Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯೋಧ ಹನುಮಂತಪ್ಪ ಕುಟುಂಬಕ್ಕೆ KFCC ಯಿಂದ ಪರಿಹಾರ ಧನ
ಸಿಯಾಚಿನ್ ನ ನಿರ್ಗಲ್ಲಿನಲ್ಲಿ ಸಿಲುಕಿ ಹುತಾತ್ಮರಾಗಿದ್ದ ಕರ್ನಾಟಕ ಮೂಲದ 'ಅಮರ' ಯೋಧ ಹನುಮಂತಪ್ಪ ಅವರ ಕುಟುಂಬಕ್ಕೆ ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ಆರ್ಥಿಕ ಧನ ಸಹಾಯ ಮಾಡಲು ನಿರ್ಧರಿಸಿದೆ.
ಕಳೆದ ಶುಕ್ರವಾರ (ಫೆಬ್ರವರಿ 12) ಮಧ್ಯಾಹ್ನ ಕರ್ನಾಟಕ ಚಲನಚಿತ್ರ ವಾಣಿಜ್ಯ ಅಕಾಡೆಮಿ ಮಂಡಳಿಯಲ್ಲಿ ವೀರ ಯೋಧ ಹನುಮಂತಪ್ಪ ಅವರಿಗೆ ಶ್ರಧ್ದಾಂಜಲಿ ಸಭೆ ನಡೆದಿದ್ದು, ಕೆ.ಎಫ್.ಸಿ.ಸಿ ಅಧ್ಯಕ್ಷ ಸಾ.ರಾ ಗೋವಿಂದು ಅವರ ನೇತೃತ್ವದಲ್ಲಿ ಸಭೆ ನಡೆಯಿತು.[ವೀರ ಯೋಧ ಹನುಮಂತಪ್ಪರ ಆತ್ಮಕ್ಕೆ ಶಾಂತಿ ಕೋರಿದ ಚಿತ್ರರಂಗದ ತಾರೆಯರು]
ಈ ಸಂದರ್ಭದಲ್ಲಿ ವೀರ ಮರಣವನ್ನಪ್ಪಿದ ಯೋಧ ಹನುಮಂತಪ್ಪ ಅವರ ಕುಟುಂಬಕ್ಕೆ ಸುಮಾರು ಒಂದು ಲಕ್ಷ ರೂಪಾಯಿ ಪರಿಹಾರ ಧನವನ್ನು ನೀಡಲು ತೀರ್ಮಾನ ಮಾಡಲಾಗಿದೆ.
ಚಲನಚಿತ್ರ ಮಂಡಳಿಯ ಸದಸ್ಯರು ಯೋಧ ಹನುಮಂತಪ್ಪ ಅವರ ಗ್ರಾಮಕ್ಕೆ ಸದ್ಯದಲ್ಲೇ ತೆರಳಲಿದ್ದು, ಅವರ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಮೊತ್ತದ ಚೆಕ್ ವಿತರಿಸಿ ವಾಪಸಾಗಲಿದೆ.[ಹನುಮಂತಪ್ಪ ಕುಟುಂಬಕ್ಕೆ 25 ಲಕ್ಷ ಪರಿಹಾರ]
ಹುತಾತ್ಮರಾದ ಹನುಮಂತಪ್ಪ ಅವರ ಶ್ರಧ್ದಾಂಜಲಿ ಸಭೆಯಲ್ಲಿ ಸಾರಾ ಗೋವಿಂದು, ಎಸ್.ವಿ.ರಾಜೇಂದ್ರ ಸಿಂಗ್ ಬಾಬು, ಉಮೇಶ್ ಬಣಕಾರ್, ಎಂ.ಜಿ.ರಾಮಮೂರ್ತಿ, ಎಂ.ಎನ್.ಸುರೇಶ್, ಕೆ.ಸಿ.ಎನ್ ಚಂದ್ರಶೇಖರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ ಕಮ್ ಅಧ್ಯಕ್ಷ ಸಾ.ರಾ ಗೋವಿಂದು, 'ಹನುಮಂತಪ್ಪ ಅವರಂತಹ ಯೋಧರು ಕನ್ನಡ ಮಣ್ಣಿನವರು ಎಂಬುದು ನಮ್ಮ ಹೆಮ್ಮೆ. ಅವರ ದಿಟ್ಟತನದ ಹೋರಾಟ ಮತ್ತು ದೇಶಸೇವೆ ಎಂದಿಗೂ ಅಮರವಾಗಿರುತ್ತದೆ' ಎಂದು ನುಡಿದರು.[ರಿಯಲ್ ಸ್ಟಾರ್ ಉಪೇಂದ್ರ ಮೇಲೆ ಏನಿದು ದೊಡ್ಡ ಅಪವಾದ?]
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ, 'ಹನುಮಂತಪ್ಪ ಕೊಪ್ಪದ ಅವರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದು, ಬೆಟ್ಟದೂರಿನಲ್ಲಿ ಸ್ಮಾರಕ ನಿರ್ಮಾಣಕ್ಕೆ ಸಹಕಾರ ನೀಡಲಾಗುತ್ತದೆ. ಹನುಮಂತಪ್ಪ ಅವರ ಪತ್ನಿಗೆ ಸರ್ಕಾರಿ ನೌಕರಿ, ಬೆಟ್ಟದೂರಿನಲ್ಲಿ ನಾಲ್ಕು ಎಕರೆ ಜಮೀನು, ಮತ್ತು ಹುಬ್ಬಳ್ಳಿಯಲ್ಲಿ ಒಂದು ನಿವೇಶನ ನೀಡುವುದಾಗಿ' ಭರವಸೆ ನೀಡಿದ್ದಾರೆ.