ಸಾಂಬರ್ಗಿ ವಿರುದ್ಧ 1 ಕೋಟಿ ಮಾನನಷ್ಟ ಬೇಡಿಕೆಯಿಟ್ರಾ ಸಾ.ರಾ.ಗೋವಿಂದು?
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಸಾ.ರಾ.ಗೋವಿಂದು ರವರು ಪ್ರಶಾಂತ್ ಸಾಂಬರ್ಗಿ ವಿರುದ್ಧ ಒಂದು ಕೋಟಿ ರೂ ಪರಿಹಾರ ಬೇಡಿಕೆ ಇಟ್ಟು ಮಾನನಷ್ಟ ದೂರು ನೀಡಲು ತೀರ್ಮಾನಿಸಿದ್ದಾರೆ ಎಂದು ಮೂಲಗಳಿಂದ ತಿಳಿಯಲಾಗಿದೆ.
ಇತ್ತೀಚೆಗಷ್ಟೆ ಪ್ರಶಾಂತ್ ಸಾಂಬರ್ಗಿ ರವರು ಫೇಸ್ ಬುಕ್ ಲೈವ್ ವಿಡಿಯೋದಲ್ಲಿ "ಹಣ ಪಡೆಯುವ ಉದ್ದೇಶದಿಂದ ಸಾ.ರಾ.ಗೋವಿಂದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮತ್ತು ಇತರೆ ಕನ್ನಡ ಪರ ಹೋರಾಟಗಾರರು 'ಬಾಹುಬಲಿ 2' ಚಿತ್ರ ಬಿಡುಗಡೆಗೆ ತಡೆಯೊಡ್ಡುತ್ತಿದ್ದಾರೆ" ಎಂದು ಹೇಳಿ ಆರೋಪ ಮಾಡಿರುವ ಬಗ್ಗೆ ವರದಿಯಾಗಿತ್ತು. ಈ ಆರೋಪದ ಹಿನ್ನೆಲೆಯಲ್ಲಿ ಸಾ.ರಾ.ಗೋವಿಂದ್ ರವರು ಪ್ರಶಾಂತ್ ಸಾಂಬರ್ಗಿ ಹೇಳಿಕೆಯನ್ನು ಖಂಡಿಸಿ ಅವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.[ಪ್ರಶಾಂತ್ ಸಾಂಬರ್ಗಿ v/s ಸಾ.ರಾ.ಗೋವಿಂದ್: ಏನಿದು ರೋಲ್ ಕಾಲ್ ರಗಳೆ]

ಪ್ರಸ್ತುತ ಸಾ.ರಾ.ಗೋವಿಂದು ರವರು ಒಂದು ಹೆಜ್ಜೆ ಮುಂದೆ ಹೋಗಿ ಪ್ರಶಾಂತ್ ಸಾಂಬರ್ಗಿ ವಿರುದ್ಧ ಮಾನನಷ್ಟ ದೂರು ನೀಡಲು ನಿರ್ಧರಿಸಿದ್ದಾರೆ.


Click it and Unblock the Notifications











