Don't Miss!
- Sports
Ranji Trophy: ಮಯಾಂಕ್, ಸಮರ್ಥ್ ಅರ್ಧಶತಕ; ಕ್ವಾರ್ಟರ್ಫೈನಲ್ನಲ್ಲಿ ಉತ್ತರಾಖಂಡ ವಿರುದ್ಧ ಕರ್ನಾಟಕ ಮೇಲುಗೈ
- News
ಸೋದರರಂತೆ ಇದ್ದವರ ನಡುವೆ ಹುಳಿ ಹಿಂಡಿದ ಲಕ್ಷ್ಮಿ ಹೆಬ್ಬಾಳ್ಕರ್ 'ವಿಷಕನ್ಯೆ': ಮಹಾಸಂಘರ್ಷಕ್ಕೆ ಮುನ್ನುಡಿ ಬರೆದ ರಮೇಶ ಜಾರಕಿಹೊಳಿ
- Automobiles
ಪೆಟ್ರೋಲ್ ಬೆಲೆ ಏರಿಕೆ ಚಿಂತೆ ಬಿಡಿ: ರೂ.1 ಲಕ್ಷ ಇದ್ರೆ ಆಕ್ಟಿವಾವನ್ನು ಎಲೆಕ್ಟ್ರಿಕ್ ಸ್ಕೂಟರ್ ಆಗಿ ಪರಿವರ್ತಿಸಬ
- Technology
ಆಂಡ್ರಾಯ್ಡ್ ಬಳಕೆದಾರರಿಗಾಗಿ 'ಕಿಡ್ಸ್ ಮಿಸ್ಟರಿ ಬಾಕ್ಸ್' ಫೀಚರ್ಸ್ ಪರಿಚಯಿಸಿದ ನೆಟ್ಫ್ಲಿಕ್ಸ್!
- Finance
Economic Survey 2022-23: ಆರ್ಥಿಕ ಸಮೀಕ್ಷೆಯ ಪ್ರಮುಖಾಂಶ ಇಲ್ಲಿದೆ
- Lifestyle
ಥೈರಾಯ್ಡ್ ನಿಯಂತ್ರಣಕ್ಕೆ ಕೊತ್ತಂಬರಿ ಹೇಗೆ ಸಹಕಾರಿ ನೋಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಕುರುಕ್ಷೇತ್ರನೂ ಇಲ್ಲ, ಪೈಲ್ವಾನೂ ಇಲ್ಲ: ವರಮಹಾಲಕ್ಷ್ಮಿ ಹಬ್ಬಕ್ಕೆ ಮತ್ತೊಂದು ನಿರೀಕ್ಷೆಯ ಚಿತ್ರ
ವರಮಹಾಲಕ್ಷ್ಮಿ ಹಬ್ಬಕ್ಕೆ ನಮ್ಮ ಸಿನಿಮಾ ಬರುತ್ತೆ, ನಮ್ಮ ಚಿತ್ರ ಬರುತ್ತೆ ಅಂತ ತಿಂಗಳುಗಳ ಮೊದಲೇ ಟವಲ್ ಹಾಕಿ ಕೂತಿದ್ದರು. ಹಬ್ಬದ ದಿನ ಹತ್ತಿರ ಬರುತ್ತಿದ್ದಂತೆ ಟವಲೂ ಇಲ್ಲ, ಟವಲ್ ಹಾಕಿದವರೂ ಇಲ್ಲ ಎನ್ನುವಂತಾಯಿತು.
ದರ್ಶನ್ ಅಭಿನಯದ ಕುರುಕ್ಷೇತ್ರ ಮತ್ತು ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾಗಳು ಒಂದೇ ದಿನ, ಆಗಸ್ಟ್ 8 ರಂದು ತೆರೆಗೆ ಬರಲು ಸಜ್ಜಾಗಿತ್ತು. ಆದ್ರೆ, ಬೆಳವಣಿಗೆಗಳು ಸಾಗಿದಂತೆ ವರಮಹಾಲಕ್ಷ್ಮಿ ಹಬ್ಬಕ್ಕೆ ಇಬ್ಬರು ಬರಲ್ಲ ಎಂದು ನಿರ್ಧರಿಸಿ, ಹಿಂದಕ್ಕೆ ಮುಂದಕ್ಕೆ ಹೋದರು.
ಕುರುಕ್ಷೇತ್ರ
ಹಿಂದಕ್ಕೆ
ಪೈಲ್ವಾನ್
ಮುಂದಕ್ಕೆ
ಹೋಗಲು
ಅಸಲಿ
ಕಾರಣ
ಬೇರೆ.!
ಇದರಿಂದ ಸಹಜವಾಗಿ ಸ್ಯಾಂಡಲ್ ವುಡ್ ಅಭಿಮಾನಿಗಳು ನಿರಾಸೆಯಾದರು. ವರಮಹಾಲಕ್ಷ್ಮಿ ಹಬ್ಬಕ್ಕೆ ಯಾವುದೇ ಸಿನಿಮಾ ಇಲ್ಲದ ಎಂದು ಬೇಸರ ಮಾಡಿಕೊಂಡಿದ್ದರು. ಇದೀಗ, ಪೈಲ್ವಾನ್ ಮತ್ತು ಕುರುಕ್ಷೇತ್ರದ ಜಗಳದಲ್ಲಿ ಮೂರನೇಯವರಿಗೆ ಈ ದಿನಾಂಕ ಸಿಕ್ಕಿದೆ.
ಕಪಾಳಕ್ಕೆ
ಹೊಡೆದರು,
ಕೀಳಾಗಿ
ನೋಡಿದರು,
ಆಡಿಕೊಂಡರು
ಆದರೂ
ಎದ್ದು
ಬಂದ್ರು
ಹೌದು, ಕೋಮಲ್ ಕುಮಾರ್ ಅಭಿನಯದ 'ಕೆಂಪೇಗೌಡ-2' ಸಿನಿಮಾ ವರಮಹಾಲಕ್ಷ್ಮಿ ಹಬ್ಬದ ವಿಶೇಷವಾಗಿ ಆಗಸ್ಟ್ 9 ರಂದು ಚಿತ್ರಮಂದಿರಕ್ಕೆ ಬರ್ತಿದೆ. ಹೀಗಾಗಿ, ಬಹಳ ವರ್ಷದ ನಂತರ ಕೋಮಲ್ ಗಾಂಧಿನಗರಕ್ಕೆ ಎಂಟ್ರಿ ಕೊಡ್ತಿದ್ದಾರೆ.
ಅಂದ್ಹಾಗೆ, ಇದು ಸುದೀಪ್ ಅಭಿನಯಿಸಿದ್ದ ಕೆಂಪೇಗೌಡ ಚಿತ್ರದ ಮುಂದುವರೆದ ಭಾಗವಲ್ಲ. ಸ್ವಮೇಕ್ ಸಿನಿಮಾ ಎಂದು ಹೇಳಲಾಗ್ತಿದೆ. ಶಂಕರ್ ಗೌಡ ಕಥೆ ಬರೆದು, ನಿರ್ದೇಶನ ಮಾಡಿದ್ದು, ವಿನೋದ್ ಎಂಬುವವರು ನಿರ್ಮಾಣ ಮಾಡಿದ್ದಾರೆ.