Don't Miss!
- News ಈಶ್ವರಪ್ಪ ಡೆಡ್ ಲೈನ್ ಕೊಟ್ಟ ಕಮಲ ಪಡೆ; ನಾಮಪತ್ರ ವಾಪಸ್ ಪಡೆಯದಿದ್ರೆ ಬಿಜೆಪಿಯಿಂದ ಉಚ್ಛಾಟನೆ?
- Finance ಬೆಂಗಳೂರು ಪ್ರವಾಸೋದ್ಯಮಕ್ಕಾಗಿ ವಿಶೇಷ ಆಟೋ ಸೇವೆ ಆರಂಭ, ವಿವರ
- Sports IPL 2024: ಐಪಿಎಲ್ ಮಾತ್ರವಲ್ಲ, ಟಿ20 ಕ್ರಿಕೆಟ್ನಲ್ಲೇ ಇತಿಹಾಸ ಬರೆದ RCB vs SRH ಪಂದ್ಯ!
- Lifestyle ಕೊಟ್ಟಿಗೆಯಲ್ಲಿ ಸಿಕ್ಕಿಬಿತ್ತು ಮೈ ನಡುಗಿಸುವಷ್ಟು ದೈತ್ಯಾಕಾರದ ಹೆಬ್ಬಾವು...!
- Automobiles ಸೆಮಿಕಂಡಕ್ಟರ್ ಪೂರೈಸಲು ಟಾಟಾದೊಂದಿಗೆ ಟೆಸ್ಲಾ ಒಪ್ಪಂದ.. ಕೆಲವೇ ದಿನದಲ್ಲಿ ಮೊದಲ ಶೋರೂಂ ಆರಂಭ?
- Technology Oppo: ಒಪ್ಪೋ A3 ಪ್ರೊ ಸ್ಮಾರ್ಟ್ಫೋನ್ ಲಾಂಚ್! 67W ಫಾಸ್ಟ್ ಚಾರ್ಜಿಂಗ್ ಸೌಲಭ್ಯ... ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮನ್ನಾ ಮತ್ತು ವಿರಾಟ್ ಕೊಹ್ಲಿಗೆ ಕೇರಳ ಹೈಕೋರ್ಟ್ ನೋಟಿಸ್
ಆನ್ ಲೈನ್ ರಮ್ಮಿ ಗೇಮ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ದಕ್ಷಿಣ ಭಾರತದ ಖ್ಯಾತ ನಟಿ ತಮನ್ನಾ ಮತ್ತು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಕೇರಳ ಹೈಕೋರ್ಟ್ ನೋಟಿಸ್ ನೀಡಿದೆ. ಆನ್ ಲೈನ್ ರಮ್ಮಿ ಗೇಮ್ ನ ಪ್ರಚಾರ ರಾಯಭಾರಿಯಾಗಿರುವ ತಮನ್ನಾ, ವಿರಾಟ್ ಮತ್ತು ಅಜು ವರ್ಗೀಸ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
Recommended Video
ಆನ್ ಲೈನ್ ರಮ್ಮಿ ಗೇಮ್ ಬ್ಯಾನ್ ಮಾಡಬೇಕೆಂದು ಮನವಿಯೊಂದಕ್ಕೆ ಸಂಬಂಧಿಸಿ ನೋಟಿಸ್ ನೀಡಲಾಗಿದೆ. ಆನ್ ಲೈನ್ ಬೆಟ್ಟಿಂಗ್ ಗಂಭೀರ ಸಮಸ್ಯೆ ಎಂದು ಪರಿಗಣಿಸಿರುವ ಹೈ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸ್ಪಷ್ಟನೆ ನೀಡುವಂತೆ ಕೇಳಿದೆ. ಕೊಚ್ಚಿ ಮೂಲದ ಪೌಲಿ ವದಕ್ಕನ್, ಆನ್ ಲೈನ್ ರಮ್ಮಿ ಗೇಮ್ ವಿರುದ್ಧ ಪಿಟಿಷನ್ ಸಲ್ಲಿಸಿದ್ದರು.
ವಿಡಿಯೋ ವೈರಲ್; ಬಸ್ ಚಲಾಯಿಸಿದ ಮಿಲ್ಕಿ ಬ್ಯೂಟಿ ತಮನ್ನಾ
ಕೆಲವು ಸ್ಟಾರ್ ಗಳು ಆನ್ ಲೈನ್ ಬೆಟ್ಟಿಂಗ್ ಗೇಮ್ ಗಳಿಗೆ ರಾಯಭಾರಿಯಾಗಿ ಕಾಣಿಸಿಕೊಳ್ಳುವ ಮೂಲಕ ಪ್ರಚೋದನೆ ನೀಡುತ್ತಿದ್ದಾರೆ. ಇದು ಯುವಜನರನ್ನು ಸುಲಭವಾಗಿ ಆಕರ್ಷಿಸುತ್ತಿದೆ. ರಾಜ್ಯದಲ್ಲಿ ಆನ್ ಲೈನ್ ಜೂಜಾಟವು ಹೆಚ್ಚುತ್ತಿರುವ ಭೀತಿಯಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದರು.
ಇತ್ತೀಚಿಗೆ ತಿರುವನಂತಪುರಂನ ಯುವಕನ ಆತ್ಮಹತ್ಯೆ ಪ್ರಕರಣದ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. ರಮ್ಮಿ ಬೆಟ್ಟಿಂಗ್ ಆಟದ ಬಲೆಗೆ ಬಿದ್ದು, 21 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ, ಸಾಲ ಮರುಪಾವತಿಸಲು ಸಾಧ್ಯವಾಗದೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಅರ್ಜಿದಾರರು ತಿಳಿಸಿದ್ದಾರೆ.
ಆನ್ ಲೈನ್ ಜೂಜಿನಿಂದ ಮುಗ್ದ ಯುವಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅಂಥವುಗಳನ್ನು ಪ್ರಚೋದಿಸುವ ವಿರಾಟ್, ತಮನ್ನಾ ಅವರ್ನನು ಬಂಧಿಸಬೇಕು ಎಂದು ಮಾಡಿ ವಕೀಲ ಸೂರ್ಯಪ್ರಕಾಶಂ ಎಂಬುವವರು 2020 ಆಗಸ್ಟ್ ನಲ್ಲಿ ಮದ್ರಾಸ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.