Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟಿ ವಿಜಯಲಕ್ಷ್ಮಿಗೆ ಸಹಾಯ ಮಾಡಲು ಮುಂದಾದ ಫಿಲ್ಮ್ ಚೇಂಬರ್
ಕನ್ನಡ ಚಿತ್ರರಂಗದಲ್ಲಿ ಒಂದ್ಕಾಲದಲ್ಲಿ ರಾಣಿಯಂತೆ ಮೆರೆದ ನಟಿ ವಿಜಯಲಕ್ಷ್ಮಿ ಇದೀಗ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ ನಟಿ ವಿಜಯಲಕ್ಷ್ಮಿ ಕಳೆದ ಗುರುವಾರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅಡ್ಮಿಟ್ ಆದರು.
ಮೊದಲೇ ಅವಕಾಶಗಳು ಇಲ್ಲದೇ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ವಿಜಯಲಕ್ಷ್ಮಿ ಕುಟುಂಬ ಚಿತ್ರರಂಗದ ನೆರವು ಕೋರಿತ್ತು. ವಿಜಯಲಕ್ಷ್ಮಿ ಸಹೋದರಿ ಉಷಾದೇವಿ ಕೋರಿಕೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸ್ಪಂದಿಸಿದೆ.
ಆಸ್ಪತ್ರೆ ಸೇರಿದ ನಟಿ ವಿಜಯಲಕ್ಷ್ಮಿ: ಚಿತ್ರರಂಗದ ಸಹಾಯ ಕೇಳಿದ ಸಹೋದರಿ
ಫಿಲ್ಮ್ ಚೇಂಬರ್ ಕಡೆಯಿಂದ ನಟಿ ವಿಜಯಲಕ್ಷ್ಮಿ ರವರಿಗೆ ಆರ್ಥಿಕ ನೆರವು ನೀಡುವ ಬಗ್ಗೆ ಗೌರವ ಕಾರ್ಯದರ್ಶಿ ಭಾ.ಮಾ.ಹರೀಶ್ ಭರವಸೆ ನೀಡಿದ್ದಾರೆ. ಇದಲ್ಲದೇ ವೈಯಕ್ತಿಕವಾಗಿಯೂ ಹಣಕಾಸು ಸಹಾಯ ಮಾಡಲು ಸಹೋದರರಾದ ಭಾ.ಮಾ.ಹರೀಶ್ ಮತ್ತು ಗಿರೀಶ್ ಮುಂದಾಗಿದ್ದಾರೆ.
ವಿಜಯಲಕ್ಷ್ಮಿ ಕುಟುಂಬಕ್ಕೆ ನಟಿ ಜಯಪ್ರದ ಸಹೋದರ ಕೊಟ್ಟ ಯಮಯಾತನೆ ಅಷ್ಟಿಷ್ಟಲ್ಲ.!
ಹೈ ಬಿಪಿ ಮತ್ತು ತೀವ್ರ ಸುಸ್ತಾದ ಕಾರಣ ವಿಜಯಲಕ್ಷ್ಮಿ ರವರನ್ನು ಕಳೆದ ಗುರುವಾರ ಮಲ್ಯ ಆಸ್ಪತ್ರೆಗೆ ಸೇರಿಸಲಾಗಿತ್ತು. ''ಇಷ್ಟು ದಿನ ತಾಯಿಗೆ ಹುಷಾರಿರಲಿಲ್ಲ. ಅವರಿಗೆ ಚಿಕಿತ್ಸೆ ಕೊಡಿಸುತ್ತಿದ್ವಿ. ಈಗ ವಿಜಯಲಕ್ಷ್ಮಿ ಕೂಡ ಆಸ್ಪತ್ರೆ ಸೇರಿದ್ದಾಳೆ. ಚಿಕಿತ್ಸೆ ಕೊಡಿಸಲು ದುಡ್ಡು ಇಲ್ಲ. ಚಿತ್ರರಂಗದವರ ಸಹಾಯ ಬೇಕಿದೆ'' ಎಂದು ಸಹೋದರಿ ಉಷಾ ಕಣ್ಣೀರಿಟ್ಟಿದ್ದರು.
ನಟಿ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದು ನಿಜ.! ಕಹಿ ಅಧ್ಯಾಯ ಇಲ್ಲಿದೆ...
ಇದನ್ನ ನೋಡಿ ಫಿಲ್ಮ್ ಚೇಂಬರ್ ಗೌರವ ಕಾರ್ಯದರ್ಶಿ ಭಾ.ಮಾ.ಹರೀಶ್, ಗಿರೀಶ್ ಸೇರಿದಂತೆ ಹಲವರು ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ ವಿಜಯಲಕ್ಷ್ಮಿ ಆರೋಗ್ಯ ವಿಚಾರಿಸಿದ್ದಾರೆ. ಜೊತೆಗೆ ನೆರವು ನೀಡುವ ಬಗ್ಗೆ ಆಶ್ವಾಸನೆ ಕೊಟ್ಟಿದ್ದಾರೆ.