Don't Miss!
- News ಬೈಯಪ್ಪನಹಳ್ಳಿ 'ಮೆಟ್ರೋ' ನಿಲ್ದಾಣದಲ್ಲಿ ಪಾರ್ಕಿಂಗ್ ಸಮಸ್ಯೆ: ಪ್ರಯಾಣಿಕರಿಗೆ ತೊಂದರೆ
- Automobiles ಭರ್ಜರಿ ಮೈಲೇಜ್ನ ಹೈಬ್ರಿಡ್ ಮಾರುತಿ ಸ್ವಿಫ್ಟ್: ಇವಿ ಕಾರುಗಳನ್ನೂ ಹಿಂದಿಕ್ಕಲಿದೆ ಎಂದ ಭವಿಷ್ಯವಾಣಿ!
- Sports IPL 2024: ಮುಂಬೈ ಇಂಡಿಯನ್ಸ್ಗೆ ಭಾರೀ ಹಿನ್ನಡೆ; ಹಾರ್ಟ್ಬ್ರೇಕ್ ಪೋಸ್ಟ್ ಮಾಡಿದ ಸೂರ್ಯಕುಮಾರ್
- Technology Airtel & Noise: ಇನ್ಮುಂದೆ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಸ್ಮಾರ್ಟ್ವಾಚ್ನದ್ದೇ ಹವಾ! ಟ್ಯಾಪ್-ಟು-ಪೇ ಫೀಚರ್ಸ್..
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- Lifestyle ಈರುಳ್ಳಿ ಹಾಕದೆ 3 ಪದಾರ್ಥ ಹಾಕಿ 5 ನಿಮಿಷದಲ್ಲಿ ಚಟ್ನಿ ಮಾಡಬಹುದು.! ಇಲ್ಲಿದೆ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಕ್ಕಾ ಆಯ್ತು 'ಕೆಂಡಸಂಪಿಗೆ' ನಾಯಕನ 2ನೇ ಚಿತ್ರ
ಮೊನ್ನೆ ಮೊನ್ನೆಯಷ್ಟೇ 'ಕೆಂಡಸಂಪಿಗೆ' ನಾಯಕ ವಿಕ್ಕಿಯ ಹೊಸ ಪ್ರಾಜೆಕ್ಟ್ ಬಗ್ಗೆ ನಾವೇ ಹೇಳಿದ್ವಿ. 'ಅಲೆಮಾರಿ' ಖ್ಯಾತಿಯ ನಿರ್ದೇಶಕ ಸಂತು ಜೊತೆ ತಮ್ಮ ಎರಡನೇ ಸಿನಿಮಾ ಮಾಡಲಿದ್ದಾರೆ ಎಂಬುದನ್ನ ಖಚಿತಪಡಿಸಿದ್ವಿ. ಆದ್ರೆ, ಅದು ಇನ್ನೂ ಮಾತುಕತೆಯ ಹಂತದಲ್ಲಿತ್ತು. ಇದೀಗ ಈ ಪ್ರಾಜೆಕ್ಟ್ ಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಸಿನಿಮಾ ಶುರು ಮಾಡಲಿದ್ದಾರಂತೆ.
'ಡವ್' ಚಿತ್ರದ ನಂತರ ಬೇರೆ ಪ್ರಾಜೆಕ್ಟ್ ಗಳಲ್ಲಿ ತೊಡಗಿಸಿಕೊಂಡಿದ್ದ ನಿರ್ದೇಶಕ ಸಂತು, ಮೊದಲು ರೋರಿಂಗ್ ಸ್ಟಾರ್ ಶ್ರೀಮುರುಳಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ ಎನ್ನಲಾಗಿತ್ತು. ಅದು ಇನ್ನು ಮಾತುಕತೆಯ ಹಂತದಲ್ಲಿದ್ದು, ಈ ಮಧ್ಯೆ 'ಕೆಂಡಸಂಪಿಗೆ' ನಾಯಕ ವಿಕ್ಕಿ ಜೊತೆ ಸಿನಿಮಾ ಮಾಡುವುದಕ್ಕೆ ಮುಂದಾಗಿದ್ದಾರೆ.['ಕೆಂಡಸಂಪಿಗೆ' ನಾಯಕನ ಹೊಸ ಚಿತ್ರಕ್ಕೆ ಡೈರೆಕ್ಟರ್ ಯಾರು ಗೊತ್ತಾ?]
ಇನ್ನೂ ಈ ಚಿತ್ರವನ್ನ ಮುತ್ತಪ್ಪ ರೈ ಬ್ಯಾನರ್ ಅಡಿಯಲ್ಲಿ, 'ಜಾನ್ ಜಾನಿ ಜನಾರ್ಧನ್' ಚಿತ್ರದ ನಿರ್ಮಾಪಕರೊಬ್ಬರು ನಿರ್ಮಾಣ ಮಾಡುತ್ತಿದ್ದಾರೆ.
ಸದ್ಯ, ವಿಕ್ಕಿ ಹಾಗೂ ಸಂತು ಕಾಂಬಿನೇಷನ್ ಚಿತ್ರದ ಪ್ರಿ-ಪ್ರೊಡಕ್ಷನ್ ಕೆಲಸ ಮುಗಿದಿದ್ದು, ಈ ಚಿತ್ರದ ಟೈಟಲ್ ಏನೂ ? ಚಿತ್ರದ ಕಥೆ ಏನು? ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಉಳಿದ ಕಲಾವಿದರ ಆಯ್ಕೆ ಮುಗಿಯುತ್ತಿದ್ದಂತೆ ಶೂಟಿಂಗ್ ಶುರು ಮಾಡಲಿದೆಯಂತೆ ಚಿತ್ರತಂಡ.