Don't Miss!
- News ರಾಜ್ಯದ ವಿವಿಧೆಡೆ ವರುಣದೇವನ ಆರ್ಭಟ; ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟು ?
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Finance ಎಂಡಿಎಚ್ ಮತ್ತು ಎವರೆಸ್ಟ್ ಸೇರಿದಂತೆ ಎಲ್ಲಾ ಬ್ರಾಂಡ್ ಮಸಾಲೆಗಳ ಮಾದರಿಗಳ ಪರೀಕ್ಷೆಗೆ ಮುಂದಾದ FSSAI
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಂಬರ್ಗಿ ವಿರುದ್ಧ 1 ಕೋಟಿ ಮಾನನಷ್ಟ ಬೇಡಿಕೆಯಿಟ್ರಾ ಸಾ.ರಾ.ಗೋವಿಂದು?
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಸಾ.ರಾ.ಗೋವಿಂದು ರವರು ಪ್ರಶಾಂತ್ ಸಾಂಬರ್ಗಿ ವಿರುದ್ಧ ಒಂದು ಕೋಟಿ ರೂ ಪರಿಹಾರ ಬೇಡಿಕೆ ಇಟ್ಟು ಮಾನನಷ್ಟ ದೂರು ನೀಡಲು ತೀರ್ಮಾನಿಸಿದ್ದಾರೆ ಎಂದು ಮೂಲಗಳಿಂದ ತಿಳಿಯಲಾಗಿದೆ.
ಇತ್ತೀಚೆಗಷ್ಟೆ ಪ್ರಶಾಂತ್ ಸಾಂಬರ್ಗಿ ರವರು ಫೇಸ್ ಬುಕ್ ಲೈವ್ ವಿಡಿಯೋದಲ್ಲಿ "ಹಣ ಪಡೆಯುವ ಉದ್ದೇಶದಿಂದ ಸಾ.ರಾ.ಗೋವಿಂದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಮತ್ತು ಇತರೆ ಕನ್ನಡ ಪರ ಹೋರಾಟಗಾರರು 'ಬಾಹುಬಲಿ 2' ಚಿತ್ರ ಬಿಡುಗಡೆಗೆ ತಡೆಯೊಡ್ಡುತ್ತಿದ್ದಾರೆ" ಎಂದು ಹೇಳಿ ಆರೋಪ ಮಾಡಿರುವ ಬಗ್ಗೆ ವರದಿಯಾಗಿತ್ತು. ಈ ಆರೋಪದ ಹಿನ್ನೆಲೆಯಲ್ಲಿ ಸಾ.ರಾ.ಗೋವಿಂದ್ ರವರು ಪ್ರಶಾಂತ್ ಸಾಂಬರ್ಗಿ ಹೇಳಿಕೆಯನ್ನು ಖಂಡಿಸಿ ಅವರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.[ಪ್ರಶಾಂತ್ ಸಾಂಬರ್ಗಿ v/s ಸಾ.ರಾ.ಗೋವಿಂದ್: ಏನಿದು ರೋಲ್ ಕಾಲ್ ರಗಳೆ]
ಪ್ರಸ್ತುತ ಸಾ.ರಾ.ಗೋವಿಂದು ರವರು ಒಂದು ಹೆಜ್ಜೆ ಮುಂದೆ ಹೋಗಿ ಪ್ರಶಾಂತ್ ಸಾಂಬರ್ಗಿ ವಿರುದ್ಧ ಮಾನನಷ್ಟ ದೂರು ನೀಡಲು ನಿರ್ಧರಿಸಿದ್ದಾರೆ.