Don't Miss!
- Automobiles Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'KGF-2' ಚಿತ್ರೀಕರಣಕ್ಕೆ 'ಅಧೀರ' ಸಂಜಯ್ ದತ್ ಎಂಟ್ರಿ ಯಾವಾಗ? ಇಲ್ಲಿದೆ ಮಾಹಿತಿ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷೆಯ ಕೆಜಿಎಫ್-2 ಸಿನಿಮಾದ ಕೊನೆಯ ಹಂತದ ಚಿತ್ರೀಕರಣಕ್ಕೆ ಸಿನಿಮಾತಂಡ ಸಜ್ಜಾಗಿದೆ. ಲಾಕ್ ಡೌನ್ ಬಳಿಕ ಮತ್ತೆ ಚಿತ್ರೀಕರಣ ಪ್ರಾರಂಭ ಮಾಡಿರುವ ಕೆಜಿಎಫ್ ತಂಡ ಮಂಗಳೂರು, ಬೆಂಗಳೂರು ಮತ್ತು ಹೈದರಾಬಾದ್ ನಲ್ಲಿ ಕೆಲವು ದೃಶ್ಯಗಳನ್ನು ಸೆರೆಹಿಡಿದೆ.
ಇದೀಗ ಸಂಜಯ್ ದತ್ ಎಂಟ್ರಿಗೆ ಕಾಯುತ್ತಿರುವ ಚಿತ್ರತಂಡ ಡಿಸೆಂಬರ್ ನಲ್ಲಿ ಕೊನೆಯ ಹಂತದ ಚಿತ್ರೀಕರಣ ಮಾಡಿ ಮುಗಿಸಲು ನಿರ್ಧರಿಸಿದೆ. ಕೆಜಿಎಫ್ ನ ಅಧೀರ ಸಂಜಯ್ ದತ್ ಡಿಸೆಂಬರ್ ನಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ನವೆಂಬರ್ ನಲ್ಲಿ ಸಂಜಯ್ ದತ್ ಚಿತ್ರೀಕರಣಕ್ಕೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ನವೆಂಬರ್ ನಲ್ಲಿ ಸಂಜುಬಾಬಾ ಚಿತ್ರೀಕರಣದಲ್ಲಿ ಭಾಗಿಯಾಗಿಲ್ಲ. ಇದೀಗ ಹೊಸ ಮಾಹಿತಿ ಪ್ರಕಾರ ಡಿಸೆಂಬರ್ ನಲ್ಲಿ ಭಾಗಿಯಾಗಲಿದ್ದಾರೆ.
ಕೆಜಿಎಫ್ 2 ನಲ್ಲಿ ರವೀನಾ ಟಂಡನ್ ಖಡಕ್ ಲುಕ್ ಅನಾವರಣ
ಕ್ಯಾನ್ಸರ್ ನಿಂದ ಗುಣಮುಖರಾಗಿರುವ ಸಂಜಬಾಬು, ಬಾಕಿ ಉಳಿದಿದ್ದ ಎಲ್ಲಾ ಸಿನಿಮಾಗಳ ಚಿತ್ರೀಕರಣ ಮುಗಿಸುತ್ತಿದ್ದಾರೆ. ಈಗಾಗಲೇ ಸಾಕಷ್ಟು ಸಿನಿಮಾಗಳ ಚಿತ್ರೀಕರಣ ಸಂಪೂರ್ಣ ಮಾಡಿರುವ ಸಂಜಯ್ ದತ್ ಸದ್ಯ ಕೆಜಿಎಫ್-2 ಚಿತ್ರೀಕರಣದಲ್ಲಿ ಭಾಗಿಯಾಗಲು ಸಜ್ಜಾಗಿದ್ದಾರೆ. ಯಶ್ ಮತ್ತು ಸಂಜಯ್ ದತ್ ಅವರ ಮುಖಾಮುಖಿ ದೃಶ್ಯವನ್ನು ಸೆರೆಹಿಡಿಯ ಬೇಕಿದ್ದು, ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಇನ್ನು ಕೆಲವು ಮೂಲಗಳ ಪ್ರಕಾರ ಮುಂಬೈನಲ್ಲೇ ಚಿತ್ರೀಕರಣ ನಡೆಯಲಿದೆ ಎನ್ನಲಾಗುತ್ತಿದೆ.
Recommended Video
ಇತ್ತೀಚಿಗಷ್ಟೆ ಸಂಜಯ್ ದತ್ ಕ್ಯಾನ್ಸರ್ ನಿಂದ ಗುಣಮುಖರಾಗಿರುವುದಾಗಿ ಬಹಿರಂಗ ಪಡಿಸಿದ್ದರು. 'ದೇವರು ತನ್ನ ಪ್ರಬಲ ಸೈನಿಕರಿಗೆ ಯುದ್ಧಗಳನ್ನು ನೀಡುತ್ತಾನೆ. ನಾನು ಈ ಯುದ್ಧವನ್ನು ಗೆದ್ದಿದ್ದೇನೆ. ನಿಮ್ಮೆಲ್ಲರ ನಂಬಿಕೆ ಮತ್ತು ಬೆಂಬಲ ವಿಲ್ಲದಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ. ಇಂತಹ ಕಠಿಣ ಸಮಯದಲ್ಲಿ ನನ್ನ ಕುಟುಂಬ, ಸ್ನೇಹಿತರು ಮತ್ತು ನನ್ನೊಂದಿಗೆ ನಿಂತಿರುವ ಎಲ್ಲಾ ಅಭಿಮಾನಿಗಳಿಗೆ ನಾನು ಕೃತಜ್ಞನಾಗಿದ್ದೇನೆ' ಎಂದು ಹೇಳಿದ್ದಾರೆ.