Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕೆಜಿಎಫ್' ಚಿತ್ರದ ಸಹ ನಟ ನಿಧನಕ್ಕೆ ಪ್ರಶಾಂತ್ ನೀಲ್ ಸಂತಾಪ
'ಕೆಜಿಎಫ್' ಸಿನಿಮಾ ಇಡೀ ಭಾರತದಲ್ಲಿಯೇ ದೊಡ್ಡ ಪ್ರಶಂಸೆ ಪಡೆದು ಮುನ್ನುಗುತ್ತಿದೆ. ಸಿನಿಮಾ ಕೋಟಿ ಕೋಟಿ ಗಳಿಕೆ ಮಾಡುತ್ತಿದ್ದು, ಚಿತ್ರತಂಡದ ಖುಷಿಗೆ ಕಾರಣವಾಗಿದೆ.
ಒಂದು ಕಡೆ ಖುಷಿ ಇದ್ದರೆ, ಮತ್ತೊಂದು ಕಡೆ 'ಕೆಜಿಎಫ್' ತಂಡದ ದುಃಖಕ್ಕೆ ಕಾರಣ ಆಗಿದ್ದು ಸಹ ನಟನ ಸಾವು. 'ಕೆಜಿಎಫ್' ಸಿನಿಮಾದಲ್ಲಿ ನಟಿಸಿದ್ದ ನಟ ಲಕ್ಷ್ಮಿಪತಿ ಅವರು ವಿಧಿವಶರಾಗಿದ್ದಾರೆ. ಚಿತ್ರದಲ್ಲಿ ಹುಚ್ಚನ ಪಾತ್ರ ಮಾಡಿದ್ದ ಅವರು ಒಂದು ದೃಶ್ಯದಲ್ಲಿ ಅದ್ಬುತವಾಗಿ ನಟಿಸಿದ್ದರು.
ಕಟ್ಟು ಕಥೆಗಳನ್ನ ನಿಜ ಮಾಡಿದ ಯಶ್ ಅಂಡ್ ಟೀಂ.!
ಲಕ್ಷ್ಮಿಪತಿ ಅವರ ಆ ವಿಡಿಯೋದ ಜೊತೆಗೆ ಸಾವಿನ ವಿಷಯವನ್ನು ಸಿನಿಮಾಟೋಗ್ರಾಫರ್ ಭುವನ್ ಗೌಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ನಿರ್ದೇಶಕ ಪ್ರಶಾಂತ್ ನೀಲ್ ಸಹ ಟ್ವಿಟ್ಟರ್ ನಲ್ಲಿ ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
RIP sir🙏🙏🙏🙏🙏 https://t.co/XNO4PC6jBD
— Prashanth Neel (@prashanth_neel) December 30, 2018
ಟ್ವಿಟ್ಟರ್ ನಲ್ಲಿ ಭುವನ್ ಗೌಡ ಅವರ ವಿಡಿಯೋಗೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. 'ಕೆಜಿಎಫ್' ಸಿನಿಮಾದ ನೋಡಿದ ಇವರ ಪಾತ್ರ ಮರೆಯಲು ಸಾಧ್ಯವಿಲ್ಲ ಎಂದಿದ್ದಾರೆ.