Don't Miss!
- News Priyanka Gandhi V/s Amit Shah: ಕದನ ಕಣ ಬೆಂಗಳೂರು ದಕ್ಷಿಣದಲ್ಲಿ ಪ್ರಿಯಾಂಕಾ ಗಾಂಧಿ, ಅಮಿತ್ ಶಾ ಮುಖಾಮುಖಿ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಸಿಸಿ 2018 ಟ್ರೋಫಿಗೆ ಮುತ್ತಿಟ್ಟ ಗೋಲ್ಡನ್ ಸ್ಟಾರ್ ಗಣೇಶ್ ಹುಡುಗ್ರು
ಬೆಂಗಳೂರು, ಸೆಪ್ಟೆಂಬರ್ 9: ಕುತೂಹಲಕಾರಿ ಕರ್ನಾಟಕ ಚಲನ ಚಿತ್ರ ಕಪ್ 2018 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ರಾಕಿಂಗ್ ಸ್ಟಾರ್ ಯಶ್ ನಾಯಕತ್ವದ ರಾಷ್ಟ್ರಕೂಟ ಪ್ಯಾಂಥರ್ಸ್ ಎದುರು ಗೋಲ್ಡನ್ ಸ್ಟಾರ್ ಗಣೇಶ್ ನಾಯಕತ್ವದ ಒಡೆಯರ್ ಚಾರ್ಜರ್ಸ್ ತಂಡ 6 ವಿಕೆಟ್ ಜಯ ಸಾಧಿಸಿದೆ.
ಸ್ಟಾರ್ ಆಟಗಾರ ಶ್ರೀಲಂಕಾದ ತಿಲಕರತ್ನೆ ದಿಲ್ಶನ್ ಅವರ ಆಲ್ ರೌಂಡರ್ ಆಟದ ನೆರವಿನಿಂದ ಒಡೆಯರ್ ಚಾರ್ಜರ್ಸ್ ರೋಜಕ ಗೆಲುವು ತನ್ನದಾಗಿಸಿಕೊಂಡಿತು. ದಿಲ್ಶನ್ ಅರ್ಧ ಶತಕ (68/31) ರನ್ ನೊಂದಿಗೆ 3 ವಿಕೆಟ್ ಪಡೆದು ಪಂದ್ಯದಲ್ಲಿ ಮಿಂಚಿದರು.
ರಾಷ್ಟ್ರಕೂಟ ಪ್ಯಾಂಥರ್ಸ್ ತಂಡ ಒಡೆಯರ್ ಚಾರ್ಜರ್ಸ್ ತಂಡಕ್ಕೆ 123 ರನ್ ಗುರಿ ನೀಡಿತ್ತು. ಸ್ಟಾರ್ ಆಟಗಾರ ಒವೇಶ್ ಷಾ ಅವರ ಭರ್ಜರಿ ಬ್ಯಾಟಿಂಗ್, ಎದುರಾಳಿಗೆ ಸವಾಲಿನ ಮೊತ್ತ ನೀಡುವಲ್ಲಿ ನೆರವಾಯಿತು. ಗುರಿ ಬೆನ್ನಟ್ಟಿದ ಚಾರ್ಜರ್ಸ್ 10 ಓವರ್ ಗೆ 4 ವಿಕೆಟ್ ಕಳೆದು 127 ರನ್ ಪೇರಿಸಿದರು.
ಮೊದಲು ಬ್ಯಾಟಿಂಗ್ ಮಾಡಿದ ರಾಷ್ಟ್ರಕೂಟ ಪ್ಯಾಂಥರ್ಸ್ ನಿಂದ ಷಾ ಕೇವಲ 11 ಎಸೆತಗಳಿಗೆ ಅಜೇಯ 42 ರನ್ ಸೇರಿಸಿದರು. ಷಾ ರನ್ ನೆರವು ಬಿಟ್ಟರೆ ಎಸ್ ಹೂವರ್ 33, ರಾಜೀವ್ 14, ಕೃಷ್ಣ 19 ರನ್ ಕೊಡುಗೆ ನೀಡಿದರು. ಹೀಗಾಗಿ ತಂಡ 10 ಓವರ್ ಗಳಲ್ಲಿ 6 ವಿಕೆಟ್ ಕಳೆದು 122 ರನ್ ಪೇರಿಸಿತು.
ಪ್ಯಾಂಥರ್ಸ್ ಇನ್ನಿಂಗ್ಸ್ ವೇಳೆ ಚಾರ್ಜರ್ಸ್ ನ ಸ್ಟಾರ್ ಆಟಗಾರ ತಿಲಕರತ್ನೆ ದಿಲ್ಶನ್ ಕೇವಲ 1 ರನ್ ಗೆ 3 ವಿಕೆಟ್ ಉರುಳಿಸಿದರು. ಪ್ರಸನ್ನ, ರಾಜು ಭಟ್ಕಳ್ ಮತ್ತು ಪ್ರತಾಪ್ ಅವರು ತಲಾ ಒಂದೊಂದು ವಿಕೆಟ್ ಪಡೆದರು. ಚಾರ್ಜರ್ಸ್ ಇನ್ನಿಂಗ್ಸ್ ಗೆ ಇಳಿದಿದ್ದು, 3.2 ಓವರ್ ಮುಕ್ತಾಯಕ್ಕೆ 1 ವಿಕೆಟ್ ಕಳೆದು 41 ರನ್ ಪೇರಿಸಿತ್ತು.