Don't Miss!
- News ಕಲೆ ಮತ್ತು ಕಲೆಗಾರ! ಪ್ರಧಾನಿ ನರೇಂದ್ರ ಮೋದಿ ಕಾಲೆಳೆದ ಸಿಎಂ ಸಿದ್ದರಾಮಯ್ಯ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೃತ್ಯ ನಿರ್ದೇಶಕ ರಾಜೇಶ್ ಬ್ರಹ್ಮಾವರ್ ಗೆ ಕೊನೆಗೂ ಸಂದ ಜಯ
ಕಡೆಗೂ ಕಾರ್ಮಿಕರ ಒಕ್ಕೂಟದಲ್ಲಿ ಎದ್ದಿದ್ದ ವಿವಾದಕ್ಕೆ ತೆರೆಬಿದ್ದಿದೆ. ಪ್ರತ್ಯೇಕ ಒಕ್ಕೂಟದ ಕೂಗಿಗೆ ವಾಣಿಜ್ಯ ಮಂಡಳಿ ಕೊನೆಗೂ ಗ್ರೀನ್ ಸಿಗ್ನಲ್ ನೀಡಿದೆ. ಆ ಮೂಲಕ ರಾಜೇಶ್ ಬ್ರಹ್ಮಾವರ್ ಮತ್ತವರ ಬಳಗದ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.
ವರ್ಷಗಳಿಂದಲೂ ಚಾಲ್ತಿಯಲ್ಲಿದ್ದ ಕಾರ್ಮಿಕರ ಒಕ್ಕೂಟ ನಿರ್ಮಾಪಕರ ಸ್ನೇಹಿಯಾಗಿಲ್ಲ. ಕಾರ್ಮಿಕರ ಹಿತಾಸಕ್ತಿ ಪರ ಇಲ್ಲ ಅಂತ, ಕಳೆದ ವರ್ಷ ನೃತ್ಯ ನಿರ್ದೇಶಕ ರಾಜೇಶ್ ಬ್ರಹ್ಮಾವರ್ ಪರ್ಯಾಯ (ಕಾರ್ಮಿಕರ ಮತ್ತು ತಂತ್ರಜ್ಞರ ಒಕ್ಕೂಟ) ಕಟ್ಟಿದ್ದರು.
ಆದ್ರೆ, ಪರ್ಯಾಯ ಒಕ್ಕೂಟದಿಂದ ಚಿತ್ರರಂಗ ಒಡೆದ ಮನೆಯಂತಾಗಬಾರದು ಅನ್ನುವ ಕಾರಣಕ್ಕೆ ಇಂಡಸ್ಟ್ರಿಯಿಂದ ಹಲವರು ಈ ಬೆಳವಣಿಗೆಯನ್ನ ವಿರೋಧಿಸಿದ್ದರು. ಇದರಿಂದ ವಾಣಿಜ್ಯ ಮಂಡಳಿ ಕೂಡ ಹೊಸ ಒಕ್ಕೂಟಕ್ಕೆ ಮಾನ್ಯತೆ ನೀಡುವ ಗೋಜಿಗೆ ಹೋಗಿರ್ಲಿಲ್ಲ. [ಫಿಲಂ ಚೇಂಬರ್ ನಲ್ಲಿ ನೂಕಾಟ, ತಳ್ಳಾಟ, ರಂಪಾಟ]
ಆದ್ರೆ, ಕಳೆದ ಶನಿವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ರಾಜೇಶ್ ಬ್ರಹ್ಮಾವರ್ ನೇತೃತ್ವದ ಕಾರ್ಮಿಕರ ಮತ್ತು ತಂತ್ರಜ್ಞರ ಒಕ್ಕೂಟಕ್ಕೆ ಅಧಿಕೃತ ಮಾನ್ಯತೆ ಸಿಕ್ಕಿದೆ. [ಒಕ್ಕೂಟ ಒಡೆದರೆ ಸುಮ್ಮನಿರಲ್ಲ: ಅಶೋಕ್ ಗುಡುಗು]
ಇದರಿಂದ ಕೆಲ ನಿರ್ಮಾಪಕರು ಸಂತಸ ವ್ಯಕ್ತಪಡಿಸಿದ್ದಾರೆ. ಹಳೆ ಒಕ್ಕೂಟದಲ್ಲಿ ದಬ್ಬಾಳಿಕೆ ಅಂತ ದೂರುವ ನಿರ್ಮಾಪಕರು ಹೊಸ ಒಕ್ಕೂಟದ ಕಾರ್ಮಿಕರ ಮೊರೆ ಹೋಗಬಹುದು. (ಏಜೆನ್ಸೀಸ್)