Don't Miss!
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಂಬರ್ಗಿ ವಿರುದ್ಧ 1 ಕೋಟಿ ಮಾನನಷ್ಟ ಬೇಡಿಕೆಯಿಟ್ರಾ ಸಾ.ರಾ.ಗೋವಿಂದು?
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಸಾ.ರಾ.ಗೋವಿಂದು ರವರು ಪ್ರಶಾಂತ್ ಸಾಂಬರ್ಗಿ ವಿರುದ್ಧ ಒಂದು ಕೋಟಿ ರೂ ಪರಿಹಾರ ಬೇಡಿಕೆ ಇಟ್ಟು ಮಾನನಷ್ಟ ದೂರು ನೀಡಲು ತೀರ್ಮಾನಿಸಿದ್ದಾರೆ ಎಂದು ಮೂಲಗಳಿಂದ ತಿಳಿಯಲಾಗಿದೆ.
ಇತ್ತೀಚೆಗಷ್ಟೆ ಪ್ರಶಾಂತ್ ಸಾಂಬರ್ಗಿ ರವರು ಫೇಸ್ ಬುಕ್ ಲೈವ್ ವಿಡಿಯೋದಲ್ಲಿ "ಹಣ ಪಡೆಯುವ ಉದ್ದೇಶದಿಂದ ಸಾ.ರಾ.ಗೋವಿಂದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮತ್ತು ಇತರೆ ಕನ್ನಡ ಪರ ಹೋರಾಟಗಾರರು 'ಬಾಹುಬಲಿ 2' ಚಿತ್ರ ಬಿಡುಗಡೆಗೆ ತಡೆಯೊಡ್ಡುತ್ತಿದ್ದಾರೆ" ಎಂದು ಹೇಳಿ ಆರೋಪ ಮಾಡಿರುವ ಬಗ್ಗೆ ವರದಿಯಾಗಿತ್ತು. ಈ ಆರೋಪದ ಹಿನ್ನೆಲೆಯಲ್ಲಿ ಸಾ.ರಾ.ಗೋವಿಂದ್ ರವರು ಪ್ರಶಾಂತ್ ಸಾಂಬರ್ಗಿ ಹೇಳಿಕೆಯನ್ನು ಖಂಡಿಸಿ ಅವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.[ಪ್ರಶಾಂತ್ ಸಾಂಬರ್ಗಿ v/s ಸಾ.ರಾ.ಗೋವಿಂದ್: ಏನಿದು ರೋಲ್ ಕಾಲ್ ರಗಳೆ]
ಪ್ರಸ್ತುತ ಸಾ.ರಾ.ಗೋವಿಂದು ರವರು ಒಂದು ಹೆಜ್ಜೆ ಮುಂದೆ ಹೋಗಿ ಪ್ರಶಾಂತ್ ಸಾಂಬರ್ಗಿ ವಿರುದ್ಧ ಮಾನನಷ್ಟ ದೂರು ನೀಡಲು ನಿರ್ಧರಿಸಿದ್ದಾರೆ.