Don't Miss!
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- News India Weather: ಮುಂದಿನ ಮೂರು ದಿನ ದೇಶದ ಈ ಭಾಗದಲ್ಲಿ ಅಬ್ಬರದ ಮಳೆ ಮುನ್ಸೂಚನೆ, ಎಲ್ಲಿಲ್ಲಿ?-ಮಾಹಿತಿ
- Finance Shilpa Shetty: ಇಡಿಯಿಂದ ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ಅವರ 98 ಕೋಟಿ ಮೌಲ್ಯದ 2 ಫ್ಲಾಟ್, ಷೇರು ವಶ
- Technology Realme: ರಿಯಲ್ಮಿ C65 5G ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! 6.67″ 120Hz ಡಿಸ್ಪ್ಲೆ...
- Lifestyle ಮಾಲ್ನೊಳಗೆ ನುಗ್ಗಿದ 100ಕ್ಕೂ ಹೆಚ್ಚು ನಾಯಿಗಳು..! ಕೋಳಿ ಕಾಲು ತೋರಿಸಿ ಹಿಡಿದ ಜನ..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರವಿ ಬಸ್ರೂರ್ ಹೊಸ ಸ್ಟೂಡಿಯೋ ಹೀಗಿದೆ ನೋಡಿ
'ಕೆಜಿಎಫ್' ಸಿನಿಮಾದ ಸಂಗೀತ ನಿರ್ದೇಶಕ ರವಿ ಬಸ್ರೂರ್ ಹೊಸ ರೆಕಾರ್ಡಿಂಗ್ ಸ್ಟೂಡಿಯೋ ಉದ್ಘಾಟನೆ ಮಾಡಿದ್ದಾರೆ. ನಿನ್ನೆ ತಮ್ಮ ಹೊಸ ಸ್ಟೂಡಿಯೋವನ್ನು ಲಾಂಚ್ ಮಾಡಿದ್ದು, ಫೇಸ್ ಬುಕ್ ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಬೆಂಗಳೂರಿನ ನಾಗರಬಾವಿಯಲ್ಲಿ ಈ ಸ್ಟೂಡಿಯೊ ಇದೆ. ಆಧುನಿಕ ತಂತ್ರಜ್ಙಾನ ಬಳಸಿ ಇದನ್ನು ನಿರ್ಮಿಸಲಾಗಿದೆ. ಸ್ಟೂಡಿಯೊ ತುಂಬ ಹೆಚ್ಚು ಕಂಪು ಹಾಗೂ ಗೋಲ್ಡನ್ ಬಣ್ಣ ಬಳಸಲಾಗಿದೆ. ಹೊಳೆಯುವ ಲೈಟಿಂಗ್ ಮೂಲಕ ಸ್ಟೂಡಿಯೊ ಅಲಂಕಾರ ಮಾಡಲಾಗಿದೆ.
ಕುಂದಾಪುರ ಜನತೆ ಬಗ್ಗೆ ಬೇಸರ: ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ರವಿ ಬಸ್ರೂರ್
ರವಿ ಬಸ್ರೂರ್ ಗೆ ಬುದ್ಧ ಎಂದರೆ ಬಹಳ ಇಷ್ಟ. ಹಾಗಾಗಿ, ತಮ್ಮ ಸ್ಟೂಡಿಯೊದಲ್ಲಿ ಬುದ್ಧನ ಮೂರ್ತಿಯನ್ನು ಇಟ್ಟುಕೊಂಡಿದ್ದಾರೆ. ''ಮೌನದಿಂದ ಕೆಲಸ ಮಾಡು.. ನಿನ್ನ ಯಶಸ್ಸು ಮಾತನಾಡಲಿ'' ಎನ್ನುವ ಸಾಲನ್ನು ಸ್ಟೂಡಿಯೋದ ಗೋಡೆ ಮೇಲೆ ಬರೆಯಲಾಗಿದೆ.
ಈ ಹೊಸ ಸ್ಟೂಡಿಯೊದಲ್ಲಿ ಸದ್ಯ 'ಕೆಜಿಎಫ್ 2' ಸಿನಿಮಾದ ಸಂಗೀತ ಕಾರ್ಯ ನಡೆಯುತ್ತಿದೆ. ಅಂದಹಾಗೆ, ರವಿ ಬಸ್ರೂರ್ 'ಉಗ್ರಂ' ಸಿನಿಮಾದ ಮೂಲಕ ತಮ್ಮ ಕೆರಿಯರ್ ಶುರು ಮಾಡಿದರು. ನಂತರ 'ಅಂಜನಿಪುತ್ರ', 'ಮಫ್ತಿ', 'ಕರ್ವ', 'ಬಜಾರ್', 'ಕೆಜಿಎಫ್' ಸಿನಿಮಾಗಳಿಗೆ ಸಂಗೀತ ನೀಡಿದರು.
ನನ್ನ ಕಣ್ಣೀರು ಸಿನಿಮಾ ಸೋಲಿನಿಂದ ಅಲ್ಲ: ನೋವಿನ ಕಾರಣ ಹೇಳಿದ ರವಿ ಬಸ್ರೂರ್
ಸಂಗೀತದ ಜೊತೆಗೆ ಸಿನಿಮಾದ ನಿರ್ದೇಶನ ಹಾಗೂ ನಟನೆಯಲ್ಲಿಯೂ ರವಿ ಬಸ್ರೂರ್ ತೊಡಗಿಸಿಕೊಂಡಿದ್ದಾರೆ. 'ಗಿರ್ಮಿಟ್' ಇವರ ಇತ್ತೀಚಿಗೆ ನಿರ್ದೇಶನದ ಸಿನಿಮಾವಾಗಿದೆ.