Don't Miss!
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುರುಕ್ಷೇತ್ರನೂ ಇಲ್ಲ, ಪೈಲ್ವಾನೂ ಇಲ್ಲ: ವರಮಹಾಲಕ್ಷ್ಮಿ ಹಬ್ಬಕ್ಕೆ ಮತ್ತೊಂದು ನಿರೀಕ್ಷೆಯ ಚಿತ್ರ
ವರಮಹಾಲಕ್ಷ್ಮಿ ಹಬ್ಬಕ್ಕೆ ನಮ್ಮ ಸಿನಿಮಾ ಬರುತ್ತೆ, ನಮ್ಮ ಚಿತ್ರ ಬರುತ್ತೆ ಅಂತ ತಿಂಗಳುಗಳ ಮೊದಲೇ ಟವಲ್ ಹಾಕಿ ಕೂತಿದ್ದರು. ಹಬ್ಬದ ದಿನ ಹತ್ತಿರ ಬರುತ್ತಿದ್ದಂತೆ ಟವಲೂ ಇಲ್ಲ, ಟವಲ್ ಹಾಕಿದವರೂ ಇಲ್ಲ ಎನ್ನುವಂತಾಯಿತು.
ದರ್ಶನ್ ಅಭಿನಯದ ಕುರುಕ್ಷೇತ್ರ ಮತ್ತು ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾಗಳು ಒಂದೇ ದಿನ, ಆಗಸ್ಟ್ 8 ರಂದು ತೆರೆಗೆ ಬರಲು ಸಜ್ಜಾಗಿತ್ತು. ಆದ್ರೆ, ಬೆಳವಣಿಗೆಗಳು ಸಾಗಿದಂತೆ ವರಮಹಾಲಕ್ಷ್ಮಿ ಹಬ್ಬಕ್ಕೆ ಇಬ್ಬರು ಬರಲ್ಲ ಎಂದು ನಿರ್ಧರಿಸಿ, ಹಿಂದಕ್ಕೆ ಮುಂದಕ್ಕೆ ಹೋದರು.
ಕುರುಕ್ಷೇತ್ರ ಹಿಂದಕ್ಕೆ ಪೈಲ್ವಾನ್ ಮುಂದಕ್ಕೆ ಹೋಗಲು ಅಸಲಿ ಕಾರಣ ಬೇರೆ.!
ಇದರಿಂದ ಸಹಜವಾಗಿ ಸ್ಯಾಂಡಲ್ ವುಡ್ ಅಭಿಮಾನಿಗಳು ನಿರಾಸೆಯಾದರು. ವರಮಹಾಲಕ್ಷ್ಮಿ ಹಬ್ಬಕ್ಕೆ ಯಾವುದೇ ಸಿನಿಮಾ ಇಲ್ಲದ ಎಂದು ಬೇಸರ ಮಾಡಿಕೊಂಡಿದ್ದರು. ಇದೀಗ, ಪೈಲ್ವಾನ್ ಮತ್ತು ಕುರುಕ್ಷೇತ್ರದ ಜಗಳದಲ್ಲಿ ಮೂರನೇಯವರಿಗೆ ಈ ದಿನಾಂಕ ಸಿಕ್ಕಿದೆ.
ಕಪಾಳಕ್ಕೆ ಹೊಡೆದರು, ಕೀಳಾಗಿ ನೋಡಿದರು, ಆಡಿಕೊಂಡರು ಆದರೂ ಎದ್ದು ಬಂದ್ರು
ಹೌದು, ಕೋಮಲ್ ಕುಮಾರ್ ಅಭಿನಯದ 'ಕೆಂಪೇಗೌಡ-2' ಸಿನಿಮಾ ವರಮಹಾಲಕ್ಷ್ಮಿ ಹಬ್ಬದ ವಿಶೇಷವಾಗಿ ಆಗಸ್ಟ್ 9 ರಂದು ಚಿತ್ರಮಂದಿರಕ್ಕೆ ಬರ್ತಿದೆ. ಹೀಗಾಗಿ, ಬಹಳ ವರ್ಷದ ನಂತರ ಕೋಮಲ್ ಗಾಂಧಿನಗರಕ್ಕೆ ಎಂಟ್ರಿ ಕೊಡ್ತಿದ್ದಾರೆ.
ಅಂದ್ಹಾಗೆ, ಇದು ಸುದೀಪ್ ಅಭಿನಯಿಸಿದ್ದ ಕೆಂಪೇಗೌಡ ಚಿತ್ರದ ಮುಂದುವರೆದ ಭಾಗವಲ್ಲ. ಸ್ವಮೇಕ್ ಸಿನಿಮಾ ಎಂದು ಹೇಳಲಾಗ್ತಿದೆ. ಶಂಕರ್ ಗೌಡ ಕಥೆ ಬರೆದು, ನಿರ್ದೇಶನ ಮಾಡಿದ್ದು, ವಿನೋದ್ ಎಂಬುವವರು ನಿರ್ಮಾಣ ಮಾಡಿದ್ದಾರೆ.