Don't Miss!
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- News ನೇಹಾ ಹಿರೇಮಠ್ ಹತ್ಯೆ ಪ್ರಕರಣ; ನಟ ಧ್ರುವ ಸರ್ಜಾ ಏನಂದ್ರು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುರುಕ್ಷೇತ್ರನೂ ಇಲ್ಲ, ಪೈಲ್ವಾನೂ ಇಲ್ಲ: ವರಮಹಾಲಕ್ಷ್ಮಿ ಹಬ್ಬಕ್ಕೆ ಮತ್ತೊಂದು ನಿರೀಕ್ಷೆಯ ಚಿತ್ರ
ವರಮಹಾಲಕ್ಷ್ಮಿ ಹಬ್ಬಕ್ಕೆ ನಮ್ಮ ಸಿನಿಮಾ ಬರುತ್ತೆ, ನಮ್ಮ ಚಿತ್ರ ಬರುತ್ತೆ ಅಂತ ತಿಂಗಳುಗಳ ಮೊದಲೇ ಟವಲ್ ಹಾಕಿ ಕೂತಿದ್ದರು. ಹಬ್ಬದ ದಿನ ಹತ್ತಿರ ಬರುತ್ತಿದ್ದಂತೆ ಟವಲೂ ಇಲ್ಲ, ಟವಲ್ ಹಾಕಿದವರೂ ಇಲ್ಲ ಎನ್ನುವಂತಾಯಿತು.
ದರ್ಶನ್ ಅಭಿನಯದ ಕುರುಕ್ಷೇತ್ರ ಮತ್ತು ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾಗಳು ಒಂದೇ ದಿನ, ಆಗಸ್ಟ್ 8 ರಂದು ತೆರೆಗೆ ಬರಲು ಸಜ್ಜಾಗಿತ್ತು. ಆದ್ರೆ, ಬೆಳವಣಿಗೆಗಳು ಸಾಗಿದಂತೆ ವರಮಹಾಲಕ್ಷ್ಮಿ ಹಬ್ಬಕ್ಕೆ ಇಬ್ಬರು ಬರಲ್ಲ ಎಂದು ನಿರ್ಧರಿಸಿ, ಹಿಂದಕ್ಕೆ ಮುಂದಕ್ಕೆ ಹೋದರು.
ಕುರುಕ್ಷೇತ್ರ ಹಿಂದಕ್ಕೆ ಪೈಲ್ವಾನ್ ಮುಂದಕ್ಕೆ ಹೋಗಲು ಅಸಲಿ ಕಾರಣ ಬೇರೆ.!
ಇದರಿಂದ ಸಹಜವಾಗಿ ಸ್ಯಾಂಡಲ್ ವುಡ್ ಅಭಿಮಾನಿಗಳು ನಿರಾಸೆಯಾದರು. ವರಮಹಾಲಕ್ಷ್ಮಿ ಹಬ್ಬಕ್ಕೆ ಯಾವುದೇ ಸಿನಿಮಾ ಇಲ್ಲದ ಎಂದು ಬೇಸರ ಮಾಡಿಕೊಂಡಿದ್ದರು. ಇದೀಗ, ಪೈಲ್ವಾನ್ ಮತ್ತು ಕುರುಕ್ಷೇತ್ರದ ಜಗಳದಲ್ಲಿ ಮೂರನೇಯವರಿಗೆ ಈ ದಿನಾಂಕ ಸಿಕ್ಕಿದೆ.
ಕಪಾಳಕ್ಕೆ ಹೊಡೆದರು, ಕೀಳಾಗಿ ನೋಡಿದರು, ಆಡಿಕೊಂಡರು ಆದರೂ ಎದ್ದು ಬಂದ್ರು
ಹೌದು, ಕೋಮಲ್ ಕುಮಾರ್ ಅಭಿನಯದ 'ಕೆಂಪೇಗೌಡ-2' ಸಿನಿಮಾ ವರಮಹಾಲಕ್ಷ್ಮಿ ಹಬ್ಬದ ವಿಶೇಷವಾಗಿ ಆಗಸ್ಟ್ 9 ರಂದು ಚಿತ್ರಮಂದಿರಕ್ಕೆ ಬರ್ತಿದೆ. ಹೀಗಾಗಿ, ಬಹಳ ವರ್ಷದ ನಂತರ ಕೋಮಲ್ ಗಾಂಧಿನಗರಕ್ಕೆ ಎಂಟ್ರಿ ಕೊಡ್ತಿದ್ದಾರೆ.
ಅಂದ್ಹಾಗೆ, ಇದು ಸುದೀಪ್ ಅಭಿನಯಿಸಿದ್ದ ಕೆಂಪೇಗೌಡ ಚಿತ್ರದ ಮುಂದುವರೆದ ಭಾಗವಲ್ಲ. ಸ್ವಮೇಕ್ ಸಿನಿಮಾ ಎಂದು ಹೇಳಲಾಗ್ತಿದೆ. ಶಂಕರ್ ಗೌಡ ಕಥೆ ಬರೆದು, ನಿರ್ದೇಶನ ಮಾಡಿದ್ದು, ವಿನೋದ್ ಎಂಬುವವರು ನಿರ್ಮಾಣ ಮಾಡಿದ್ದಾರೆ.