Don't Miss!
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- News Darshan: ಡಿ.ಕೆ. ಸುರೇಶ್ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ 'ಕೆಸಿಸಿ' ಕ್ರಿಕೆಟ್ ಟೂರ್ನಿ
ಏಪ್ರಿಲ್ ತಿಂಗಳ ಆರಂಭದಲ್ಲಿ ಕನ್ನಡ ಸಿನಿತಾರೆಯರಲ್ಲೆ ಸೇರಿ ಕನ್ನಡ ಚಲನಚಿತ್ರ ಕಪ್ ಕ್ರಿಕೆಟ್ ಟೂರ್ನಿ ನಡೆಸಿದ್ದರು. ಕಿಚ್ಚ ಸುದೀಪ್ ಅವರ ಸಾರಥ್ಯದಲ್ಲಿ ಶಿವರಾಜ್ ಕುಮಾರ್, ಯಶ್, ರಕ್ಷಿತ್ ಶೆಟ್ಟಿ, ಪುನೀತ್ ರಾಜ್ ಸೇರಿ ಮೈದಾನಕ್ಕಿಳಿದು ಆಟವಾಡಿದ್ದರು.
ಸಿಸಿಎಲ್ ಮಾದರಿಯಲ್ಲಿ ಆಯೋಜನೆ ಮಾಡಿದ್ದ ಈ ಕ್ರಿಕೆಟ್ ಟೂರ್ನಿಯನ್ನ ಅದೇಷ್ಟೋ ಅಭಿಮಾನಿ ನೋಡಲು ಸಾಧ್ಯವಾಗಿರಲಿಲ್ಲ. ಇದೀಗ, ಸ್ಯಾಂಡಲ್ ವುಡ ತಾರೆಯರು ಆಡಿದ ಕ್ರಿಕೆಟ್ ಪಂದ್ಯಗಳನ್ನ ಟಿವಿಯಲ್ಲಿ ನೋಡುವ ಅವಕಾಶ ಸಿಕ್ಕಿದೆ.
ಸುದೀಪ್-ಯಶ್-ಶಿವಣ್ಣ ಕ್ರಿಕೆಟ್ ಆಡಿದ್ರು: ನೋಡೋದಕ್ಕೆ ಬಂದ್ದಿದವರು ಯಾರು ಗೊತ್ತಾ.?
ಇದೇ ತಿಂಗಳ 12 ಮತ್ತು 13 ರಂದು ನಿಮ್ಮ ನೆಚ್ಚಿನ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ. ಮತ್ತೆ 19 ಮತ್ತು 20ನೇ ತಾರೀಖು ಮರು ಪ್ರಸಾರವಾಗಲಿದೆ. ಸಮಯದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಸ್ಯಾಂಡಲ್ ವುಡ್ ನಲ್ಲಿ 'T-10' ಕ್ರಿಕೆಟ್ ಟೂರ್ನಿ
ಒಟ್ಟು ಆರು ತಂಡಗಳು ಈ ಟೂರ್ನಿ ಯಲ್ಲಿ ಭಾಗಿಯಾಗಿದ್ದು, ಸುದೀಪ್, ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ರಕ್ಷಿತ್ ಶೆಟ್ಟಿ, ನಿರ್ದೇಶಕ ನಂದಕಿಶೋರ್, ಇಂದ್ರಜೀತ್ ಲಂಕೇಶ್, ನಿರ್ಮಾಪಕ ಶ್ರೀಕಾಂತ್ ಸೇರಿದಂತೆ ಅನೇಕರು ಕಲಾವಿದರು ಭಾಗವಹಿಸಿದ್ದರು.
ಇದು 'ಟಿ 10' ಪಂದ್ಯವಾಗಿದ್ದು, ಪ್ರತಿ ತಂಡಕ್ಕೆ 10 ಓವರ್ ಪಂದ್ಯವಾಳಿ ಆಗಿತ್ತು. ಈ ಟೂರ್ನಿಯನ್ನ ಹೆಬ್ಬುಲಿ ನಿರ್ದೇಶಕ ಕೃಷ್ಣ ಸಾರಥ್ಯದ ತಂಡ ಗೆದ್ದುಕೊಂಡಿತ್ತು. ಈ ತಂಡದಲ್ಲಿ ಶಿವರಾಜ್ ಕುಮಾರ್ ಸ್ಟಾರ್ ಆಟಗಾರರಾಗಿದ್ದರು. ಕ್ರಿಕೆಟ್ ಪಂದ್ಯದ ಜೊತೆಗೆ ವಿಶೇಷ ಕಾರ್ಯಕ್ರಮ ಕೂಡ ಪ್ರಸಾರವಾಗಲಿದೆ.