Don't Miss!
- Sports
ಫಿಟ್ನೆಸ್ ಪರೀಕ್ಷೆಯಲ್ಲಿ ಸಂಜು ಸ್ಯಾಮ್ಸನ್ ತೇರ್ಗಡೆ: ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಗೆ ಬುಮ್ರಾ ವಾಪಸ್?
- News
Bharat Jodo Yatra: ಭಾರತ್ ಜೋಡೋ ಯಾತ್ರೆಯ ಸಮಾರೋಪದಲ್ಲಿ 9 ಪಕ್ಷಗಳು ಗೈರು, 12 ಪಕ್ಷಗಳು ಹಾಜರು
- Automobiles
'ಮಹೀಂದ್ರಾ ಸ್ಕಾರ್ಪಿಯೊ ಎನ್' ಈ ರೂಪಾಂತರಗಳಿಗೆ ಬರೋಬ್ಬರಿ 2 ವರ್ಷ ಕಾಯಬೇಕು..
- Lifestyle
Horoscope Today 29 Jan 2023: ಭಾನುವಾರ: ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Finance
ಅಭ್ಯರ್ಥಿಯ ಸಂದರ್ಶನ ಮಾಡುತ್ತಿದ್ದಾಗಲೇ ಗೂಗಲ್ ಎಚ್ಆರ್ ವಜಾ!
- Technology
ಒಪ್ಪೋ ಕಂಪೆನಿಯ ಈ ಸ್ಮಾರ್ಟ್ಫೋನ್ ಮೇಲೆ ಭಾರಿ ನಿರೀಕ್ಷೆ? ಲಾಂಚ್ ಯಾವಾಗ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ದರ್ಶನ್ ಮತ್ತು ರಾಬರ್ಟ್ ತಂಡಕ್ಕೆ 'ಕೆಜಿಎಫ್' ನಿರ್ದೇಶಕ ಪ್ರಶಾಂತ್ ನೀಲ್ ಹೇಳಿದ್ದೇನು?
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಇಂದು (ಮಾರ್ಚ್ 11) ಕರ್ನಾಟಕ ಮತ್ತು ಬೇರೆ ಬೇರೆ ರಾಜ್ಯಗಳಲ್ಲಿ ಅದ್ದೂರಿಯಾಗಿ ರಿಲೀಸ್ ಆಗಿದೆ. ಬೆಳ್ಳಂಬೆಳಗ್ಗೆ ಅಭಿಮಾನಿಗಳು ಚಿತ್ರಮಂದಿರದ ಮುಂದೆ ಕ್ಯೂ ನಿಂತು ರಾಬರ್ಟ್ ನೋಡಿ ಸಂಭ್ರಮಿಸುತ್ತಿದ್ದಾರೆ.
Recommended Video
ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಿರುವ ರಾಬರ್ಟ್ ಸಿನಿಮಾಗೆ ಎಲ್ಲಾ ಕಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡದ ಜೊತೆಗೆ ತೆಲುಗಿನಲ್ಲೂ ದೊಡ್ಡ ಮಟ್ಟದಲ್ಲಿ ತೆರೆಗೆ ಬಂದಿರುವ ರಾಬರ್ಟ್ ಚಿತ್ರಕ್ಕೆ ಅಭಿಮಾನಿಗಳು ಮಾತ್ರವಲ್ಲದೇ ಸಿನಿ ಗಣ್ಯರು ಸಹ ಶುಭಾಶಯ ತಿಳಿಸುತ್ತಿದ್ದಾರೆ.
ಟ್ವಿಟ್ಟರ್
ವಿಮರ್ಶೆ:
ರಾಬರ್ಟ್
ಚಿಂದಿ,
ಉಮಾಪತಿ
ಗಿಫ್ಟ್
ಇದು,
ತರುಣ್ಗೆ
ಕ್ರೆಡಿಟ್
ಈಗಾಗಲೇ ಅನೇಕ ನಿರ್ದೇಶಕರು ಮತ್ತು ಕಲಾವಿದರು ರಾಬರ್ಟ್ ತಂಡಕ್ಕೆ ವಿಶ್ ಮಾಡಿದ್ದಾರೆ. ಇದೀಗ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಸಹ ರಾಬರ್ಟ್ ತಂಡಕ್ಕೆ ಶುಭ ಕೋರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಪ್ರಶಾಂತ್ ನೀಲ್, 'ರಾಬರ್ಟ್ ತಂಡಕ್ಕೆ ಒಳ್ಳೆಯದಾಗಲಿ. ದರ್ಶನ್ ಸರ್ ಅವರಿಗೆ ಅಭಿನಂದನೆಗಳು. ತರುಣ್ ಸುಧೀರ್ ಮತ್ತು ಉಮಾಪತಿ ಅವರಿಗೂ ಅಭಿನಂದನೆಗಳು. ರಾಬರ್ಟ್ ಗ್ರ್ಯಾಂಡ್ ಆಗಿ ತೆರೆಗೆ ಬಂದಿದೆ. ಇಂದು ಎರಡು ದೊಡ್ಡ ಹಬ್ಬ' ಎಂದು ಟ್ವೀಟ್ ಮಾಡಿದ್ದಾರೆ.
ಪ್ರಶಾಂತ್ ನೀಲ್ ಟ್ವೀಟ್ ಮಾಡುತ್ತಿದ್ದಂತೆ ಅಭಿಮಾನಿಗಳು ಕೆಜಿಎಫ್-2 ಅಪ್ ಡೇಟ್ ಕೇಳಿ ಕಾಮೆಂಟ್ ಮಾಡುತ್ತಿದ್ದಾರೆ. ಮಾರ್ಚ್ 13ಕ್ಕೆ ಕೆಜಿಎಫ್-2 ಸಿನಿಮಾದ ಬಗ್ಗೆ ಮಾಹಿತಿ ನೀಡಿ ಎಂದು ಕೇಳಿಕೊಳ್ಳುತ್ತಿದ್ದಾರೆ.
ಇನ್ನು ರಾಬರ್ಟ್ ಸಿನಿಮಾದ ಮೊದಲ ಪ್ರದರ್ಶನ ಈಗಾಗಲೇ ಮುಕ್ತಾಯವಾಗಿದೆ. ಬೆಳ್ಳಂಬೆಳಗ್ಗೆ ಸಿನಿಮಾ ನೋಡಿದ ಅಭಿಮಾನಿಗಳು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಅತೀ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ಮೂಲಕ ದಾಖಲೆ ನಿರ್ಮಿಸಿದೆ.