Don't Miss!
- News ಕೋವಿಡ್ ಸಮಯದಲ್ಲಿ ನಾನು ತಪ್ಪು ಮಾಡಿದ್ದೇನೆಂಬುದು ಅಪಪ್ರಚಾರ:ಕೆ ಸುಧಾಕರ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ 'ಕೆಸಿಸಿ' ಕ್ರಿಕೆಟ್ ಟೂರ್ನಿ
ಏಪ್ರಿಲ್ ತಿಂಗಳ ಆರಂಭದಲ್ಲಿ ಕನ್ನಡ ಸಿನಿತಾರೆಯರಲ್ಲೆ ಸೇರಿ ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಟೂರ್ನಿ ನಡೆಸಿದ್ದರು. ಕಿಚ್ಚ ಸುದೀಪ್ ಅವರ ಸಾರಥ್ಯದಲ್ಲಿ ಶಿವರಾಜ್ ಕುಮಾರ್, ಯಶ್, ರಕ್ಷಿತ್ ಶೆಟ್ಟಿ, ಪುನೀತ್ ರಾಜ್ ಸೇರಿ ಮೈದಾನಕ್ಕಿಳಿದು ಆಟವಾಡಿದ್ದರು.
ಸಿಸಿಎಲ್ ಮಾದರಿಯಲ್ಲಿ ಆಯೋಜನೆ ಮಾಡಿದ್ದ ಈ ಕ್ರಿಕೆಟ್ ಟೂರ್ನಿಯನ್ನ ಅದೇಷ್ಟೋ ಅಭಿಮಾನಿ ನೋಡಲು ಸಾಧ್ಯವಾಗಿರಲಿಲ್ಲ. ಇದೀಗ, ಸ್ಯಾಂಡಲ್ ವುಡ ತಾರೆಯರು ಆಡಿದ ಕ್ರಿಕೆಟ್ ಪಂದ್ಯಗಳನ್ನ ಟಿವಿಯಲ್ಲಿ ನೋಡುವ ಅವಕಾಶ ಸಿಕ್ಕಿದೆ.
ಸುದೀಪ್-ಯಶ್-ಶಿವಣ್ಣ ಕ್ರಿಕೆಟ್ ಆಡಿದ್ರು: ನೋಡೋದಕ್ಕೆ ಬಂದ್ದಿದವರು ಯಾರು ಗೊತ್ತಾ.?
ಇದೇ ತಿಂಗಳ 12 ಮತ್ತು 13 ರಂದು ನಿಮ್ಮ ನೆಚ್ಚಿನ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ. ಮತ್ತೆ 19 ಮತ್ತು 20ನೇ ತಾರೀಖು ಮರು ಪ್ರಸಾರವಾಗಲಿದೆ. ಸಮಯದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಸ್ಯಾಂಡಲ್ ವುಡ್ ನಲ್ಲಿ 'T-10' ಕ್ರಿಕೆಟ್ ಟೂರ್ನಿ
ಒಟ್ಟು ಆರು ತಂಡಗಳು ಈ ಟೂರ್ನಿ ಯಲ್ಲಿ ಭಾಗಿಯಾಗಿದ್ದು, ಸುದೀಪ್, ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ರಕ್ಷಿತ್ ಶೆಟ್ಟಿ, ನಿರ್ದೇಶಕ ನಂದಕಿಶೋರ್, ಇಂದ್ರಜೀತ್ ಲಂಕೇಶ್, ನಿರ್ಮಾಪಕ ಶ್ರೀಕಾಂತ್ ಸೇರಿದಂತೆ ಅನೇಕರು ಕಲಾವಿದರು ಭಾಗವಹಿಸಿದ್ದರು.
ಇದು 'ಟಿ 10' ಪಂದ್ಯವಾಗಿದ್ದು, ಪ್ರತಿ ತಂಡಕ್ಕೆ 10 ಓವರ್ ಪಂದ್ಯವಾಳಿ ಆಗಿತ್ತು. ಈ ಟೂರ್ನಿಯನ್ನ ಹೆಬ್ಬುಲಿ ನಿರ್ದೇಶಕ ಕೃಷ್ಣ ಸಾರಥ್ಯದ ತಂಡ ಗೆದ್ದುಕೊಂಡಿತ್ತು. ಈ ತಂಡದಲ್ಲಿ ಶಿವರಾಜ್ ಕುಮಾರ್ ಸ್ಟಾರ್ ಆಟಗಾರರಾಗಿದ್ದರು. ಕ್ರಿಕೆಟ್ ಪಂದ್ಯದ ಜೊತೆಗೆ ವಿಶೇಷ ಕಾರ್ಯಕ್ರಮ ಕೂಡ ಪ್ರಸಾರವಾಗಲಿದೆ.