Don't Miss!
- Automobiles Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- News ಏಪ್ರಿಲ್ 28ಕ್ಕೆ ಬೆಣ್ಣೆನಗರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಸಿದ್ಧತೆ ಹೇಗಿದೆ? ಮಾಹಿತಿ
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ಜೊತೆ ಕ್ರಿಕೆಟ್ ಅಭ್ಯಾಸ ಮಾಡಿದ ಸ್ಯಾಂಡಲ್ ವುಡ್ ಸ್ಟಾರ್
Recommended Video
ಸ್ಯಾಂಡಲ್ ವುಡ್ ನಟರ ಆಯೋಜನೆಯಲ್ಲಿ ನಡೆಯಲಿರುವ ಕೆಸಿಸಿ ಕ್ರಿಕೆಟ್ ಟೂರ್ನಿ ಸೆಪ್ಟಂಬರ್ 8 ರಂದು ಆರಂಭವಾಗಲಿದೆ. ಸುದೀಪ್, ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಯಶ್, ಉಪೇಂದ್ರ ಹಾಗೂ ಗಣೇಶ್ ಸೇರಿದಂತೆ ಹಲವು ಕನ್ನಡ ನಟರು ಈ ಟೂರ್ನಿ ಆಡಲಿದ್ದಾರೆ.
ಈಗಾಗಲೇ ಕಿಚ್ಚ ಸುದೀಪ್ ಸೇರಿದಂತೆ ಎಲ್ಲರೂ ಅಭ್ಯಾಸ ಶುರು ಮಾಡಿದ್ದಾರೆ. ನೆಲಮಂಗಲದ ಮೈದಾನದಲ್ಲಿ ಸುದೀಪ್ ಪ್ರಾಕ್ಟೀಸ್ ಮಾಡುತ್ತಿದ್ದು, ಸ್ಯಾಂಡಲ್ ವುಡ್ ನ ಮತ್ತೊಬ್ಬ ಸ್ಟಾರ್ ನಟ ಕಿಚ್ಚನಿಗೆ ಸಾಥ್ ನೀಡಿದ್ದಾರೆ.
ಹೌದು, ಗೋಲ್ಡನ್ ಸ್ಟಾರ್ ಗಣೇಶ್ ಇಂದು ಸುದೀಪ್ ಜೊತೆ ಸೇರಿ ಕ್ರಿಕೆಟ್ ಅಭ್ಯಾಸ ಮಾಡಿದ್ದಾರೆ. ಗಣೇಶ್ ಬೌಲಿಂಗ್ ಮಾಡಿರುವ ವಿಡಿಯೋ ವೈರಲ್ ಆಗಿದೆ.
'ಕೆಸಿಸಿ' ಟೂರ್ನಿಯ ವೇಳಾಪಟ್ಟಿ ನೋಡಿ: ಯಾರ ಪಂದ್ಯ ಯಾರ ವಿರುದ್ಧ.?
ಗಣೇಶ್ ಒಡೆಯರ್ ಚಾರ್ಜರ್ಸ್ ತಂಡದ ಪರವಾಗಿ ಅಖಾಡಕ್ಕೆ ಇಳಿಯಲಿದ್ದು, ಸುದೀಪ್ ಕದಂಬ ಲಯನ್ಸ್ ಪರವಾಗಿ ಆಡಲಿದ್ದಾರೆ. ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ವಿಜಯನಗರ ಪೇಟ್ರಿಯಟ್ಸ್, ಪುನೀತ್ ರಾಜಕುಮಾರ್ ಗಂಗಾ ವಾರಿಯರ್ಸ್, ಯಶ್ ರಾಷ್ಟ್ರಕೂಟ ಪ್ಯಾಂಥರ್ಸ್, ಉಪೇಂದ್ರ ಹೊಯ್ಸಳ ಈಗಲ್ಸ್ ತಂಡದ ಪರವಾಗಿ ಅಖಾಡಕ್ಕಿಳಿಯಲಿದ್ದಾರೆ.
ಈ ಬಾರಿಯ ವಿಶೇಷ ಅಂದ್ರೆ, ಅಂತಾರಾಷ್ಟ್ರೀಯ ಆಟಗಾರರು ಕೂಡ ಆಡಲಿದ್ದಾರೆ. ಭಾರತದ ಡ್ಯಾಷಿಂಗ್ ಒಪನರ್ ವಿರೇಂದ್ರ ಸೆಹ್ವಾಗ್ ಕದಂಬ ಲಯನ್ಸ್ ನಲ್ಲಿ ಆಟವಾಡಿದ್ರೆ, ಹರ್ಷೆಲ್ ಗಿಬ್ಸ್ ಹೊಯ್ಸಳ ಈಗಲ್ಸ್, ತಿಲಕರತ್ನೆ ದಿಲ್ಸ್ಯಾನ್ ಒಡೆಯರ್ ಚಾರ್ಜರ್ಸ್, ಲ್ಯಾನ್ಸ್ ಕ್ಲೂಸ್ನರ್ ಗಂಗಾ ವಾರಿಯರ್ಸ್, ಓವೈ ಷಾ ರಾಷ್ಟ್ರಕೂಟ ಪ್ಯಾಂಥರ್ಸ್ ಹಾಗೂ ಆಯಡಂ ಗಿಲ್ಕ್ರಿಸ್ಟ್ ವಿಜಯನಗರ ಪೇಟ್ರಿಯಟ್ಸ್ ತಂಡದಲ್ಲಿ ಆಡಲಿದ್ದಾರೆ.