Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕೆಸಿಸಿ' ಟೂರ್ನಿಯ ವೇಳಾಪಟ್ಟಿ ನೋಡಿ: ಯಾರ ಪಂದ್ಯ ಯಾರ ವಿರುದ್ಧ.?
Recommended Video
ಸ್ಯಾಂಡಲ್ ವುಡ್ ನಟರ ಆಯೋಜನೆಯಲ್ಲಿ ನಡೆಯುವ ಕೆಸಿಸಿ ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆಯಾಗಿದೆ. ಸುದೀಪ್, ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಯಶ್, ಉಪೇಂದ್ರ ಹಾಗೂ ಗಣೇಶ್ ಸೇರಿದಂತೆ ಕನ್ನಡ ನಟರು ಭಾಗವಹಿಸುವ ಈ ಟೂರ್ನಿಯಲ್ಲಿ ಈ ಬಾರಿ ಅಂತಾರಾಷ್ಟ್ರೀಯ ಆಟಗಾರರು ಆಡುತ್ತಿರುವುದು ವಿಶೇಷ.
ಕಿಚ್ಚ ಸುದೀಪ್ ತಮ್ಮ ಟ್ವಿಟ್ಟರ್ ನಲ್ಲಿ ಕೆಸಿಸಿ ಟೂರ್ನಿಯ ವೇಳಾಪಟ್ಟಿ ಪೋಸ್ಟ್ ಮಾಡಿದ್ದು, ಸೆಪ್ಟಂಬರ್ 8 ರಂದು ಕೆಸಿಸಿಯ ಮೊದಲ ಪಂದ್ಯ ನಡೆಯಲಿದೆ. ಮೊದಲ ದಿನ ಮಧ್ಯಾಹ್ನ 1.30ಕ್ಕೆ ಒಡೆಯರ್ ಚಾರ್ಜಸ್ ವರ್ಸಸ್ ಕದಂಬ ಲಯನ್ಸ್ ನಡುವೆ ಮೊದಲ ಪಂದ್ಯ ನಡೆಯಲಿದೆ.
ನಂತರ 3.45ಕ್ಕೆ ರಾಷ್ಟ್ರಕೂಟ ಪ್ಯಾಂಥರ್ಸ್ ವರ್ಸಸ್ ವಿಜಯನಗರ ಪೇಟ್ರಿಯಟ್ಸ್ ಪಂದ್ಯ ಜರುಗಲಿದೆ. ಆಮೇಲೆ 6 ಗಂಟೆಗೆ ಹೊಯ್ಸಳ ಈಗಲ್ಸ್ ವರ್ಸಸ್ ಒಡೆಯರ್ ಚಾರ್ಜಸ್ ಪಂದ್ಯ ಆರಂಭವಾಗಲಿದೆ. ಮೊದಲ ದಿನದ ಕೊನೆಯ ಪಂದ್ಯ ವಿಜಯನಗರ ಪೇಟ್ರಿಯಟ್ಸ್ ವರ್ಸಸ್ ಗಂಗಾ ವಾರಿಯರ್ಸ್ ನಡುವೆ ನಡೆಲಿದೆ.
ಎರಡನೇ ದಿನ ಮಧ್ಯಾಹ್ನ 2 ಗಂಟೆಗೆ ಗಂಗಾ ವಾರಿಯರ್ಸ್ ವರ್ಸಸ್ ರಾಷ್ಟ್ರಕೂಟ ಪ್ಯಾಂಥರ್ಸ್ ಪಂದ್ಯ ಜರುಗಲಿದೆ. ಸಂಜೆ 4.15ಕ್ಕೆ ಕದಂಬ ಲಯನ್ಸ್ ವರ್ಸಸ್ ಹೊಯ್ಸಳ ಈಗಲ್ಸ್ ಪಂದ್ಯ ಆರಂಭವಾಗಲಿದೆ. ಲೀಗ್ ಹಂತದ ಪಂದ್ಯಗಳು ಇಲ್ಲಿಗೆ ಮುಕ್ತಾಯವಾಗಲಿದ್ದು, ರಾತ್ರಿ 8.15ಕ್ಕೆ ಫೈನಲ್ ಪಂದ್ಯ ನಡೆಯಲಿದೆ.
ಅಂತಾರಾಷ್ಟ್ರೀಯ ಆಟಗಾರರಾದ ವಿರೇಂದ್ರ ಸೆಹ್ವಾಗ್ ಕದಂಬ ಲಯನ್ಸ್ ನಲ್ಲಿ ಆಟವಾಡಿದ್ರೆ, ಹರ್ಷೆಲ್ ಗಿಬ್ಸ್ ಹೊಯ್ಸಳ ಈಗಲ್ಸ್, ತಿಲಕರತ್ನೆ ದಿಲ್ಸ್ಯಾನ್ ಒಡೆಯರ್ ಚಾರ್ಜರ್ಸ್, ಲ್ಯಾನ್ಸ್ ಕ್ಲೂಸ್ನರ್ ಗಂಗಾ ವಾರಿಯರ್ಸ್, ಓವೈ ಷಾ ರಾಷ್ಟ್ರಕೂಟ ಪ್ಯಾಂಥರ್ಸ್ ಹಾಗೂ ಆಯಡಂ ಗಿಲ್ಕ್ರಿಸ್ಟ್ ವಿಜಯನಗರ ಪೇಟ್ರಿಯಟ್ಸ್ ತಂಡದಲ್ಲಿ ಆಡಲಿದ್ದಾರೆ.
ಈ ಕಡೆ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ವಿಜಯನಗರ ಪೇಟ್ರಿಯಟ್ಸ್, ಪುನೀತ್ ರಾಜಕುಮಾರ್ ಗಂಗಾ ವಾರಿಯರ್ಸ್, ಸುದೀಪ್ ಕದಂಬ ಲಯನ್ಸ್, ಯಶ್ ರಾಷ್ಟ್ರಕೂಟ ಪ್ಯಾಂಥರ್ಸ್, ಉಪೇಂದ್ರ ಹೊಯ್ಸಳ ಈಗಲ್ಸ್, ಹಾಗೂ ಗಣೇಶ್ ಒಡೆಯರ್ ಚಾರ್ಜರ್ಸ್ ತಂಡದ ಪರವಾಗಿ ಅಖಾಡಕ್ಕೆ ಇಳಿಯಲಿದ್ದಾರೆ.