Don't Miss!
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- News Priyanka Gandhi: ಚುನಾವಣೆಯಲ್ಲಿ ಸದ್ದು ಮಾಡುತ್ತಿದೆ ಮಂಗಳಸೂತ್ರ: ಮೋದಿಗೆ ಪ್ರಿಯಾಂಕಾ ತಿರುಗೇಟು
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಸಿಸಿ ಸೀಸನ್ 3 ಶುರು: ಈ ಸಲ ಮೈಸೂರಿನಲ್ಲಿ ಪಂದ್ಯಾವಳಿ
Recommended Video
ಕ್ರಿಕೆಟ್ ಬ್ಯಾಟ್ ಮತ್ತು ಬಾಲ್ ಹಿಡಿದು ಮತ್ತೆ ಕ್ರೀಡಾಂಗಣಕ್ಕೆ ಧುಮುಕಲಿದ್ದಾರೆ ಸ್ಯಾಂಡಲ್ ವುಡ್ ಸ್ಟಾರ್ಸ್. ಸುದೀಪ್, ಪುನೀತ್, ಶಿವಣ್ಣ, ಉಪೇಂದ್ರ, ಯಶ್, ಗಣೇಶ್ ಸೇರಿದಂತೆ ಕನ್ನಡ ಚಿತ್ರರಂಗದ ಹಲವು ನಟ, ತಂತ್ರಜ್ಞರು, ನಿರ್ದೇಶಕ, ನಿರ್ಮಾಪಕರು ಸೇರಿದಂತೆ ಇಂಡಸ್ಟ್ರಿಯವರು ಈ ಟೂರ್ನಿಯಲ್ಲಿ ಭಾಗಿಯಾಗಿದ್ದರು.
ಈಗಾಗಲೇ ಎರಡು ಆವೃತ್ತಿಯನ್ನ ಯಶಸ್ವಿಯಾಗಿ ಮುಗಿಸಿರುವ ಸ್ಯಾಂಡಲ್ ವುಡ್ ಈಗ ಕನ್ನಡ ಚಲನಚಿತ್ರ ಕಪ್ (ಕೆಸಿಸಿ) ಮೂರನೇ ಆವೃತ್ತಿ ನಡೆಸಲು ತೀರ್ಮಾನಿಸಿದೆ. ಕಳೆದ ಬಾರಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟೂರ್ನಿ ನಡೆದಿತ್ತು. ಈ ಸಲ ಮೈಸೂರಿನಲ್ಲಿ ಪಂದ್ಯಾವಳಿ ನಡೆಯಲಿದೆ.
ಕೊನೆಯ ಬಾಲ್ ನಲ್ಲಿ ಫೈನಲ್ ಗೆದ್ದ ಗಣೇಶ್: 6 ಎಸೆತದ ರೋಚಕ ಕಥೆ
ಕಿಚ್ಚ ಸುದೀಪ್, ಜಾಕ್ ಮಂಜು, ಸಿನಿಮಾ ಪತ್ರಕರ್ತ ಸದಾಶಿವ ಶಣೈ, ನಿರ್ದೇಶಕ ಕೃಷ್ಣ, ಕಾರ್ತಿಕ್, ಕೆಪಿ ಶ್ರೀಕಾಂತ್ ಎಲ್ಲರೂ ಒಟ್ಟುಗೂಡಿ ಮೂರನೇ ಆವೃತ್ತಿಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಅಧಿಕೃತ ಮಾಹಿತಿ ಹೊರಹಾಕಿರುವ ಸುದೀಪ್ ಮತ್ತು ಕೆಸಿಸಿ ಸದಸ್ಯರು ಸೆಪ್ಟೆಂಬರ್ 6, 7, 8 ರಂದು ಟೂರ್ನಿ ನಡೆಯುವುದಾಗಿ ತಿಳಿಸಿದ್ದಾರೆ.
ಕಳೆದ ಬಾರಿ ಒಟ್ಟು ಆರು ತಂಡಗಳು ಭಾಗಿಯಾಗಿದ್ದವು. ಪ್ರತಿಯೊಂದು ತಂಡದಲ್ಲೂ ಒಬ್ಬೊಬ್ಬ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರರು ಆಡಿದ್ದರು. ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಉಪೇಂದ್ರ, ಸುದೀಪ್, ಯಶ್ ಮತ್ತು ಗಣೇಶ್ ಅಂತಹ ಸ್ಟಾರ್ ಆಟಗಾರರಿದ್ದರು.
'ಕೆಸಿಸಿ' ಫೈನಲ್ ಪಂದ್ಯದಲ್ಲಿ ಯಾರಿಗೆ ಯಾವ ಪ್ರಶಸ್ತಿ ಸಿಕ್ತು.?
ಮೊದಲ ಆವೃತ್ತಿಯಲ್ಲಿ ಶಿವರಾಜ್ ಕುಮಾರ್ ತಂಡ ಗೆದ್ದಿದ್ದರು. ಎರಡನೇ ಆವೃತ್ತಿಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ತಂಡ ವಿನ್ನರ್ ಆಗಿ ಹೊರಹೊಮ್ಮಿತ್ತು. ಈಗ ಮೂರನೇ ಆವೃತ್ತಿಯಲ್ಲಿ ಯಾರೆಲ್ಲ ಆಡಲಿದ್ದಾರೆ ಎಂಬುದರ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ.
ಈ ಬಾರಿಯೂ ಅಂತಾರಾಷ್ಟ್ರೀಯ ಆಟಗಾರರು ಆಡ್ತಾರಾ? ಕಳೆದ ಬಾರಿ ಆಡದ ಸ್ಯಾಂಡಲ್ ವುಡ್ ಸ್ಟಾರ್ ಗಳು ಈ ಸಲ ಭಾಗಿಯಾಗ್ತಾರಾ? ಈ ಆವೃತ್ತಿಯ ವಿಶೇಷತೆ ಏನು ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ಹೊರಬೀಳಲಿದೆ.