Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟೀಸರ್ ನಿರೀಕ್ಷೆಯಲ್ಲಿದ್ದವರಿಗೆ ಊಹೆನೇ ಮಾಡದಂತ ಸರ್ಪ್ರೈಸ್ ನೀಡಿದ ಕೆಜಿಎಫ್
ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಹಾಗೂ ಕೆಜಿಎಫ್ ಚಾಪ್ಟರ್ 2 ಚಿತ್ರಕ್ಕಾಗಿ ಎದುರು ನೋಡುತ್ತಿರುವ ಚಿತ್ರಪ್ರೇಮಿಗಳಿಗೆ ಹೊಂಬಾಳೆ ಫಿಲಂಸ್ ಸರ್ಪ್ರೈಸ್ ನೀಡಿದೆ.
Recommended Video
ಜನವರಿ 8 ರಂದು ನಟ ಯಶ್ ಅವರ ಹುಟ್ಟುಹಬ್ಬವಿದೆ. ಈ ವಿಶೇದ ದಿನ ಪ್ರಯುಕ್ತ ಕೆಜಿಎಫ್ ಚಾಪ್ಟರ್ 2 ಸಿನಿಮಾದ ಟೀಸರ್ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಯಶ್ ಬರ್ತಡೇಗಾಗಿ ಅತಿ ದೊಡ್ಡ ಅಭಿಮಾನಿ ಬಳಗ ಕಾಯುತ್ತಿದೆ. ಇಂತಹ ಸಮಯದಲ್ಲಿ ಯಾರೂ ನಿರೀಕ್ಷೆ ಮಾಡದಂತಹ ಮತ್ತೊಂದು ಸರ್ಪ್ರೈಸ್ ಕೊಟ್ಟಿದ್ದಾರೆ ನಿರ್ಮಾಪಕರು.
ಕೆಜಿಎಫ್ 2 ಚಿತ್ರೀಕರಣ ಮುಗಿದರೂ ಮನೆಗೆ ಹೋಗದೆ ಹೋಟೆಲ್ನಲ್ಲಿ ಉಳಿದ ಯಶ್!?
ಹೊಂಬಾಳೆ ಫಿಲಂಸ್ ವತಿಯಿಂದ 'ಕೆಜಿಎಫ್ ಟೈಮ್ಸ್' ಎಂಬ ಹೆಸರಿನಲ್ಲಿ ವಿಶೇಷ ಪತ್ರಿಕೆ ಪೋಸ್ಟರ್ ಅನಾವರಣಗೊಂಡಿದೆ. ರಾಕಿಭಾಯ್ ನಾಯಕನಾ ಅಥವಾ ಖಳನಾಯಕನಾ ಎಂಬ ಶೀರ್ಷಿಕೆಯಲ್ಲಿ ಪ್ರಮುಖ ಸುದ್ದಿಯೊಂದು ಪ್ರಕಟವಾಗಿದೆ. ಖುದ್ದು ಹೊಂಬಾಳೆ ಸಂಸ್ಥೆಯ ಪತ್ರಿಕೆಯ ಮುಖಪುಟವನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದೆ.
ಕೆಜಿಎಫ್ ಸಿನಿಮಾ ವಿಚಾರದಲ್ಲಿ ನಿರ್ಮಾಪಕರು ಮಾಡುತ್ತಿರುವ ಪ್ರಚಾರದ ವಿಧಾನಕ್ಕೆ ಇಡೀ ಚಿತ್ರರಂಗ ಅಚ್ಚರಿ ಮತ್ತು ಕುತೂಹಲದಿಂದ ನೋಡುತ್ತಿದೆ.
ಅಂದ್ಹಾಗೆ, ಜನವರಿ ಎರಡನೇ ವಾರದೊಳಗೆ ಕೆಜಿಎಫ್ ಚಿತ್ರತಂಡ ಕುಂಬಳಕಾಯಿ ಹೊಡೆಯಲಿದೆ ಎಂದು ಹೇಳಲಾಗುತ್ತಿದೆ. ಶೂಟಿಂಗ್ ಮುಗಿಯುತ್ತಿದ್ದಂತೆ ಬಿಡುಗಡೆಗೆ ಪ್ಲಾನ್ ಮಾಡಿ ಪ್ರಚಾರ ಆರಂಭಿಸಲಿದ್ದಾರೆ.
ಕೆಜಿಎಫ್ ಟೀಸರ್ಗೂ ಮೊದಲೇ ಕುತೂಹಲ ಹೆಚ್ಚಿಸಿದ ಪ್ರಶಾಂತ್ ನೀಲ್
ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ತಯಾರಾಗಿರುವ ಈ ಚಿತ್ರ ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ತೆರೆಕಾಣಲಿದೆ. ಯಶ್, ಸಂಜಯ್ ದತ್, ರವೀನಾ ಅಂಡನ್, ಪ್ರಖಾಶ್ ರಾಜ್, ಶ್ರೀನಿಧಿ ಶೆಟ್ಟಿ ಸೇರಿದಂತೆ ಹಲವು ಕಲಾವಿದರು ಈ ಚಿತ್ರದಲ್ಲೂ ಮುಂದುವರಿಯಲಿದ್ದಾರೆ.