Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ರಗ್ಸ್ ಪ್ರಕರಣ: 'ಕೆಂಪೇಗೌಡ' ಸಿನಿಮಾ ನಿರ್ಮಾಪಕ ಶಂಕರಗೌಡಗೆ 14 ದಿನ ನ್ಯಾಯಾಂಗ ಬಂಧನ
ಡ್ರಗ್ಸ್ ಪ್ರಕರಣ ಸಂಬಂಧ ಅರೆಸ್ಟ್ ಆಗಿರುವ ಸ್ಯಾಂಡಲ್ ವುಡ್ನ ನಿರ್ಮಾಪಕ ಶಂಕರಗೌಡ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಲಾಗಿದೆ. ಕೋರಮಂಗಲದಲ್ಲಿರುವ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರ ಆದೇಶ ನೀಡಿದ್ದಾರೆ.
Recommended Video
ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದಡಿ ನೈಜೀರಿಯಾ ಪ್ರಜೆಗಳು ಸೇರಿ ಹಲವರನ್ನು ಇತ್ತೀಚಿಗಷ್ಟೆ ಪೊಲೀಸರು ಬಂಧಿಸಿದ್ದರು. ಸುಮಾರು 4 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದರು. ಆರೋಪಿಗಳು ನೀಡಿದ್ದ ಮಾಹಿತಿ ಆಧರಿಸಿ ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ಮಸ್ತಾನ್ ಚಂದ್ರ ಹಾಗೂ ನಿರ್ಮಾಪಕ ಶಂಕರಗೌಡ ಕಚೇರಿ ಮೇಲೆ ದಾಳಿ ಮಾಡಿದ್ದರು.
ಪ್ರಕರಣ ಸಂಬಂಧ ಶಂಕರಗೌಡ ಅವರನ್ನು ವಶಕ್ಕೆ ಪಡೆದಿದ್ದ ಪೊಲೀಸರು, ಹೆಚ್ಚಿನ ವಿಚಾರಣೆ ನಡೆಸಿ, ಸೂಕ್ತ ದಾಖಲೆ ಲಭ್ಯವಾದ ಬಳಿಕ ಶಂಕರಗೌಡ ಅವರನ್ನು ಬಂಧಿಸಿದ್ದರು.
ಶಂಕರಗೌಡ, ಕೆಂಪೇಗೌಡ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಶಂಕರಗೌಡ, ತಮ್ಮದೇ ಕಚೇರಿ ಹಾಗೂ ಇತರೆಡೆ ಪಾರ್ಟಿಗಳನ್ನು ಆಯೋಜಿಸಿ, ಅಲ್ಲಿಗೆ ಬರುತ್ತಿದ್ದ ಅತಿಥಿಗಳಿಗೆ ಡ್ರಗ್ಸ್ ಕೊಡುತ್ತಿದ್ದರು. ಡ್ರಗ್ಸ್ ಖರೀದಿಸಲು ಹಣವನ್ನು ನೀಡುತ್ತಿದ್ದರು ಎಂಬುದು ಗೊತ್ತಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಆಂಧ್ರ, ದೆಹಲಿ, ಕೊಲ್ಕತ್ತಾ, ಮುಂಬೈ ಮೂಲದ ಸೆಲೆಬ್ರಿಟಿಗಳು, ಉದ್ಯಮಿಗಳು ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಹೈದರಾಬಾದ್ ಮೂಲದ ಸೆಲೆಬ್ರಿಟಿಗಳು ಮತ್ತು ಉದ್ಯಮಿಗಳೇ ಜಾಸ್ತಿ ಇರುತ್ತಿದ್ದರು ಎನ್ನುವ ಮಾಹಿತಿ ತಿಳಿದು ಬಂದಿದೆ.
ಶಂಕರಗೌಡ ಮಾಹಿತಿ ಆಧರಿಸಿ ಗೋವಿಂದಪುರ ಪೊಲೀಸರು ಮತ್ತಷ್ಟು ಸೆಲೆಬ್ರಿಟಿಗಳಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ.