Don't Miss!
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- News ಬಿಜೆಪಿ ಭದ್ರಕೋಟೆಯಲ್ಲಿ ಶೋಭಾ ಕರಂದ್ಲಾಜೆಗೆ ಕಠಿಣ ಸವಾಲು!
- Technology ಜಿಯೋ ನಿವ್ವಳ ಲಾಭದಲ್ಲಿ ಭರ್ಜರಿ ಹೆಚ್ಚಳ: ಇಲ್ಲಿದೆ ವಿವರ
- Lifestyle ಉಪ್ಪು ನೀರಿನಿಂದ ಮುಖ ತೊಳೆದರೆ ಆಗುವ ಲಾಭವೇನು.? ಇದರ ಅನಾನುಕೂಲವೇನು ಗೊತ್ತಾ?
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- Automobiles Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೂತನ ಮುಖ್ಯಮಂತ್ರಿಗೆ ಚಿತ್ರರಂಗದ ಕಡೆಯಿಂದ ಗೌರವ
Recommended Video
ನೂತನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಕನ್ನಡ ಚಿತ್ರರಂಗದ ಕಡೆಯಿಂದ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಜೂನ್ 21ಕ್ಕೆ ಈ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಸಾರಾ ಗೋವಿಂದು ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಸನ್ಮಾನ ಮಾಡಲಿದ್ದಾರೆ. ಜೊತೆಗೆ ಸರ್ಕಾರದ ವತಿಯಿಂದ ಚಿತ್ರರಂಗಕ್ಕೆ ಆಗಬೇಕಾದ ಕೆಲಸಗಳ ಬಗ್ಗೆ ಮನವಿ ಮಾಡಲಾಗುತ್ತದೆ.
ನಟ ವಿಷ್ಣುವರ್ಧನ್ ಸ್ಮಾರಕ, ಮೈಸೂರಿನಲ್ಲಿ ಫಿಲ್ಮ್ ಸಿಟಿ, ಜನತಾ ಟಾಕೀಸ್, ಮಲ್ಟಿಪ್ಲೆಕ್ಸ್ ಗಳ ಸಮಸ್ಯೆ ಹೀಗೆ ಅನೇಕ ಕೆಲಸಗಳ ಕುರಿತು ಸರ್ಕಾರ ಗಮನ ಹರಿಸಬೇಕಾಗಿದ್ದು, ಈ ಮೂಲಕ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುತ್ತದೆ. ಕುಮಾರಸ್ವಾಮಿ ಅವರು ರಾಜಕೀಯ ರಂಗದ ಜೊತೆಗೆ ಸಿನಿಮಾಗಳನ್ನು ಮಾಡಿದ್ದು, ಚಿತ್ರರಂಗಕ್ಕೆ ಸ್ಪಂದಿಸುತ್ತಾರೆ ಎನ್ನುವ ವಿಶ್ವಾಸ ಚಿತ್ರರಂಗದವರದ್ದು.
ಈ ಹಿಂದೆ ಇದ್ದ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಚಿತ್ರರಂಗಕ್ಕೆ ಅನೇಕ ಸಹಾಯಗಳನ್ನು ಮಾಡಿದ್ದು, ಈ ಸರ್ಕಾರ ಕೂಡ ಅದೇ ರೀತಿಯ ಕಾರ್ಯಗಳನ್ನು ಮಾಡಲಿ ಎಂಬುದು ವಾಣಿಜ್ಯ ಮಂಡಳಿಯ ಉದ್ದೇಶವಾಗಿದೆ. ಇನ್ನು ಜೂನ್ 21ಕ್ಕೆ ನಡೆಯುವ ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಪ್ರಮುಖ ಕಲಾವಿದರು, ನಿರ್ಮಾಪಕರು, ನಿರ್ದೇಶಕರು, ವಿತರಕರು, ಪ್ರದರ್ಶಕರು ಭಾಗಿಯಾಗಲಿದ್ದಾರೆ.