ರೈಲರ್ ಮತ್ತು ಹಾಡುಗಳು ಮೂಲಕ ಕವಲು ದಾರಿ ಸಿನಿಮಾ ಹೊಸ ಭರವಸೆ ಮೂಡಿಸಿದೆ. ಸಸ್ಪೆನ್ಸ್ ಥ್ರಿಲ್ಲಿಂಗ್ ಕಥೆ ಹೊಂದಿರುವ ಈ ಚಿತ್ರ ಸಿನಿಪ್ರೇಕ್ಷಕರನ್ನ ರಂಜಿಸುವಲ್ಲಿ ನಿಜಕ್ಕೂ ಯಶಸ್ಸು ಕಾಣುತ್ತೆ ಎಂದು ಸ್ವತಃ ಪುನೀತ್ ಕೂಡ ಅಭಿಪ್ರಾಯಪಟ್ಟಿದ್ದಾರೆ.