Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ಜೊತೆ ಕ್ರಿಕೆಟ್ ಅಭ್ಯಾಸ ಮಾಡಿದ ಸ್ಯಾಂಡಲ್ ವುಡ್ ಸ್ಟಾರ್
Recommended Video
ಸ್ಯಾಂಡಲ್ ವುಡ್ ನಟರ ಆಯೋಜನೆಯಲ್ಲಿ ನಡೆಯಲಿರುವ ಕೆಸಿಸಿ ಕ್ರಿಕೆಟ್ ಟೂರ್ನಿ ಸೆಪ್ಟಂಬರ್ 8 ರಂದು ಆರಂಭವಾಗಲಿದೆ. ಸುದೀಪ್, ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಯಶ್, ಉಪೇಂದ್ರ ಹಾಗೂ ಗಣೇಶ್ ಸೇರಿದಂತೆ ಹಲವು ಕನ್ನಡ ನಟರು ಈ ಟೂರ್ನಿ ಆಡಲಿದ್ದಾರೆ.
ಈಗಾಗಲೇ ಕಿಚ್ಚ ಸುದೀಪ್ ಸೇರಿದಂತೆ ಎಲ್ಲರೂ ಅಭ್ಯಾಸ ಶುರು ಮಾಡಿದ್ದಾರೆ. ನೆಲಮಂಗಲದ ಮೈದಾನದಲ್ಲಿ ಸುದೀಪ್ ಪ್ರಾಕ್ಟೀಸ್ ಮಾಡುತ್ತಿದ್ದು, ಸ್ಯಾಂಡಲ್ ವುಡ್ ನ ಮತ್ತೊಬ್ಬ ಸ್ಟಾರ್ ನಟ ಕಿಚ್ಚನಿಗೆ ಸಾಥ್ ನೀಡಿದ್ದಾರೆ.
ಹೌದು, ಗೋಲ್ಡನ್ ಸ್ಟಾರ್ ಗಣೇಶ್ ಇಂದು ಸುದೀಪ್ ಜೊತೆ ಸೇರಿ ಕ್ರಿಕೆಟ್ ಅಭ್ಯಾಸ ಮಾಡಿದ್ದಾರೆ. ಗಣೇಶ್ ಬೌಲಿಂಗ್ ಮಾಡಿರುವ ವಿಡಿಯೋ ವೈರಲ್ ಆಗಿದೆ.
'ಕೆಸಿಸಿ' ಟೂರ್ನಿಯ ವೇಳಾಪಟ್ಟಿ ನೋಡಿ: ಯಾರ ಪಂದ್ಯ ಯಾರ ವಿರುದ್ಧ.?
ಗಣೇಶ್ ಒಡೆಯರ್ ಚಾರ್ಜರ್ಸ್ ತಂಡದ ಪರವಾಗಿ ಅಖಾಡಕ್ಕೆ ಇಳಿಯಲಿದ್ದು, ಸುದೀಪ್ ಕದಂಬ ಲಯನ್ಸ್ ಪರವಾಗಿ ಆಡಲಿದ್ದಾರೆ. ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ವಿಜಯನಗರ ಪೇಟ್ರಿಯಟ್ಸ್, ಪುನೀತ್ ರಾಜಕುಮಾರ್ ಗಂಗಾ ವಾರಿಯರ್ಸ್, ಯಶ್ ರಾಷ್ಟ್ರಕೂಟ ಪ್ಯಾಂಥರ್ಸ್, ಉಪೇಂದ್ರ ಹೊಯ್ಸಳ ಈಗಲ್ಸ್ ತಂಡದ ಪರವಾಗಿ ಅಖಾಡಕ್ಕಿಳಿಯಲಿದ್ದಾರೆ.
ಈ ಬಾರಿಯ ವಿಶೇಷ ಅಂದ್ರೆ, ಅಂತಾರಾಷ್ಟ್ರೀಯ ಆಟಗಾರರು ಕೂಡ ಆಡಲಿದ್ದಾರೆ. ಭಾರತದ ಡ್ಯಾಷಿಂಗ್ ಒಪನರ್ ವಿರೇಂದ್ರ ಸೆಹ್ವಾಗ್ ಕದಂಬ ಲಯನ್ಸ್ ನಲ್ಲಿ ಆಟವಾಡಿದ್ರೆ, ಹರ್ಷೆಲ್ ಗಿಬ್ಸ್ ಹೊಯ್ಸಳ ಈಗಲ್ಸ್, ತಿಲಕರತ್ನೆ ದಿಲ್ಸ್ಯಾನ್ ಒಡೆಯರ್ ಚಾರ್ಜರ್ಸ್, ಲ್ಯಾನ್ಸ್ ಕ್ಲೂಸ್ನರ್ ಗಂಗಾ ವಾರಿಯರ್ಸ್, ಓವೈ ಷಾ ರಾಷ್ಟ್ರಕೂಟ ಪ್ಯಾಂಥರ್ಸ್ ಹಾಗೂ ಆಯಡಂ ಗಿಲ್ಕ್ರಿಸ್ಟ್ ವಿಜಯನಗರ ಪೇಟ್ರಿಯಟ್ಸ್ ತಂಡದಲ್ಲಿ ಆಡಲಿದ್ದಾರೆ.